Advertisement
Open ಟಾಕ್

Open Talk | ಕುಕ್ಕೆ ಸುಬ್ರಹ್ಮಣ್ಯದ ಎರಡು ಕಡೆ ಆಶ್ಲೇಷ ಬಲಿ ಪೂಜೆ ನಡೆಸಿದ ಸಚಿವರು…! |

Share

ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಸಚಿವರು ಒಂದೇ ದಿನ ಎರಡು ಕಡೆ ಆಶ್ಲೇಷ ಬಲಿ ಪೂಜೆ ಮಾಡಿರುವುದು  ಈಗ ಭಕ್ತರ ನಡುವೆ ಚರ್ಚೆಗೆ ಕಾರಣವಾಗಿದೆ. ಒಂದೇ ದಿನ, ಒಂದು ಕ್ಷೇತ್ರದ ಎರಡು ಕಡೆ ಒಂದೇ ಸೇವೆ ಮಾಡಿರುವುದರ  ವಿಶೇಷತೆ ಏನು ಹಾಗೂ ಈ ಬಗ್ಗೆ ಇರುವ ಧಾರ್ಮಿಕ ಜಿಜ್ಞಾಸೆಗಳು ಚರ್ಚೆಯ ವಿಷಯ.

ಧಾರ್ಮಿಕ ಆಚರಣೆ ಈ ದೇಶದ ಪ್ರತಿಯೊಬ್ಬನ ಖಾಸಗಿ ವಿಷಯ. ಯಾರು ಎಲ್ಲಿ ಬೇಕಾದರೂ ಪೂಜೆ, ಸೇವೆ ಮಾಡಬಹುದು. ಯಾವ ಧರ್ಮವೂ ಇದಕ್ಕೆ ಹೊರತಲ್ಲ. ಹೇಗೆ ಬೇಕಾದರೂ ದೇವತಾ ಆರಾಧನೆ ಮಾಡಲಿ ಅದು ಖಾಸಗಿ ವಿಷಯ. ಆದರೆ ಸಚಿವರೊಬ್ಬರು ಸಾರ್ವಜನಿಕವಾಗಿ ಮಾಡುವ ಎಲ್ಲಾ ಕಾರ್ಯಗಳು ಸಮಾಜದಲ್ಲಿ ಗಮನ ಸೆಳೆಯುತ್ತದೆ. ಈಗ ಅದೇ ಮಾದರಿಯಲ್ಲಿ ಗಮನ ಸೆಳೆದ ವಿಷಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಚಿವ ಡಾ.ಅಶ್ವತ್ಥ್‌ ನಾರಾಯಣ ಮಾಡಿಸಿರುವ ಆಶ್ಲೇಷ ಬಲಿ ಪೂಜೆ.

ಈ ರಾಜ್ಯದ ಸಚಿವರು ಯಾವುದೇ ಕ್ಷೇತ್ರಕ್ಕೆ ಆಗಮಿಸುವ ವೇಳೆ, ಖಾಸಗಿ ಕಾರ್ಯಕ್ರಮವಾದರೂ ಸರ್ಕಾರವೇ ಎಲ್ಲಾ ವ್ಯವಸ್ಥೆ ಮಾಡುತ್ತದೆ, ಪೊಲೀಸ್‌ ಭದ್ರತೆಯೂ ಇರುತ್ತದೆ. ಕುಕ್ಕೆ ಸುಬ್ರಹ್ಮಣ್ಯವೂ ಸರ್ಕಾರದ ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನ, ಈ ರಾಜ್ಯದ ನಂಬರ್‌ ವನ್‌ ದೇವಸ್ಥಾನ.  ಹೀಗಾಗಿ ಎಲ್ಲಾ ವ್ಯವಸ್ಥೆಗೂ ದೇವಸ್ಥಾನದ ವತಿಯಿಂದಲೇ ಮಾಡಲಾಗುತ್ತದೆ. ಆದರೆ ಸಚಿವರು ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಸಂಪುಟ ನರಸಿಂಹ ಸ್ವಾಮಿ ಮಠದಲ್ಲಿ ಬೆಳಗ್ಗೆ ಆಶ್ಲೇಷ ಬಲಿ ಪೂಜೆ ನಡೆಸಿ ಆ ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಪೂಜೆ ನಡೆಸಿದರು. ಒಂದೇ ದಿನ ಎರಡು ಕಡೆ ಒಂದೇ ಸೇವೆ ಮಾಡಿಸಿರುವುದು  ಈಗ ಭಕ್ತಾದಿಗಳ ನಡುವೆ ಇರುವ ಚರ್ಚೆಯ ವಿಷಯ. ಇದೇ ವಿಷಯಕ್ಕೆ ಸಂಬಂಧಿಸಿ ಈ ಹಿಂದೆ ಸಾಕಷ್ಟು ಚರ್ಚೆಗಳು, ವಾದ-ವಿವಾದಗಳು ನಡೆದಿತ್ತು. ಇದೀಗ ಸಚಿವರೇ ಸೇವೆಗಳನ್ನು ಎರಡು ಕಡೆ ಮಾಡಿಸಿರುವುದು  ಭಕ್ತಾದಿಗಳಲ್ಲಿ  ಚರ್ಚೆಗೆ ಕಾರಣವಾದ ವಿಷಯ.

ಇಲ್ಲಿ ಸರ್ಪಸಂಸ್ಕಾರ ಸೇವೆಗಳು ಕೂಡಾ ಇದೇ ಮಾದರಿಯಲ್ಲಿ ನಡೆದ ಬಗ್ಗೆ ಭಕ್ತರು ಹೇಳುತ್ತಾರೆ. ಇತರ ಭಕ್ತಾದಿಗಳು ಇಲ್ಲಿ ಸೇವೆಯನ್ನು ಎರಡು ಕಡೆ ಮಾಡಿಸಿದ್ದೂ ಇದೆ. ಇದೇ ಕಾರಣದಿಂದ ಈ ಹಿಂದೆ ಪ್ರಕರಣಗಳು ದಾಖಲಾಗಿತ್ತು. ಇದು ಧಾರ್ಮಿಕ ಸೂಕ್ಷ್ಮ ವಿಷಯವಾದ್ದರಿಂದ ಚರ್ಚೆಯಾಗದೆ , ವಿದ್ವಾಂಸರೂ ಈ ಬಗ್ಗೆ ಮೌನ ವಹಿಸಿ ಪ್ರಕರಣಗಳು ಅಲ್ಲಿಗೇ ತಿಳಿಯಾಗಿತ್ತು.

ಧಾರ್ಮಿಕ ಸಂಗತಿಗಳು ಯಾವತ್ತೂ ಖಾಸಗಿ, ಅದು ಪ್ರಶ್ನಾತೀತ, ಅದು ನಂಬಿಕೆಯ ಪ್ರಶ್ನೆ. ಇಲ್ಲಿ ಸಚಿವರು ಅಥವಾ ಪ್ರಮುಖರು ಎರಡು ಕಡೆಗಳಲ್ಲಿ ಒಂದೇ ಸೇವೆಗಳನ್ನು ಮಾಡುವಾಗ ಸಾಮಾನ್ಯ ಭಕ್ತರಲ್ಲಿ  ಅದು ಚರ್ಚೆ ಹಾಗೂ ಚಿಂತನೆಗೆ ಕಾರಣವಾಗುತ್ತದೆ. ನಂಬಿಕೆಗಳ ಮೇಲೆಯೇ ಚರ್ಚೆಯಾಗುತ್ತದೆ. ಹೀಗಾಗಿ ಸಾಮಾನ್ಯ ಭಕ್ತನಿಗೆ ಈ ಮಾದರಿಯಲ್ಲಿ ಒಂದೇ ಕ್ಷೇತ್ರದಲ್ಲಿ ಎರಡೆರಡು ಕಡೆ ಒಂದೇ ಸೇವೆ ಮಾಡಿಸಲು ಸಾಧ್ಯವೇ ? ಎನ್ನುವುದು  ಧಾರ್ಮಿಕ ನೆಲೆಗಟ್ಟಿನ ಚರ್ಚೆ.

ಇಲ್ಲಿ ಗೋವು ರಾಜಕೀಯ ವಿಷಯವಾಗುತ್ತದೆ, ಧರ್ಮ ರಾಜಕೀಯ ವಿಷಯವಾಗುತ್ತದೆ. ಅತಿ ಸೂಕ್ಷ್ಮ ಸಂಗತಿಯಾಗಿರುವ ಧರ್ಮವು ರಾಜಕೀಯವಾಗಿ ಚರ್ಚೆಯಾಗುವಾಗ, ರಾಜಕೀಯವಾಗಿ ಮುನ್ನೆಲೆಗೆ ಬರುವಾಗ,  ಇಂತಹ ಸೂಕ್ಷ್ಮ ಸಂಗತಿಗಳೂ ಏಕೆ ರಾಜಕೀಯವಾಗಿ ಚರ್ಚೆಯಾಗುವುದಿಲ್ಲ ಎನ್ನುವುದು  ಪ್ರಶ್ನೆ.

Open Talk
ನಿಮ್ಮ ಅಭಿಪ್ರಾಯಗಳಿಗೆ :

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

1 hour ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

1 hour ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

2 hours ago

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

11 hours ago

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

11 hours ago

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

15 hours ago