ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಆಸುಪಾಸಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೇವಲ ಮೂರು ಗಂಟೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ 265 ಮಿಮೀ ಗಿಂತಲೂ ಅಧಿಕ ಮಳೆಯಾಗಿದೆ. ಸಮೀಪದ ಕಲ್ಲಾಜೆಯಲ್ಲಿ 400 ಮಿಮೀ ಮಳೆಯಾಗಿದೆ. ಇದನ್ನು ಮೇಘಸ್ಫೋಟ ಎಂದೇ ಹೇಳಲಾಗುತ್ತಿದೆ. ಇದೀಗ ಕುಮಾರಧಾರ ಬಳಿಯ ಪರ್ವತಮುಖಿ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಜರಿದು ಬಿದ್ದು, ಮನೆ ಸಂಪೂರ್ಣವಾಗಿ ನಾಶಗೊಂಡಿದ್ದು, ಮನೆ ಮಂದಿ ಮಣ್ಣಿನಡ್ಡಿ ಸಿಲುಕಿದ್ದಾರೆ. ಮಕ್ಕಳು ಸಹಿತ ಮನೆಯಲ್ಲಿ ವಾಸಿಸುತ್ತಿದ್ದರು.
ಸುಮಾರು ಮೂರು ತಾಸುಗಳ ನಿರಂತರವಾದ ಧಾರಾಕಾರ ಮಳೆಗೆ ಕುಮಾರಧಾರಾ ಬಳಿಯ ಪರ್ವತಮುಖಿ ಎಂಬಲ್ಲಿನ ಕುಶಾಲಪ್ಪ ಎಂಬವರ ಮನೆಯ ಹಿಂಬದಿಯ ಗುಡ್ಡ ಕುಸಿದು ಬಿದ್ದಿದೆ. ಮನೆಯಲ್ಲಿ ಇಬ್ಬರು ಮಕ್ಕಳು ಓರ್ವ ವೃದ್ದೆ ಸಹಿತ ನಾಲ್ಕು ಮಂದಿ ವಾಸಿಸುತ್ತಿದ್ದರು. ಮಕ್ಕಳು ಮಣ್ಣಿನಡಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಮಣ್ಣಿನಡಿ ಸಿಲುಕಿರುವವರನ್ನು ಹೊರತೆಗೆಯಲು ಸಾಹಸ ಪಡಲಾಗುತ್ತಿದೆ. ಸ್ಥಳೀಯರು ನಿರಂತರ ಪ್ರಯತ್ನದಲ್ಲಿದ್ದಾರೆ. ಭಾರೀ ಮಳೆಗೆ ರಸ್ತೆ ಬ್ಲಾಕ್ ಆಗಿರುವುದರಿಂದ ರಕ್ಷಣಾ ಕಾರ್ಯಕ್ಕೆ ಧಾವಿಸಲು ಅಡ್ಡಿಯಾಗಿದೆ.ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…