ಇಂದು ನಾಡಿನಾದ್ಯಂತ ನಾಗರ ಪಂಚಮಮಿ ಸಂಭ್ರಮ. ಕರಾವಳಿ ಭಾಗದಲ್ಲಿ ಇನ್ನೂ ವಿಶೇಷವಾಗಿ ಆಚರಿಸಲಾಗುತ್ತದೆ. ದಕ್ಷಿಣ ಕನ್ನಡ #DakshinaKannada ಜಿಲ್ಲೆಯ ಇತಿಹಾಸ ಪ್ರಸಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯ #KukkeSubrahmanya ದೇವಸ್ಥಾನ, ಮಂಗಳೂರಿನ ಕುಡುಪು #Kudupu ಶ್ರೀ ಅನಂತಪದ್ಮನಾಭ ದೇವಸ್ಥಾನ ಸೇರಿದಂತೆ ಸೋಮವಾರ ಎಲ್ಲಾ ನಾಗಾಲಯಗಳಲ್ಲಿ ಶ್ರದ್ಧಾ ಭಕ್ತಿಯ ನಾಗರಪಂಚಮಿಯನ್ನು #NagaraPanchami ಆಚರಿಸಲಾಯಿತು.
ತುಳುನಾಡಿನಲ್ಲಿ ನಾಗರ ಪಂಚಮಿಯ ಸಡಗರ ಸಂಭ್ರಮ ಮನೆ ಮಾಡಿದೆ. ಪರಶುರಾಮನ ಸೃಷ್ಟಿಯಾದ ತುಳುನಾಡಿನಲ್ಲಿ ನಾಗಾರಾಧನೆಗೆ ವಿಶಿಷ್ಟ ಸ್ಥಾನಮಾನವಿದೆ. ಈ ಹಬ್ಬ ಪ್ರಕೃತಿ ಪೂಜೆಯ ಸಂಕೇತವಾಗಿದ್ದು, ಸಂತಾನ ಅಭಿವೃದ್ಧಿ, ಕೌಟುಂಬಿಕ ನೆಮ್ಮದಿಗಾಗಿ ಲಕ್ಷಾಂತರ ಭಕ್ತರು ಪೂಜೆ ಸಲ್ಲಿಸುತ್ತಾರೆ. ಬೃಹತ್ ಮರಗಳ ನಡುವೆ, ದಟ್ಟ ಕಾನನದಲ್ಲಿ ಬನಗಳಲ್ಲಿರುವ ನಾಗರ ಕಲ್ಲಿಗೆ ಪೂಜೆ ಮಾಡುವುದು ತುಳುನಾಡಿನ ಸಂಪ್ರದಾಯ.
ಹಾಲು ಮತ್ತು ಎಳನೀರಿನ ಅಭಿಷೇಕದ ಮೂಲಕ ತನು ಅರ್ಪಿಸುವುದರಿಂದ ನಾಗಬ್ರಹ್ಮ ತೃಪ್ತನಾಗುತ್ತಾನೆ ಎಂಬುದು ಧಾರ್ಮಿಕ ನಂಬಿಕೆ. ಮಕ್ಕಳಾಗದವರು ನಾಗನಿಗೆವಿಶೇಷವಾಗಿ ಪೂಜೆ ಸಲ್ಲಿಸುತ್ತಾರೆ. ನಾಗ ಪೂಜೆಯಿಂದಾಗಿ ಕುಟುಂಬದ ನೆಮ್ಮದಿ ಮತ್ತು ಐಶ್ವರ್ಯ ವೃದ್ಧಿಯೂ ಆಗುತ್ತದೆ ಎನ್ನುವುದು ನಂಬಿಕೆ. ತುಳುನಾಡಿನಲ್ಲಿ ನಾಗರಪಂಚಮಿಯ ಮೂಲಕ ಹಬ್ಬಗಳು ಆರಂಭಗೊಳ್ಳುತ್ತವೆ.
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…
ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…
ಮೈಸೂರು ವಿಭಾಗದ ತಂಬಾಕು ರೈತರು ಖರೀದಿ ಸಮಸ್ಯೆಯಿಂದ ಸಂಕಷ್ಟದಲ್ಲಿದ್ದು, ಈ ಬಗ್ಗೆ ಕೇಂದ್ರ…
ಅಡಿಕೆಯ ಹಳದಿ ಎಲೆ ರೋಗವು(YLD) ಕೇವಲ ಎಲೆಯ ಸಮಸ್ಯೆಯಲ್ಲ, ಮಣ್ಣಿನೊಳಗಿನ ಸೂಕ್ಷ್ಮಜೀವಿಗಳ ಸಮತೋಲನ…
ರಾಜ್ಯದಾದ್ಯಂತ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಾರ್ಚ್ 3 ರವರೆಗೆ ಮಳೆಯ ಸಾಧ್ಯತೆ…