Advertisement
MIRROR FOCUS

ಕುಕ್ಕೆ ಸುಬ್ರಹ್ಮಣ್ಯ | ನದಿಗೆ ಪ್ಲಾಸ್ಟಿಕ್‌ ಎಸೆಯಬೇಡಿ…| ದಂಡ ಕಟ್ಟಲು ಸಿದ್ಧರಾಗಿ…! | ತ್ಯಾಜ್ಯ ಎಸೆದ ವ್ಯಕ್ತಿಗೆ ದಂಡ ವಿಧಿಸಿದ ಪಂಚಾಯತ್‌ |

Share

ಕುಕ್ಕೆ ಸುಬ್ರಹ್ಮಣ್ಯ ಪವಿತ್ರ ನಾಗಕ್ಷೇತ್ರ. ನಾಡಿನ ವಿವಿದೆಡೆಯಿಂದ ಭಕ್ತಾದಿಗಳು ಆಗಮಿಸುತ್ತಾರೆ. ನದಿ ಸೇರಿದಂತೆ ಆಸುಪಾಸಿನಲ್ಲಿ ಪ್ಲಾಸ್ಟಿಕ್‌ ಸೇರಿದಂತೆ ಮಲಿನ ಹೆಚ್ಚಾಗುತ್ತಿದೆ. ಪ್ಲಾಸ್ಟಿಕ್‌ ಎಸೆಯದಂತೆ, ಮಲಿನ ಮಾಡದಂತೆ ಜಾಗೃತಿ ಮಾಡುತ್ತಿದ್ದರೂ ಭಕ್ತಾದಿಗಳಿಗೆ ಅರ್ಥವೇ ಆಗುತ್ತಿಲ್ಲ. ಈಚೆಗಷ್ಟೇ ಲೋಡು ಗಟ್ಟಲೆ ಪ್ಲಾಸ್ಟಿಕ್‌ ಸಂಗ್ರಹ ಮಾಡಲಾಗಿತ್ತು. ಹಾಗಿದ್ದರೂ ಮತ್ತೆ ಪ್ಲಾಸ್ಟಿಕ್‌ ಎಸೆಯುವುದರ ವಿರುದ್ಧ ಕ್ರಮವಾಗಬೇಕಿದೆ. ಇದೀಗ ದಂಡ ವಿಧಿಸುವ ಮೂಲಕ ತ್ಯಾಜ್ಯ ಎಸೆಯುವದನ್ನು ತಡೆಯಲು ಸುಬ್ರಹ್ಮಣ್ಯ ಗ್ರಾಪಂ ಮುಂದಾಗಿದೆ. 

ಕುಕ್ಕೆ ಸುಬ್ರಹ್ಮಣ್ಯದ ಸವಾರಿ ಮಂಟಪ ಬಳಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಪ್ಲಾಸ್ಟಿಕ್ ಹಾಗೂ ಇನ್ನಿತರ ತ್ಯಾಜ್ಯಗಳನ್ನು ದರ್ಪಣ ತೀರ್ಥ ನದಿಗೆ ಎಸೆಯುತ್ತಿರುವುದನ್ನು ಪತ್ತೆ ಮಾಡಿದ ಪಂಚಾಯತ್‌ ಸಿಬಂದಿಗಳು ಒಂದು ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.ಮುಂದಿನ ದಿನಗಳಲ್ಲಿ ಈ ರೀತಿಯಾಗಿ ನದಿಗೆ, ರಸ್ತೆಯಲ್ಲಿ, ಹಾಗೂ ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಸೇರಿದಂತೆ ಎಲ್ಲಾ ರೀತಿಯ ತ್ಯಾಜ್ಯ ಗಳನ್ನು ಎಸೆಯುವುದರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪಂಚಾಯತ್‌ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಹಲವು ಸಮಯಗಳ ಹಿಂದೆಯೇ ಇಂತಹದ್ದೊಂದು ಕ್ರಮವನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ ಕೈಗೊಳ್ಳಬೇಕಾಗಿತ್ತು. ಈಗಲಾದರೂ ದಂಡದ ಮೂಲಕ ಎಚ್ಚರಿಕೆಯನ್ನು ನೀಡುತ್ತಿದೆ. ರಾಜ್ಯದ ವಿವಿದೆಡೆಯಿಂದ ಸಾಕಷ್ಟು ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಹೀಗಾಗಿ ರಾಜ್ಯಮಟ್ಟದಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕಾದ ಅಗತ್ಯ ಇದೆ.  ಸುಬ್ರಹ್ಮಣ್ಯದ ಸ್ವಚ್ಛತೆ ಅತೀ ಅಗತ್ಯವಾಗಿದೆ, ನದಿ ಹಾಗೂ ಸುಬ್ರಹ್ಮಣ್ಯದ ಆಸುಪಾಸುಗಳಲ್ಲಿ  ಮಲಿನವಾಗದಂತೆ ಎಚ್ಚರಿಕೆ ವಹಿಸಬೇಕಾಗಿದೆ. ಪ್ರತೀ ನಾಗರಿಕರ ಜವಾಬ್ದಾರಿ ಇದಾಗಿದೆ. ಸ್ವಚ್ಛತೆಯ ಬಗ್ಗೆ ಸುಬ್ರಹ್ಮಣ್ಯದ ಪ್ರತೀ ವಸತಿಗೃಹದಲ್ಲಿ ಅರಿವು ಮೂಡಿಸುವ ಫಲಕಗಳ ಅಳವಡಿಕೆ ಹಾಗೂ ತ್ಯಾಜ್ಯ, ಪ್ಲಾಸ್ಟಿಕ್‌ ಎಸೆದರೆ, ನದಿ ಮಲಿನ ಮಾಡಿದರೆ ದಂಡ ವಿಧಿಸುವ ಬಗ್ಗೆ ತಿಳುವಳಿಕೆ ನೀಡುವ ಮೂಲಕ ಸ್ವಚ್ಛತೆಯ ಹೆಜ್ಜೆ ಇಡಬೇಕಾಗಿದೆ.

Kukke Subrahmanya, renowned as a famous Nagakshetra, attracts devotees from all over the country who come to seek blessings. Unfortunately, the influx of visitors has led to an increase in pollution, including plastic waste, in the surrounding areas and the river. Despite ongoing awareness campaigns urging devotees to refrain from littering and to avoid plastic pollution, many visitors continue to disregard these guidelines. A significant amount of plastic waste was recently collected, underscoring the severity of the issue. In response, the Subrahmanya Gramam Panchayath has taken the commendable step of imposing fines to curb waste dumping and protect the sacred site’s environment.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago