ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಆಸುಪಾಸಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೇವಲ ಮೂರು ಗಂಟೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ 265 ಮಿಮೀ ಗಿಂತಲೂ ಅಧಿಕ ಮಳೆಯಾಗಿದೆ. ಸಮೀಪದ ಕಲ್ಲಾಜೆಯಲ್ಲಿ 400 ಮಿಮೀ ಮಳೆಯಾಗಿದೆ. ಇದನ್ನು ಮೇಘಸ್ಫೋಟ ಎಂದೇ ಹೇಳಲಾಗುತ್ತಿದೆ. ಇದೀಗ ಕುಮಾರಧಾರ ಬಳಿಯ ಪರ್ವತಮುಖಿ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಜರಿದು ಬಿದ್ದು, ಮನೆ ಸಂಪೂರ್ಣವಾಗಿ ನಾಶಗೊಂಡಿದ್ದು, ಮನೆ ಮಂದಿ ಮಣ್ಣಿನಡ್ಡಿ ಸಿಲುಕಿದ್ದಾರೆ. ಮಕ್ಕಳು ಸಹಿತ ಮನೆಯಲ್ಲಿ ವಾಸಿಸುತ್ತಿದ್ದರು.
ಸುಮಾರು ಮೂರು ತಾಸುಗಳ ನಿರಂತರವಾದ ಧಾರಾಕಾರ ಮಳೆಗೆ ಕುಮಾರಧಾರಾ ಬಳಿಯ ಪರ್ವತಮುಖಿ ಎಂಬಲ್ಲಿನ ಕುಶಾಲಪ್ಪ ಎಂಬವರ ಮನೆಯ ಹಿಂಬದಿಯ ಗುಡ್ಡ ಕುಸಿದು ಬಿದ್ದಿದೆ. ಮನೆಯಲ್ಲಿ ಇಬ್ಬರು ಮಕ್ಕಳು ಓರ್ವ ವೃದ್ದೆ ಸಹಿತ ನಾಲ್ಕು ಮಂದಿ ವಾಸಿಸುತ್ತಿದ್ದರು. ಮಕ್ಕಳು ಮಣ್ಣಿನಡಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಮಣ್ಣಿನಡಿ ಸಿಲುಕಿರುವವರನ್ನು ಹೊರತೆಗೆಯಲು ಸಾಹಸ ಪಡಲಾಗುತ್ತಿದೆ. ಸ್ಥಳೀಯರು ನಿರಂತರ ಪ್ರಯತ್ನದಲ್ಲಿದ್ದಾರೆ. ಭಾರೀ ಮಳೆಗೆ ರಸ್ತೆ ಬ್ಲಾಕ್ ಆಗಿರುವುದರಿಂದ ರಕ್ಷಣಾ ಕಾರ್ಯಕ್ಕೆ ಧಾವಿಸಲು ಅಡ್ಡಿಯಾಗಿದೆ.ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…