Advertisement
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯ ಶೌಚಾಲಯ ನಿರ್ವಹಣೆ | 3 ಬಾರಿ ಟೆಂಡರ್‌ ರದ್ದು | ಏನಿದು ಕತೆ ?

Share

ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ. ಈ ಕ್ಷೇತ್ರದಲ್ಲಿ ಹಲವು ಸೇವೆಗಳು, ನಿರ್ವಹಣೆ ಟೆಂಡರ್‌ ಮೂಲಕ ನಡೆಯುತ್ತದೆ. ಟೆಂಡರ್‌ ಆಹ್ವಾನಿಸಿ ಆ ಮೂಲಕವೇ ನಿರ್ವಹಣೆಗೆ ನೀಡಲಾಗುತ್ತದೆ. ಇದೀಗ ಕುಕ್ಕೆ ಸುಬ್ರಹ್ಮಣ್ಯದ ಶೌಚಾಲಯ ನಿರ್ವಹಣೆಯ ಬಗ್ಗೆ ಚರ್ಚೆ ಆರಂಭವಾಗಿದೆ. ಎರಡು ಬಾರಿ ಟೆಂಡರ್‌ ಆಹ್ವಾನವಾಗಿ ಕೊನೆ ಕ್ಷಣದಲ್ಲಿ ರದ್ದಾಗಿ, ಇದೀಗ ಮೂರನೇ ಬಾರಿಯೂ ರದ್ದಾಗಿದೆ. ಈ ಟೆಂಡರ್‌ ಪ್ರಕ್ರಿಯೆಗೆ ನ್ಯಾಯಾಲಯದಿಂದ ತಡೆಯಾಜ್ಞೆಯನ್ನೂ ತಂದಿರುವ ಘಟನೆ ಬೆಳಕಿಗೆ ಬಂದಿದೆ. ಇದೀಗ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶೌಚಾಲಯ ಚರ್ಚೆ…!

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶೌಚಾಲಯ ನಿರ್ವಹಣೆಯನ್ನು ಟೆಂಡರ್‌ ಮೂಲಕ ನೀಡಲಾಗುತ್ತದೆ. ಕಳೆದ ಕೆಲವು ಸಮಯಗಳಿಂದ ಒಬ್ಬರೇ ವ್ಯಕ್ತಿ ನಿರ್ವಹಣೆ ಮಾಡುತ್ತಿದ್ದರು. ಆದರೆ ಈಗ ಟೆಂಡರ್‌ ಪ್ರಕ್ರಿಯೆ ಬಗ್ಗೆ ಮಾಹಿತಿ ತಿಳಿಯುತ್ತಲೇ ಹಲವು ಮಂದಿ ಆಗಮಿಸಲು ತೊಡಗಿದರು. ಹೀಗಾಗಿ ಇದೀಗ ಚರ್ಚೆ, ಪೈಪೋಟಿ ಆರಂಭವಾಗಿದೆ.

Advertisement

ಕುಕ್ಕೆ ಸುಬ್ರಹ್ಮಣ್ಯದ ಸ್ನಾನಗೃಹ ಮತ್ತು ಶೌಚಾಲಯ ನಿರ್ವಹಣೆಗೆ ಮೊದಲ ಬಾರಿಗೆ ಟೆಂಡರ್‌ ಆಹ್ವಾನಿಸಿ ದೇವಳದ ನೋಟೀಸ್‌ ಬೋರ್ಡಿನಲ್ಲಿ ಹಾಕಲಾಗಿತ್ತು, ಇದನ್ನು ಗಮನಿಸಿ ಕೆಲವರು ಟೆಂಡರ್‌ ಸಲ್ಲಿಸಿದರು. ಅದು ರದ್ದಾಯಿತು. ಎರಡನೇ ಬಾರಿಗೆ ಟೆಂಡರ್‌ ಆಹ್ವಾನಿಸಿದಾಗ ಯಾವ ಮಾಹಿತಿಯೂ ಇರಲಿಲ್ಲ, ಆದರೆ ಕಚೇರಿಯಿಂದ ಮಾಹಿತಿ ಪಡೆದು ಟೆಂಡರ್‌ ದಾರರು ಅರ್ಜಿ ಹಾಕಿದರು. ಅದೂ ರದ್ದಾಯಿತು. ಇದೀಗ ಮೂರನೇ ಬಾರಿಗೆ ಆಹ್ವಾನಿಸಿದ ಟೆಂಡರ್‌ ಫೆ.24 ರಂದು ತೆರೆಯಬೇಕಿತ್ತು, ಈ ನಡುವೆಯೇ ನ್ಯಾಯಾಲಯದಿಂದ ಈ ಟೆಂಡರ್‌ ಪ್ರಕ್ರಿಯೆಗೆ ತಡೆಯಾಜ್ಞೆಯನ್ನು ತರಲಾಗಿದೆ.

ಒಟ್ಟು ಎಂಟು ಶೌಚಾಲಯಗಳಲ್ಲಿ ಈಗ 6 ಶೌಚಾಲಯಗಳ ನಿರ್ವಹಣೆಗೆ ಟೆಂಡರ್‌ ಕರೆಯಲಾಗಿತ್ತು, ಈಗಾಗಲೇ ಎರಡು ಶೌಚಾಲಯ ನಿರ್ವಹಣೆಗೆ ಟೆಂಡರ್‌ ನೀಡಲಾಗಿದೆ. ಶೌಚಾಲಯ ಸ್ವಚ್ಛತೆ ಸೇರಿದಂತೆ ಸಂಪೂರ್ಣ ನಿರ್ವಹಣೆ ನಡೆಸಬೇಕು. ಆದರೆ ಇಲ್ಲಿ ಟೆಂಡರ್‌ದಾರರು ಇರುವುದೇ ಸಮಸ್ಯೆ ಎನ್ನುವುದು ಟೆಂಡರ್‌ ಹಾಕಿದವರ ಆರೋಪ. ಆರು ಶೌಚಾಲಯಗಳ ನಿರ್ವಹಣೆಗೆ ತಿಂಗಳಿಗೆ 13000 ನೀಡುವ ಪ್ರಯತ್ನ ದೇವಸ್ಥಾನದ ಕಡೆಯಿಂದ ನಡೆಯುತ್ತಿದೆ ಎನ್ನುವ ಆರೋಪ  ಟೆಂಡರ್‌ ದಾರರದು. ಒಂದು ಶೌಚಾಲಯದ ನಿರ್ವಹಣೆಗೆ ತಿಂಗಳಿಗೆ 10,000 ರೂಪಾಯಿಯಂತೆ ದೇವಸ್ಥಾನಕ್ಕೆ ನೀಡಲು ಬದ್ದರಾಗಿದ್ದಾಗಲೂ ಏಕೆ ಟೆಂಡರ್‌ ಪ್ರಕ್ರಿಯೆ ನಡೆಸುತ್ತಿಲ್ಲ ಎಂದು ಟೆಂಡರ್‌ದಾರರು ಹೇಳಿದ್ದಾರೆ.

Advertisement

ಇದೀಗ ಶೌಚಾಲಯ ನಿರ್ವಹಣೆಯ ಸಂಗತಿ ನ್ಯಾಯಾಲಯದ ಮೆಟ್ಟಿಲೇರಿದೆ. ಟೆಂಡರ್‌ ಅರ್ಜಿ ಹಾಕಿದವರೂ ಹೋರಾಟದ ಹಾದಿಯಲ್ಲಿದ್ದಾರೆ. ಕಳೆದ ಹಲವು ವರ್ಷಗಳಿಂದಲೂ ಒಬ್ಬರಿಗೇ ಹೇಗೆ ಟೆಂಡರ್‌ ಸಿಗುತ್ತದೆ, ಇದರ ಹಿಂದೆ ಕಾಣದ ಕೈ ಕೆಲಸ ಮಾಡುತ್ತಿದೆ ಎಂದು ಟೆಂಡರ್‌ದಾರ ಬೇಲೂರಿನ ಮನು ಹೇಳುತ್ತಾರೆ. ಈ ಬಗ್ಗೆ ಟೆಂಡರ್‌ ದಾರರೆಲ್ಲರೂ ಸೇರಿ ಜಿಲ್ಲಾಧಿಕಾರಿಗಳಿಗೆ ದೂರು ನೀಡುತ್ತೇವೆ ಹಾಗೂ ಮುಂದಿನ ಕ್ರಮದ ಕಡೆಗೆ ಹೆಜ್ಜೆ ಇರಿಸುತ್ತೇವೆ ಎಂದು ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

12 hours ago

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…

12 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…

16 hours ago

ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!

ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…

19 hours ago

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ

ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ…

23 hours ago

ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ

ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…

24 hours ago