Advertisement
ಸುದ್ದಿಗಳು

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶೈವ-ವೈಷ್ಣವ ವಿವಾದವಲ್ಲ | ಹಿಂದೂ ಏಕತೆಯ ವಿಚಾರ – ಹಿತರಕ್ಷಣಾ ವೇದಿಕೆ ಹೇಳಿಕೆ |

Share

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದಲ್ಲಿ  ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಶೈವ-ವೈಷ್ಣವ ಪೂಜಾ ವಿವಾದದ ಬಗ್ಗೆ ಇದೀಗ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಿತರಕ್ಷಣಾ ವೇದಿಕೆ ಸ್ಪಷ್ಟನೆ ನೀಡಿದೆ. ಇದು ಶೈವ ವೈಷ್ಣವ ವಿವಾದ ಅಲ್ಲ, ಹಿಂದೂ ಏಕತೆಯ ಪ್ರಶ್ನೆ ಎಂದು ವೇದಿಕೆಯ ಪದಾಧಿಕಾರಿಗಳು ಹೇಳಿದ್ದಾರೆ.

Advertisement
Advertisement
ಸಾರ್ವಜನಿಕ ದೇವಸ್ಥಾನಗಳಲ್ಲಿ ಆಯಾಯ ದೇವರಿಗ ಸಲ್ಲಬೇಕಾದ ರೀತಿಯಲ್ಲಿಯೇ ಪೂಜೆ ನಡೆಯಬೇಕು, ಅಂತರ್ಯಾಮಿ ಪೂಜೆ ಸಲ್ಲದು , ಪೂಜಾ ಪದ್ಧತಿಯಲ್ಲಿ ತಾರತಮ್ಯ ಸಲ್ಲದು,  ಹೀಗಾಗಿ ಇದು  ಶೈವ-ವೈಷ್ಣವ ವಿವಾದ ಅಲ್ಲ , ಹಿಂದೂ ಏಕತೆಯ ವಿಚಾರ

            – ಮಹೇಶ್‌ ಕುಮಾರ್‌ ಕರಿಕಳ

ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಮಹೇಶ್‌ ಕುಮಾರ್‌ ಕರಿಕಳ, ಸಾರ್ವಜನಿಕ ದೇವಸ್ಥಾನಗಳಲ್ಲಿ ಆಯಾಯ ದೇವರಿಗ ಸಲ್ಲಬೇಕಾದ ರೀತಿಯಲ್ಲಿಯೇ ಪೂಜೆ ನಡೆಯಬೇಕು, ಅಂತರ್ಯಾಮಿ ಪೂಜೆ ಸಲ್ಲದು , ಪೂಜಾ ಪದ್ಧತಿಯಲ್ಲಿ ತಾರತಮ್ಯ ಸಲ್ಲದು,  ಹೀಗಾಗಿ ಇದು  ಶೈವ-ವೈಷ್ಣವ ವಿವಾದ ಅಲ್ಲ , ಹಿಂದೂ ಏಕತೆಯ ವಿಚಾರ ಎಂದು ಸ್ಪಷ್ಟಪಡಿಸಿ , ಮಾಧ್ವರ ಬಗ್ಗೆ ನಮ್ಮ ವಿರೋಧ ಅಲ್ಲವೇ ಅಲ್ಲ, ಆ ರೀತಿಯಾಗಿ ಬಿಂಬಿಸಬೇಕಾಗಿಯೂ ಇಲ್ಲ. ಶಿವಳ್ಳಿ ಬ್ರಾಹ್ಮಣರಲ್ಲಿ ಶೇ 75  ರಷ್ಟು ಮಂದಿ ಎಲ್ಲಾ ದೇವರನ್ನೂ ಪೂಜಿಸುತ್ತಾರೆ. ಆದರೆ ಶೇ.25  ರಷ್ಟು ಮಂದಿ ಎಲ್ಲಾ ದೇವರನ್ನೂ ಪೂಜೆ ಮಾಡುವುದಿಲ್ಲ, ಅದಕ್ಕೆ ಉದಾಹರಣೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ  ಈಚೆಗೆ ನಡೆದ ಶಿವರಾತ್ರಿ ಆಚರಣೆಯ ವಿವಾದ ಎಂದರು. ಇದು ಮಾತ್ರವಲ್ಲ ಕೆಲವು ಕಡೆ, ಸಾರ್ವಜನಿಕ ದೇವಾಲಯಗಳಲ್ಲಿ ನೇರವಾಗಿ ಆಯಾ ದೇವರಿಗೆ ಪೂಜೆ ಮಾಡದೆ, ವಿಷ್ಣು ಪೂಜೆ ಮಾಡುತ್ತಾರೆ,ಶಿವಲಿಂಗಕ್ಕೆ ವಿಷ್ಣು ಅಂತರ್ಯಾಮಿ ಎಂದು ಪೂಜೆ ಮಾಡುತ್ತಾರೆ. ಶಿವ ದೇವರ ನೈವೇದ್ಯ ಪ್ರಸಾದವನ್ನೂ ಕೆಲವು ಸ್ವೀಕರಿಸುವುದಿಲ್ಲ. ಹಿಂದೂ ಧರ್ಮದೊಳಗೆ ಇದೆಂತಹ ಆಚರಣೆ, ಇದನ್ನು ಹಿಂದೂ ಸಮಾಜ ಕೇಳಿದ್ದು ತಪ್ಪಾಗುತ್ತದೆಯೇ ಎಂದು ಮಹೇಶ್‌ ಕುಮಾರ್‌ ಪ್ರಶ್ನಿಸಿದರು.

This is box title
ಅಂತಹ ಅಂತರ್ಯಾಮಿ ಸಿದ್ಧಾಂತವನ್ನು ಮನೆ ಮನೆಗಳಲ್ಲಿ ಆಚರಣೆ ಮಾಡಲಿ, ಅದಕ್ಕೆ ಯಾವುದೇ ವಿರೋಧ ಇಲ್ಲ. ಆದರೆ ಸಾರ್ವಜನಿಕ ದೇವಸ್ಥಾನಗಳಲ್ಲಿ  ಹಿಂದೂ ಪದ್ಧತಿ, ಧಾರ್ಮಿಕ ಪದ್ಧತಿಯಂತೆಯೇ ಆಚರಣೆಗಳು ನಡೆಯಬೇಕು. ಮಠಾಧಿಪತಿಗಳು ಇದನ್ನು ಸಮಾಜಕ್ಕೂ ತಿಳಿ ಹೇಳಬೇಕು, ಮಾರ್ಗದರ್ಶನ ಮಾಡಬೇಕು, ಭಕ್ತಾದಿಗಳಿಗೆ ಅನ್ಯಾಯ ಮಾಡಬಾರದು ಎಂದು ಮಹೇಶ್‌ ಕುಮಾರ್‌ ಹೇಳಿದರು.

ಶೈವ-ವೈಷ್ಣವರಲ್ಲಿ  ಬೇಧವಿಲ್ಲ. ನಾವು ರುದ್ರನನ್ನೂ ಪೂಜೆ ಮಾಡುತ್ತೇವೆ ಎನ್ನುವವರು ಆಯಾಯ ದೇವಸ್ಥಾನಗಳಲ್ಲಿ  ಆಯಾಯ ದೇವರಿಗೇ ಪೂಜೆ ಮಾಡಬೇಕು, ಹಿಂದೂ ಧಾರ್ಮಿಕ ಪದ್ಧತಿಯನ್ನು ಆಚರಣೆ ಮಾಡಬೇಕು ಎಂಬುದು  ತಿಳಿದಿಲ್ಲವೇ ? ಪೂಜಾ ಪದ್ಧತಿ ತಿಳಿಯದ ಮುಗ್ದ ಭಕ್ತರನ್ನು  ದಾರಿ ತಪ್ಪಿಸುವುದು  ಏಕೆ ? ಎಂದು ಪ್ರಶ್ನಿಸಿದರು.

ಸುದ್ದಿಗೋಷ್ಟಿಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಿತರಕ್ಷಣಾ ವೇದಿಕೆ ಕಾರ್ಯದರ್ಶಿ  ಟಿ ಎಸ್‌ ಶ್ರೀನಾಥ್‌, ಪದಾಧಿಕಾರಿಗಳಾದ ಮೋನಪ್ಪ ಮಾನಾಡು, ಗುರುಪ್ರಸಾದ್‌ ಪಂಜ, ಪ್ರಶಾಂತ್‌ ಭಟ್‌ ಮಾಣಿಲ ಉಪಸ್ಥಿತರಿದ್ದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

6 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago