ಇಂದು ನಾಡಿನಾದ್ಯಂತ ನಾಗರ ಪಂಚಮಮಿ ಸಂಭ್ರಮ. ಕರಾವಳಿ ಭಾಗದಲ್ಲಿ ಇನ್ನೂ ವಿಶೇಷವಾಗಿ ಆಚರಿಸಲಾಗುತ್ತದೆ. ದಕ್ಷಿಣ ಕನ್ನಡ #DakshinaKannada ಜಿಲ್ಲೆಯ ಇತಿಹಾಸ ಪ್ರಸಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯ #KukkeSubrahmanya ದೇವಸ್ಥಾನ, ಮಂಗಳೂರಿನ ಕುಡುಪು #Kudupu ಶ್ರೀ ಅನಂತಪದ್ಮನಾಭ ದೇವಸ್ಥಾನ ಸೇರಿದಂತೆ ಸೋಮವಾರ ಎಲ್ಲಾ ನಾಗಾಲಯಗಳಲ್ಲಿ ಶ್ರದ್ಧಾ ಭಕ್ತಿಯ ನಾಗರಪಂಚಮಿಯನ್ನು #NagaraPanchami ಆಚರಿಸಲಾಯಿತು.
ತುಳುನಾಡಿನಲ್ಲಿ ನಾಗರ ಪಂಚಮಿಯ ಸಡಗರ ಸಂಭ್ರಮ ಮನೆ ಮಾಡಿದೆ. ಪರಶುರಾಮನ ಸೃಷ್ಟಿಯಾದ ತುಳುನಾಡಿನಲ್ಲಿ ನಾಗಾರಾಧನೆಗೆ ವಿಶಿಷ್ಟ ಸ್ಥಾನಮಾನವಿದೆ. ಈ ಹಬ್ಬ ಪ್ರಕೃತಿ ಪೂಜೆಯ ಸಂಕೇತವಾಗಿದ್ದು, ಸಂತಾನ ಅಭಿವೃದ್ಧಿ, ಕೌಟುಂಬಿಕ ನೆಮ್ಮದಿಗಾಗಿ ಲಕ್ಷಾಂತರ ಭಕ್ತರು ಪೂಜೆ ಸಲ್ಲಿಸುತ್ತಾರೆ. ಬೃಹತ್ ಮರಗಳ ನಡುವೆ, ದಟ್ಟ ಕಾನನದಲ್ಲಿ ಬನಗಳಲ್ಲಿರುವ ನಾಗರ ಕಲ್ಲಿಗೆ ಪೂಜೆ ಮಾಡುವುದು ತುಳುನಾಡಿನ ಸಂಪ್ರದಾಯ.
ಹಾಲು ಮತ್ತು ಎಳನೀರಿನ ಅಭಿಷೇಕದ ಮೂಲಕ ತನು ಅರ್ಪಿಸುವುದರಿಂದ ನಾಗಬ್ರಹ್ಮ ತೃಪ್ತನಾಗುತ್ತಾನೆ ಎಂಬುದು ಧಾರ್ಮಿಕ ನಂಬಿಕೆ. ಮಕ್ಕಳಾಗದವರು ನಾಗನಿಗೆವಿಶೇಷವಾಗಿ ಪೂಜೆ ಸಲ್ಲಿಸುತ್ತಾರೆ. ನಾಗ ಪೂಜೆಯಿಂದಾಗಿ ಕುಟುಂಬದ ನೆಮ್ಮದಿ ಮತ್ತು ಐಶ್ವರ್ಯ ವೃದ್ಧಿಯೂ ಆಗುತ್ತದೆ ಎನ್ನುವುದು ನಂಬಿಕೆ. ತುಳುನಾಡಿನಲ್ಲಿ ನಾಗರಪಂಚಮಿಯ ಮೂಲಕ ಹಬ್ಬಗಳು ಆರಂಭಗೊಳ್ಳುತ್ತವೆ.
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…
ಬಾಂಗ್ಲಾದೇಶದಲ್ಲಿ ಭಾರೀ ಮಳೆಯಿಂದ 44 ಮಂದಿ ಮೃತಪಟ್ಟಿದ್ದು, 10 ಲಕ್ಷಕ್ಕೂ ಹೆಚ್ಚು ಜನರು…
ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…
ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…
ಎಲ್ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…