ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಶೈವ-ವೈಷ್ಣವ ಪೂಜಾ ವಿವಾದದ ಬಗ್ಗೆ ಇದೀಗ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಿತರಕ್ಷಣಾ ವೇದಿಕೆ ಸ್ಪಷ್ಟನೆ ನೀಡಿದೆ. ಇದು ಶೈವ ವೈಷ್ಣವ ವಿವಾದ ಅಲ್ಲ, ಹಿಂದೂ ಏಕತೆಯ ಪ್ರಶ್ನೆ ಎಂದು ವೇದಿಕೆಯ ಪದಾಧಿಕಾರಿಗಳು ಹೇಳಿದ್ದಾರೆ.
– ಮಹೇಶ್ ಕುಮಾರ್ ಕರಿಕಳ
ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಮಹೇಶ್ ಕುಮಾರ್ ಕರಿಕಳ, ಸಾರ್ವಜನಿಕ ದೇವಸ್ಥಾನಗಳಲ್ಲಿ ಆಯಾಯ ದೇವರಿಗ ಸಲ್ಲಬೇಕಾದ ರೀತಿಯಲ್ಲಿಯೇ ಪೂಜೆ ನಡೆಯಬೇಕು, ಅಂತರ್ಯಾಮಿ ಪೂಜೆ ಸಲ್ಲದು , ಪೂಜಾ ಪದ್ಧತಿಯಲ್ಲಿ ತಾರತಮ್ಯ ಸಲ್ಲದು, ಹೀಗಾಗಿ ಇದು ಶೈವ-ವೈಷ್ಣವ ವಿವಾದ ಅಲ್ಲ , ಹಿಂದೂ ಏಕತೆಯ ವಿಚಾರ ಎಂದು ಸ್ಪಷ್ಟಪಡಿಸಿ , ಮಾಧ್ವರ ಬಗ್ಗೆ ನಮ್ಮ ವಿರೋಧ ಅಲ್ಲವೇ ಅಲ್ಲ, ಆ ರೀತಿಯಾಗಿ ಬಿಂಬಿಸಬೇಕಾಗಿಯೂ ಇಲ್ಲ. ಶಿವಳ್ಳಿ ಬ್ರಾಹ್ಮಣರಲ್ಲಿ ಶೇ 75 ರಷ್ಟು ಮಂದಿ ಎಲ್ಲಾ ದೇವರನ್ನೂ ಪೂಜಿಸುತ್ತಾರೆ. ಆದರೆ ಶೇ.25 ರಷ್ಟು ಮಂದಿ ಎಲ್ಲಾ ದೇವರನ್ನೂ ಪೂಜೆ ಮಾಡುವುದಿಲ್ಲ, ಅದಕ್ಕೆ ಉದಾಹರಣೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಈಚೆಗೆ ನಡೆದ ಶಿವರಾತ್ರಿ ಆಚರಣೆಯ ವಿವಾದ ಎಂದರು. ಇದು ಮಾತ್ರವಲ್ಲ ಕೆಲವು ಕಡೆ, ಸಾರ್ವಜನಿಕ ದೇವಾಲಯಗಳಲ್ಲಿ ನೇರವಾಗಿ ಆಯಾ ದೇವರಿಗೆ ಪೂಜೆ ಮಾಡದೆ, ವಿಷ್ಣು ಪೂಜೆ ಮಾಡುತ್ತಾರೆ,ಶಿವಲಿಂಗಕ್ಕೆ ವಿಷ್ಣು ಅಂತರ್ಯಾಮಿ ಎಂದು ಪೂಜೆ ಮಾಡುತ್ತಾರೆ. ಶಿವ ದೇವರ ನೈವೇದ್ಯ ಪ್ರಸಾದವನ್ನೂ ಕೆಲವು ಸ್ವೀಕರಿಸುವುದಿಲ್ಲ. ಹಿಂದೂ ಧರ್ಮದೊಳಗೆ ಇದೆಂತಹ ಆಚರಣೆ, ಇದನ್ನು ಹಿಂದೂ ಸಮಾಜ ಕೇಳಿದ್ದು ತಪ್ಪಾಗುತ್ತದೆಯೇ ಎಂದು ಮಹೇಶ್ ಕುಮಾರ್ ಪ್ರಶ್ನಿಸಿದರು.
ಶೈವ-ವೈಷ್ಣವರಲ್ಲಿ ಬೇಧವಿಲ್ಲ. ನಾವು ರುದ್ರನನ್ನೂ ಪೂಜೆ ಮಾಡುತ್ತೇವೆ ಎನ್ನುವವರು ಆಯಾಯ ದೇವಸ್ಥಾನಗಳಲ್ಲಿ ಆಯಾಯ ದೇವರಿಗೇ ಪೂಜೆ ಮಾಡಬೇಕು, ಹಿಂದೂ ಧಾರ್ಮಿಕ ಪದ್ಧತಿಯನ್ನು ಆಚರಣೆ ಮಾಡಬೇಕು ಎಂಬುದು ತಿಳಿದಿಲ್ಲವೇ ? ಪೂಜಾ ಪದ್ಧತಿ ತಿಳಿಯದ ಮುಗ್ದ ಭಕ್ತರನ್ನು ದಾರಿ ತಪ್ಪಿಸುವುದು ಏಕೆ ? ಎಂದು ಪ್ರಶ್ನಿಸಿದರು.
ಸುದ್ದಿಗೋಷ್ಟಿಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಿತರಕ್ಷಣಾ ವೇದಿಕೆ ಕಾರ್ಯದರ್ಶಿ ಟಿ ಎಸ್ ಶ್ರೀನಾಥ್, ಪದಾಧಿಕಾರಿಗಳಾದ ಮೋನಪ್ಪ ಮಾನಾಡು, ಗುರುಪ್ರಸಾದ್ ಪಂಜ, ಪ್ರಶಾಂತ್ ಭಟ್ ಮಾಣಿಲ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…