ಕುಕ್ಕೆ ಸುಬ್ರಹ್ಮಣ್ಯ ಶೌಚಾಲಯ ನಿರ್ವಹಣೆ | 3 ಬಾರಿ ಟೆಂಡರ್‌ ರದ್ದು | ಏನಿದು ಕತೆ ?

February 21, 2023
11:09 PM

ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ. ಈ ಕ್ಷೇತ್ರದಲ್ಲಿ ಹಲವು ಸೇವೆಗಳು, ನಿರ್ವಹಣೆ ಟೆಂಡರ್‌ ಮೂಲಕ ನಡೆಯುತ್ತದೆ. ಟೆಂಡರ್‌ ಆಹ್ವಾನಿಸಿ ಆ ಮೂಲಕವೇ ನಿರ್ವಹಣೆಗೆ ನೀಡಲಾಗುತ್ತದೆ. ಇದೀಗ ಕುಕ್ಕೆ ಸುಬ್ರಹ್ಮಣ್ಯದ ಶೌಚಾಲಯ ನಿರ್ವಹಣೆಯ ಬಗ್ಗೆ ಚರ್ಚೆ ಆರಂಭವಾಗಿದೆ. ಎರಡು ಬಾರಿ ಟೆಂಡರ್‌ ಆಹ್ವಾನವಾಗಿ ಕೊನೆ ಕ್ಷಣದಲ್ಲಿ ರದ್ದಾಗಿ, ಇದೀಗ ಮೂರನೇ ಬಾರಿಯೂ ರದ್ದಾಗಿದೆ. ಈ ಟೆಂಡರ್‌ ಪ್ರಕ್ರಿಯೆಗೆ ನ್ಯಾಯಾಲಯದಿಂದ ತಡೆಯಾಜ್ಞೆಯನ್ನೂ ತಂದಿರುವ ಘಟನೆ ಬೆಳಕಿಗೆ ಬಂದಿದೆ. ಇದೀಗ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶೌಚಾಲಯ ಚರ್ಚೆ…!

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶೌಚಾಲಯ ನಿರ್ವಹಣೆಯನ್ನು ಟೆಂಡರ್‌ ಮೂಲಕ ನೀಡಲಾಗುತ್ತದೆ. ಕಳೆದ ಕೆಲವು ಸಮಯಗಳಿಂದ ಒಬ್ಬರೇ ವ್ಯಕ್ತಿ ನಿರ್ವಹಣೆ ಮಾಡುತ್ತಿದ್ದರು. ಆದರೆ ಈಗ ಟೆಂಡರ್‌ ಪ್ರಕ್ರಿಯೆ ಬಗ್ಗೆ ಮಾಹಿತಿ ತಿಳಿಯುತ್ತಲೇ ಹಲವು ಮಂದಿ ಆಗಮಿಸಲು ತೊಡಗಿದರು. ಹೀಗಾಗಿ ಇದೀಗ ಚರ್ಚೆ, ಪೈಪೋಟಿ ಆರಂಭವಾಗಿದೆ.

ಕುಕ್ಕೆ ಸುಬ್ರಹ್ಮಣ್ಯದ ಸ್ನಾನಗೃಹ ಮತ್ತು ಶೌಚಾಲಯ ನಿರ್ವಹಣೆಗೆ ಮೊದಲ ಬಾರಿಗೆ ಟೆಂಡರ್‌ ಆಹ್ವಾನಿಸಿ ದೇವಳದ ನೋಟೀಸ್‌ ಬೋರ್ಡಿನಲ್ಲಿ ಹಾಕಲಾಗಿತ್ತು, ಇದನ್ನು ಗಮನಿಸಿ ಕೆಲವರು ಟೆಂಡರ್‌ ಸಲ್ಲಿಸಿದರು. ಅದು ರದ್ದಾಯಿತು. ಎರಡನೇ ಬಾರಿಗೆ ಟೆಂಡರ್‌ ಆಹ್ವಾನಿಸಿದಾಗ ಯಾವ ಮಾಹಿತಿಯೂ ಇರಲಿಲ್ಲ, ಆದರೆ ಕಚೇರಿಯಿಂದ ಮಾಹಿತಿ ಪಡೆದು ಟೆಂಡರ್‌ ದಾರರು ಅರ್ಜಿ ಹಾಕಿದರು. ಅದೂ ರದ್ದಾಯಿತು. ಇದೀಗ ಮೂರನೇ ಬಾರಿಗೆ ಆಹ್ವಾನಿಸಿದ ಟೆಂಡರ್‌ ಫೆ.24 ರಂದು ತೆರೆಯಬೇಕಿತ್ತು, ಈ ನಡುವೆಯೇ ನ್ಯಾಯಾಲಯದಿಂದ ಈ ಟೆಂಡರ್‌ ಪ್ರಕ್ರಿಯೆಗೆ ತಡೆಯಾಜ್ಞೆಯನ್ನು ತರಲಾಗಿದೆ.

ಒಟ್ಟು ಎಂಟು ಶೌಚಾಲಯಗಳಲ್ಲಿ ಈಗ 6 ಶೌಚಾಲಯಗಳ ನಿರ್ವಹಣೆಗೆ ಟೆಂಡರ್‌ ಕರೆಯಲಾಗಿತ್ತು, ಈಗಾಗಲೇ ಎರಡು ಶೌಚಾಲಯ ನಿರ್ವಹಣೆಗೆ ಟೆಂಡರ್‌ ನೀಡಲಾಗಿದೆ. ಶೌಚಾಲಯ ಸ್ವಚ್ಛತೆ ಸೇರಿದಂತೆ ಸಂಪೂರ್ಣ ನಿರ್ವಹಣೆ ನಡೆಸಬೇಕು. ಆದರೆ ಇಲ್ಲಿ ಟೆಂಡರ್‌ದಾರರು ಇರುವುದೇ ಸಮಸ್ಯೆ ಎನ್ನುವುದು ಟೆಂಡರ್‌ ಹಾಕಿದವರ ಆರೋಪ. ಆರು ಶೌಚಾಲಯಗಳ ನಿರ್ವಹಣೆಗೆ ತಿಂಗಳಿಗೆ 13000 ನೀಡುವ ಪ್ರಯತ್ನ ದೇವಸ್ಥಾನದ ಕಡೆಯಿಂದ ನಡೆಯುತ್ತಿದೆ ಎನ್ನುವ ಆರೋಪ  ಟೆಂಡರ್‌ ದಾರರದು. ಒಂದು ಶೌಚಾಲಯದ ನಿರ್ವಹಣೆಗೆ ತಿಂಗಳಿಗೆ 10,000 ರೂಪಾಯಿಯಂತೆ ದೇವಸ್ಥಾನಕ್ಕೆ ನೀಡಲು ಬದ್ದರಾಗಿದ್ದಾಗಲೂ ಏಕೆ ಟೆಂಡರ್‌ ಪ್ರಕ್ರಿಯೆ ನಡೆಸುತ್ತಿಲ್ಲ ಎಂದು ಟೆಂಡರ್‌ದಾರರು ಹೇಳಿದ್ದಾರೆ.

ಇದೀಗ ಶೌಚಾಲಯ ನಿರ್ವಹಣೆಯ ಸಂಗತಿ ನ್ಯಾಯಾಲಯದ ಮೆಟ್ಟಿಲೇರಿದೆ. ಟೆಂಡರ್‌ ಅರ್ಜಿ ಹಾಕಿದವರೂ ಹೋರಾಟದ ಹಾದಿಯಲ್ಲಿದ್ದಾರೆ. ಕಳೆದ ಹಲವು ವರ್ಷಗಳಿಂದಲೂ ಒಬ್ಬರಿಗೇ ಹೇಗೆ ಟೆಂಡರ್‌ ಸಿಗುತ್ತದೆ, ಇದರ ಹಿಂದೆ ಕಾಣದ ಕೈ ಕೆಲಸ ಮಾಡುತ್ತಿದೆ ಎಂದು ಟೆಂಡರ್‌ದಾರ ಬೇಲೂರಿನ ಮನು ಹೇಳುತ್ತಾರೆ. ಈ ಬಗ್ಗೆ ಟೆಂಡರ್‌ ದಾರರೆಲ್ಲರೂ ಸೇರಿ ಜಿಲ್ಲಾಧಿಕಾರಿಗಳಿಗೆ ದೂರು ನೀಡುತ್ತೇವೆ ಹಾಗೂ ಮುಂದಿನ ಕ್ರಮದ ಕಡೆಗೆ ಹೆಜ್ಜೆ ಇರಿಸುತ್ತೇವೆ ಎಂದು ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ
August 12, 2026
6:58 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ
August 11, 2026
10:31 PM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ
August 11, 2026
9:56 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?
August 11, 2026
9:12 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror