ಇಂದು ನಾಡಿನಾದ್ಯಂತ ನಾಗರ ಪಂಚಮಮಿ ಸಂಭ್ರಮ. ಕರಾವಳಿ ಭಾಗದಲ್ಲಿ ಇನ್ನೂ ವಿಶೇಷವಾಗಿ ಆಚರಿಸಲಾಗುತ್ತದೆ. ದಕ್ಷಿಣ ಕನ್ನಡ #DakshinaKannada ಜಿಲ್ಲೆಯ ಇತಿಹಾಸ ಪ್ರಸಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯ #KukkeSubrahmanya ದೇವಸ್ಥಾನ, ಮಂಗಳೂರಿನ ಕುಡುಪು #Kudupu ಶ್ರೀ ಅನಂತಪದ್ಮನಾಭ ದೇವಸ್ಥಾನ ಸೇರಿದಂತೆ ಸೋಮವಾರ ಎಲ್ಲಾ ನಾಗಾಲಯಗಳಲ್ಲಿ ಶ್ರದ್ಧಾ ಭಕ್ತಿಯ ನಾಗರಪಂಚಮಿಯನ್ನು #NagaraPanchami ಆಚರಿಸಲಾಯಿತು.
ತುಳುನಾಡಿನಲ್ಲಿ ನಾಗರ ಪಂಚಮಿಯ ಸಡಗರ ಸಂಭ್ರಮ ಮನೆ ಮಾಡಿದೆ. ಪರಶುರಾಮನ ಸೃಷ್ಟಿಯಾದ ತುಳುನಾಡಿನಲ್ಲಿ ನಾಗಾರಾಧನೆಗೆ ವಿಶಿಷ್ಟ ಸ್ಥಾನಮಾನವಿದೆ. ಈ ಹಬ್ಬ ಪ್ರಕೃತಿ ಪೂಜೆಯ ಸಂಕೇತವಾಗಿದ್ದು, ಸಂತಾನ ಅಭಿವೃದ್ಧಿ, ಕೌಟುಂಬಿಕ ನೆಮ್ಮದಿಗಾಗಿ ಲಕ್ಷಾಂತರ ಭಕ್ತರು ಪೂಜೆ ಸಲ್ಲಿಸುತ್ತಾರೆ. ಬೃಹತ್ ಮರಗಳ ನಡುವೆ, ದಟ್ಟ ಕಾನನದಲ್ಲಿ ಬನಗಳಲ್ಲಿರುವ ನಾಗರ ಕಲ್ಲಿಗೆ ಪೂಜೆ ಮಾಡುವುದು ತುಳುನಾಡಿನ ಸಂಪ್ರದಾಯ.
ಹಾಲು ಮತ್ತು ಎಳನೀರಿನ ಅಭಿಷೇಕದ ಮೂಲಕ ತನು ಅರ್ಪಿಸುವುದರಿಂದ ನಾಗಬ್ರಹ್ಮ ತೃಪ್ತನಾಗುತ್ತಾನೆ ಎಂಬುದು ಧಾರ್ಮಿಕ ನಂಬಿಕೆ. ಮಕ್ಕಳಾಗದವರು ನಾಗನಿಗೆವಿಶೇಷವಾಗಿ ಪೂಜೆ ಸಲ್ಲಿಸುತ್ತಾರೆ. ನಾಗ ಪೂಜೆಯಿಂದಾಗಿ ಕುಟುಂಬದ ನೆಮ್ಮದಿ ಮತ್ತು ಐಶ್ವರ್ಯ ವೃದ್ಧಿಯೂ ಆಗುತ್ತದೆ ಎನ್ನುವುದು ನಂಬಿಕೆ. ತುಳುನಾಡಿನಲ್ಲಿ ನಾಗರಪಂಚಮಿಯ ಮೂಲಕ ಹಬ್ಬಗಳು ಆರಂಭಗೊಳ್ಳುತ್ತವೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…