ರಾಜ್ಯ

ಕುಕ್ಕೆ ಸುಬ್ರಹ್ಮಣ್ಯ ಶೌಚಾಲಯ ನಿರ್ವಹಣೆ | 3 ಬಾರಿ ಟೆಂಡರ್‌ ರದ್ದು | ಏನಿದು ಕತೆ ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ. ಈ ಕ್ಷೇತ್ರದಲ್ಲಿ ಹಲವು ಸೇವೆಗಳು, ನಿರ್ವಹಣೆ ಟೆಂಡರ್‌ ಮೂಲಕ ನಡೆಯುತ್ತದೆ. ಟೆಂಡರ್‌ ಆಹ್ವಾನಿಸಿ ಆ ಮೂಲಕವೇ ನಿರ್ವಹಣೆಗೆ ನೀಡಲಾಗುತ್ತದೆ. ಇದೀಗ ಕುಕ್ಕೆ ಸುಬ್ರಹ್ಮಣ್ಯದ ಶೌಚಾಲಯ ನಿರ್ವಹಣೆಯ ಬಗ್ಗೆ ಚರ್ಚೆ ಆರಂಭವಾಗಿದೆ. ಎರಡು ಬಾರಿ ಟೆಂಡರ್‌ ಆಹ್ವಾನವಾಗಿ ಕೊನೆ ಕ್ಷಣದಲ್ಲಿ ರದ್ದಾಗಿ, ಇದೀಗ ಮೂರನೇ ಬಾರಿಯೂ ರದ್ದಾಗಿದೆ. ಈ ಟೆಂಡರ್‌ ಪ್ರಕ್ರಿಯೆಗೆ ನ್ಯಾಯಾಲಯದಿಂದ ತಡೆಯಾಜ್ಞೆಯನ್ನೂ ತಂದಿರುವ ಘಟನೆ ಬೆಳಕಿಗೆ ಬಂದಿದೆ. ಇದೀಗ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶೌಚಾಲಯ ಚರ್ಚೆ…!

Advertisement

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶೌಚಾಲಯ ನಿರ್ವಹಣೆಯನ್ನು ಟೆಂಡರ್‌ ಮೂಲಕ ನೀಡಲಾಗುತ್ತದೆ. ಕಳೆದ ಕೆಲವು ಸಮಯಗಳಿಂದ ಒಬ್ಬರೇ ವ್ಯಕ್ತಿ ನಿರ್ವಹಣೆ ಮಾಡುತ್ತಿದ್ದರು. ಆದರೆ ಈಗ ಟೆಂಡರ್‌ ಪ್ರಕ್ರಿಯೆ ಬಗ್ಗೆ ಮಾಹಿತಿ ತಿಳಿಯುತ್ತಲೇ ಹಲವು ಮಂದಿ ಆಗಮಿಸಲು ತೊಡಗಿದರು. ಹೀಗಾಗಿ ಇದೀಗ ಚರ್ಚೆ, ಪೈಪೋಟಿ ಆರಂಭವಾಗಿದೆ.

ಕುಕ್ಕೆ ಸುಬ್ರಹ್ಮಣ್ಯದ ಸ್ನಾನಗೃಹ ಮತ್ತು ಶೌಚಾಲಯ ನಿರ್ವಹಣೆಗೆ ಮೊದಲ ಬಾರಿಗೆ ಟೆಂಡರ್‌ ಆಹ್ವಾನಿಸಿ ದೇವಳದ ನೋಟೀಸ್‌ ಬೋರ್ಡಿನಲ್ಲಿ ಹಾಕಲಾಗಿತ್ತು, ಇದನ್ನು ಗಮನಿಸಿ ಕೆಲವರು ಟೆಂಡರ್‌ ಸಲ್ಲಿಸಿದರು. ಅದು ರದ್ದಾಯಿತು. ಎರಡನೇ ಬಾರಿಗೆ ಟೆಂಡರ್‌ ಆಹ್ವಾನಿಸಿದಾಗ ಯಾವ ಮಾಹಿತಿಯೂ ಇರಲಿಲ್ಲ, ಆದರೆ ಕಚೇರಿಯಿಂದ ಮಾಹಿತಿ ಪಡೆದು ಟೆಂಡರ್‌ ದಾರರು ಅರ್ಜಿ ಹಾಕಿದರು. ಅದೂ ರದ್ದಾಯಿತು. ಇದೀಗ ಮೂರನೇ ಬಾರಿಗೆ ಆಹ್ವಾನಿಸಿದ ಟೆಂಡರ್‌ ಫೆ.24 ರಂದು ತೆರೆಯಬೇಕಿತ್ತು, ಈ ನಡುವೆಯೇ ನ್ಯಾಯಾಲಯದಿಂದ ಈ ಟೆಂಡರ್‌ ಪ್ರಕ್ರಿಯೆಗೆ ತಡೆಯಾಜ್ಞೆಯನ್ನು ತರಲಾಗಿದೆ.

ಒಟ್ಟು ಎಂಟು ಶೌಚಾಲಯಗಳಲ್ಲಿ ಈಗ 6 ಶೌಚಾಲಯಗಳ ನಿರ್ವಹಣೆಗೆ ಟೆಂಡರ್‌ ಕರೆಯಲಾಗಿತ್ತು, ಈಗಾಗಲೇ ಎರಡು ಶೌಚಾಲಯ ನಿರ್ವಹಣೆಗೆ ಟೆಂಡರ್‌ ನೀಡಲಾಗಿದೆ. ಶೌಚಾಲಯ ಸ್ವಚ್ಛತೆ ಸೇರಿದಂತೆ ಸಂಪೂರ್ಣ ನಿರ್ವಹಣೆ ನಡೆಸಬೇಕು. ಆದರೆ ಇಲ್ಲಿ ಟೆಂಡರ್‌ದಾರರು ಇರುವುದೇ ಸಮಸ್ಯೆ ಎನ್ನುವುದು ಟೆಂಡರ್‌ ಹಾಕಿದವರ ಆರೋಪ. ಆರು ಶೌಚಾಲಯಗಳ ನಿರ್ವಹಣೆಗೆ ತಿಂಗಳಿಗೆ 13000 ನೀಡುವ ಪ್ರಯತ್ನ ದೇವಸ್ಥಾನದ ಕಡೆಯಿಂದ ನಡೆಯುತ್ತಿದೆ ಎನ್ನುವ ಆರೋಪ  ಟೆಂಡರ್‌ ದಾರರದು. ಒಂದು ಶೌಚಾಲಯದ ನಿರ್ವಹಣೆಗೆ ತಿಂಗಳಿಗೆ 10,000 ರೂಪಾಯಿಯಂತೆ ದೇವಸ್ಥಾನಕ್ಕೆ ನೀಡಲು ಬದ್ದರಾಗಿದ್ದಾಗಲೂ ಏಕೆ ಟೆಂಡರ್‌ ಪ್ರಕ್ರಿಯೆ ನಡೆಸುತ್ತಿಲ್ಲ ಎಂದು ಟೆಂಡರ್‌ದಾರರು ಹೇಳಿದ್ದಾರೆ.

ಇದೀಗ ಶೌಚಾಲಯ ನಿರ್ವಹಣೆಯ ಸಂಗತಿ ನ್ಯಾಯಾಲಯದ ಮೆಟ್ಟಿಲೇರಿದೆ. ಟೆಂಡರ್‌ ಅರ್ಜಿ ಹಾಕಿದವರೂ ಹೋರಾಟದ ಹಾದಿಯಲ್ಲಿದ್ದಾರೆ. ಕಳೆದ ಹಲವು ವರ್ಷಗಳಿಂದಲೂ ಒಬ್ಬರಿಗೇ ಹೇಗೆ ಟೆಂಡರ್‌ ಸಿಗುತ್ತದೆ, ಇದರ ಹಿಂದೆ ಕಾಣದ ಕೈ ಕೆಲಸ ಮಾಡುತ್ತಿದೆ ಎಂದು ಟೆಂಡರ್‌ದಾರ ಬೇಲೂರಿನ ಮನು ಹೇಳುತ್ತಾರೆ. ಈ ಬಗ್ಗೆ ಟೆಂಡರ್‌ ದಾರರೆಲ್ಲರೂ ಸೇರಿ ಜಿಲ್ಲಾಧಿಕಾರಿಗಳಿಗೆ ದೂರು ನೀಡುತ್ತೇವೆ ಹಾಗೂ ಮುಂದಿನ ಕ್ರಮದ ಕಡೆಗೆ ಹೆಜ್ಜೆ ಇರಿಸುತ್ತೇವೆ ಎಂದು ಹೇಳುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…

6 hours ago

ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…

6 hours ago

ಅಡಿಕೆ ಧಾರಣೆ ಏರಿಕೆಗೆ ಕಾರಣ ಇದೆ | ಈಗ ಅಡಿಕೆ ಮಾರುಕಟ್ಟೆಗೆ ಅನ್ವಯಿಸುವ ಸಿದ್ಧಾಂತಗಳು ಯಾವುದು..?

ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…

11 hours ago

2025: ಲಕ್ಷ್ಮೀನಾರಾಯಣ ಯೋಗ | ಈ ರಾಶಿಗೆ ಅದೃಷ್ಟದ ಬಾಗಿಲು ಓಪನ್

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

11 hours ago

ರೈತರ ಪಂಪ್ ಸೆಟ್ ಗಳಿಗೆ ಹಗಲು ಹೊತ್ತಿನಲ್ಲಿಯೇ ವಿದ್ಯುತ್ ನೀಡಲು ತೀರ್ಮಾನ

ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…

19 hours ago

ಹೀಟ್‌ವೇವ್‌ ಸಂಕಷ್ಟದಲ್ಲಿ ತೆಲಂಗಾಣ-ಹೈದರಾಬಾದ್‌ |

ತೆಲಂಗಾಣ ಹಾಗೂ ಹೈದ್ರಾಬಾದ್‌ ಪ್ರದೇಶದಲ್ಲಿ ಹೀಟ್‌ವೇವ್‌ ಪರಿಸ್ಥಿತಿ ಕಂಡುಬಂದಿದೆ. ಹೀಗಾಗಿ ಹೆಚ್ಚುತ್ತಿರುವ ಉಷ್ಣ…

19 hours ago