ಇಂದು ನಾಡಿನಾದ್ಯಂತ ನಾಗರ ಪಂಚಮಮಿ ಸಂಭ್ರಮ. ಕರಾವಳಿ ಭಾಗದಲ್ಲಿ ಇನ್ನೂ ವಿಶೇಷವಾಗಿ ಆಚರಿಸಲಾಗುತ್ತದೆ. ದಕ್ಷಿಣ ಕನ್ನಡ #DakshinaKannada ಜಿಲ್ಲೆಯ ಇತಿಹಾಸ ಪ್ರಸಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯ #KukkeSubrahmanya ದೇವಸ್ಥಾನ, ಮಂಗಳೂರಿನ ಕುಡುಪು #Kudupu ಶ್ರೀ ಅನಂತಪದ್ಮನಾಭ ದೇವಸ್ಥಾನ ಸೇರಿದಂತೆ ಸೋಮವಾರ ಎಲ್ಲಾ ನಾಗಾಲಯಗಳಲ್ಲಿ ಶ್ರದ್ಧಾ ಭಕ್ತಿಯ ನಾಗರಪಂಚಮಿಯನ್ನು #NagaraPanchami ಆಚರಿಸಲಾಯಿತು.
ತುಳುನಾಡಿನಲ್ಲಿ ನಾಗರ ಪಂಚಮಿಯ ಸಡಗರ ಸಂಭ್ರಮ ಮನೆ ಮಾಡಿದೆ. ಪರಶುರಾಮನ ಸೃಷ್ಟಿಯಾದ ತುಳುನಾಡಿನಲ್ಲಿ ನಾಗಾರಾಧನೆಗೆ ವಿಶಿಷ್ಟ ಸ್ಥಾನಮಾನವಿದೆ. ಈ ಹಬ್ಬ ಪ್ರಕೃತಿ ಪೂಜೆಯ ಸಂಕೇತವಾಗಿದ್ದು, ಸಂತಾನ ಅಭಿವೃದ್ಧಿ, ಕೌಟುಂಬಿಕ ನೆಮ್ಮದಿಗಾಗಿ ಲಕ್ಷಾಂತರ ಭಕ್ತರು ಪೂಜೆ ಸಲ್ಲಿಸುತ್ತಾರೆ. ಬೃಹತ್ ಮರಗಳ ನಡುವೆ, ದಟ್ಟ ಕಾನನದಲ್ಲಿ ಬನಗಳಲ್ಲಿರುವ ನಾಗರ ಕಲ್ಲಿಗೆ ಪೂಜೆ ಮಾಡುವುದು ತುಳುನಾಡಿನ ಸಂಪ್ರದಾಯ.
ಹಾಲು ಮತ್ತು ಎಳನೀರಿನ ಅಭಿಷೇಕದ ಮೂಲಕ ತನು ಅರ್ಪಿಸುವುದರಿಂದ ನಾಗಬ್ರಹ್ಮ ತೃಪ್ತನಾಗುತ್ತಾನೆ ಎಂಬುದು ಧಾರ್ಮಿಕ ನಂಬಿಕೆ. ಮಕ್ಕಳಾಗದವರು ನಾಗನಿಗೆವಿಶೇಷವಾಗಿ ಪೂಜೆ ಸಲ್ಲಿಸುತ್ತಾರೆ. ನಾಗ ಪೂಜೆಯಿಂದಾಗಿ ಕುಟುಂಬದ ನೆಮ್ಮದಿ ಮತ್ತು ಐಶ್ವರ್ಯ ವೃದ್ಧಿಯೂ ಆಗುತ್ತದೆ ಎನ್ನುವುದು ನಂಬಿಕೆ. ತುಳುನಾಡಿನಲ್ಲಿ ನಾಗರಪಂಚಮಿಯ ಮೂಲಕ ಹಬ್ಬಗಳು ಆರಂಭಗೊಳ್ಳುತ್ತವೆ.
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…