ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಆಸುಪಾಸಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೇವಲ ಮೂರು ಗಂಟೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ 265 ಮಿಮೀ ಗಿಂತಲೂ ಅಧಿಕ ಮಳೆಯಾಗಿದೆ. ಸಮೀಪದ ಕಲ್ಲಾಜೆಯಲ್ಲಿ 400 ಮಿಮೀ ಮಳೆಯಾಗಿದೆ. ಇದನ್ನು ಮೇಘಸ್ಫೋಟ ಎಂದೇ ಹೇಳಲಾಗುತ್ತಿದೆ. ಇದೀಗ ಕುಮಾರಧಾರ ಬಳಿಯ ಪರ್ವತಮುಖಿ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಜರಿದು ಬಿದ್ದು, ಮನೆ ಸಂಪೂರ್ಣವಾಗಿ ನಾಶಗೊಂಡಿದ್ದು, ಮನೆ ಮಂದಿ ಮಣ್ಣಿನಡ್ಡಿ ಸಿಲುಕಿದ್ದಾರೆ. ಮಕ್ಕಳು ಸಹಿತ ಮನೆಯಲ್ಲಿ ವಾಸಿಸುತ್ತಿದ್ದರು.
ಸುಮಾರು ಮೂರು ತಾಸುಗಳ ನಿರಂತರವಾದ ಧಾರಾಕಾರ ಮಳೆಗೆ ಕುಮಾರಧಾರಾ ಬಳಿಯ ಪರ್ವತಮುಖಿ ಎಂಬಲ್ಲಿನ ಕುಶಾಲಪ್ಪ ಎಂಬವರ ಮನೆಯ ಹಿಂಬದಿಯ ಗುಡ್ಡ ಕುಸಿದು ಬಿದ್ದಿದೆ. ಮನೆಯಲ್ಲಿ ಇಬ್ಬರು ಮಕ್ಕಳು ಓರ್ವ ವೃದ್ದೆ ಸಹಿತ ನಾಲ್ಕು ಮಂದಿ ವಾಸಿಸುತ್ತಿದ್ದರು. ಮಕ್ಕಳು ಮಣ್ಣಿನಡಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಮಣ್ಣಿನಡಿ ಸಿಲುಕಿರುವವರನ್ನು ಹೊರತೆಗೆಯಲು ಸಾಹಸ ಪಡಲಾಗುತ್ತಿದೆ. ಸ್ಥಳೀಯರು ನಿರಂತರ ಪ್ರಯತ್ನದಲ್ಲಿದ್ದಾರೆ. ಭಾರೀ ಮಳೆಗೆ ರಸ್ತೆ ಬ್ಲಾಕ್ ಆಗಿರುವುದರಿಂದ ರಕ್ಷಣಾ ಕಾರ್ಯಕ್ಕೆ ಧಾವಿಸಲು ಅಡ್ಡಿಯಾಗಿದೆ.ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…