Advertisement
MIRROR FOCUS

ಕುಕ್ಕೆಯಲ್ಲಿ ಆಶ್ಲೇಷ ಬಲಿ..! ಈಗ Online ವ್ಯವಹಾರ…! | ದೈವ ಕೋಲದ ಬಳಿಕ ಈಗ ಪೂಜೆಯೂ ವ್ಯವಹಾರವೇ…? |

Share

ಈಚೆಗೆ ವೀಕೆಂಡ್‌ ಟೂರ್‌ನಲ್ಲಿ ತುಳುನಾಡಿನ ದೈವಾರಾಧನೆಯೂ ಸೇರಿದಂತೆ ಪ್ಯಾಕೇಜ್‌ ವ್ಯವಸ್ಥೆಯಲ್ಲಿ  ಕಂಡುಬಂದ ಉದ್ಯಮವೊಂದು ವಿರೋಧದ ಕಾರಣದಿಂದ ಸ್ಥಗಿತವಾಯಿತು. ಇದೀಗ ಕುಕ್ಕೆಯಲ್ಲಿ ಆಶ್ಲೇಷ ಬಲಿಯೂ ವ್ಯವಹಾರವಾಗಿದೆ. Online ನಲ್ಲಿ ಬುಕಿಂಗ್‌ ಮಾಡಿ ಪ್ರಸಾದವೂ ಕೊರಿಯರ್‌ ಮೂಲಕ ಕಳುಹಿಸುವ ವ್ಯವಸ್ಥೆ ಇದಾಗಿದೆ..!. 

ರಾಜ್ಯದ ನಂಬರ್‌ ವನ್‌ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ. ಸರ್ಪ ದೋಷ ನಿವಾರಣೆಯ ಪ್ರಸಿದ್ಧ ಕ್ಷೇತ್ರ. ಈಗ ಇದುವೇ ಕೆಲವು ಕಡೆ ಉದ್ಯಮದ ಭಾಗವಾಗಿ ಬೆಳೆದಿದೆ. ಧಾರ್ಮಿಕ ಭಾವನೆಗಳೂ ಉದ್ಯಮ, ವ್ಯವಹಾರವಾದಾಗಲೂ ಯಾವ ಆಡಳಿತವೂ ಧ್ವನಿ ಎತ್ತುತ್ತಿಲ್ಲ. ಮೌನವಾಗಿದೆ ಎಂದು ಭಕ್ತಾದಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇವ-ಸೇವಾ ಎನ್ನುವ ಆನ್‌ ಲೈನ್‌ ವ್ಯವಹಾರದ ಧಾರ್ಮಿಕ ಕಾರ್ಯಕ್ರಮದ ಡಿಜಿಟಲ್‌ ಪ್ಲಾಟ್‌ ಫಾರಂನಲ್ಲಿ ಶುಕ್ರವಾರ ಬೆಳಗಿನಿಂದ ಜಾಹೀರಾತು ರೂಪದಲ್ಲಿ ಪ್ರಸಾರವಾಗುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷ ಬಲಿ ಪೂಜೆಯಂದು ವಿಶೇಷವಾಗಿ ಆಶ್ಲೇಷ ಬಲಿ ಪೂಜೆ ಮಾಡಲಾಗುತ್ತದೆ. ತಮ್ಮ ದೋಷ ನಿವಾರಣೆಗೆ ಇಲ್ಲಿ ಬುಕಿಂಗ್‌ ಮಾಡಿ ಸೇವೆ ಸಲ್ಲಿಸಬಹುದು. ರಾಶಿ ಹಾಗೂ ನಕ್ಷತ್ರವನ್ನು ತಿಳಿಸಿದರೆ ಪುರೋಹಿತರು ಸಂಕಲ್ಪ ಮಾಡಿ ತಮ್ಮ ದೋಷ ನಿವಾರಣೆಗೆ ಪೂಜೆ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ತಿಳಿಸಲಾಗಿದೆ. ಈ ಪೂಜೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತದೆ, ನೇರ ಪ್ರಸಾರದ ಮೂಲಕವೂ ನೋಡಬಹುದು ಎಂದು ಹೇಳಲಾಗಿದೆ. ಇದರ ಜೊತೆಗೆ ಪ್ರಸಾದವನ್ನು ಕೂಡಾ ಕಳುಹಿಸಿ ಕೊಡುವ ವ್ಯವಸ್ಥೆ ಇದೆ ಎಂದು ಉಲ್ಲೇಖಿಸಲಾಗಿದೆ.

ಆದರೆ ಕುಕ್ಕೆ ಸುಬ್ರಹ್ಮಣ್ಯದ ಎಲ್ಲಿ ಪೂಜೆ ನಡೆಸಲಾಗುತ್ತದೆ ಎನ್ನುವ ಮಾಹಿತಿ ಇಲ್ಲ. ದೇವಸ್ಥಾನದಲ್ಲೋ ಅಥವಾ ಬೇರೆಲ್ಲಾದರೂ ನಡೆಯುತ್ತದೆಯೂ ಎನ್ನುವ ಸ್ಪಷ್ಟ ಮಾಹಿತಿ ಇಲ್ಲ. ಬಹುತೇಕ ಉತ್ತರ ಭಾರತದ ಮಂದಿ ಈ ಡಿಜಿಟಲ್‌ ಪ್ಲಾಟ್‌ ಫಾರಂಗೆ ಸ್ಪಂದನೆ ನೀಡಿದ್ದು ಸಂಜೆಯ ವೇಳೆಗೆ 2 ಸಾವಿರಕ್ಕೂ ಅಧಿಕ ಮಂದಿ ಸ್ಪಂದಿಸಿದ್ದಾರೆ. 60 ಕ್ಕೂ ಹೆಚ್ಚು ಜನರು ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಪೇಸ್‌ ಬುಕ್‌ ಮೂಲಕ ಪ್ರಚಾರ ನೀಡಲಾಗಿದೆ.

ಸಂಜೆಯವರೆಗೂ ಈ ಪೂಜೆ ಎಲ್ಲಿ ನಡೆಯುತ್ತದೆ, ಯಾರು ನಡೆಸುತ್ತಾರೆ ಎನ್ನುವ ಮಾಹಿತಿ ಇಲ್ಲ. ಈ ಬಗ್ಗೆ ಇದುವರೆಗೂ ಯಾವುದೇ ಆಡಳಿತವು ಯಾವ ಪ್ರತಿಕ್ರಿಯೆಯೂ ನೀಡಿಲ್ಲ. ಕುಕ್ಕೆ ಸುಬ್ರಹ್ಮಣ್ಯ ಎನ್ನುವ ಹೆಸರು ಉಲ್ಲೇಖ ಮಾಡಿರುವುದರಿಂದ ದೇವಸ್ಥಾನವು ಈ ಬಗ್ಗೆ ಸ್ಪಷ್ಟನೆ ನೀಡಬೇಕಾಗಿತ್ತು, ಇದು ದೇವಸ್ಥಾನದ ವತಿಯಿಂದಲೇ ಮಾಡಲಾಗುತ್ತದೆಯೇ, ಅಥವಾ ಬೇರೆ ಯಾರಾದರೂ ಇದರಲ್ಲಿ ಭಾಗಿಯಾಗಿದ್ದಾರೆಯೇ ಎಂಬುದರ ಬಗ್ಗೆ ಸ್ಪಷ್ಟನೆ ಬೇಕಾಗಿತ್ತು ಎಂಬುದು ಭಕ್ತರ ಅಪೇಕ್ಷೆಯಾಗಿದೆ. ಆಶ್ಲೇಷ ಬಲಿ ಸಹಿತ ಯಾವ ಪೂಜೆಗಳು ಎಲ್ಲಿ ಬೇಕಾದರೂ ನಡೆಯಬಹುದು, ಆದರೆ ಕುಕ್ಕೆ ಸುಬ್ರಹ್ಮಣ್ಯದ ಹೆಸರಿನಲ್ಲಿ, ನಾಗದೋಷ ನಿವಾರಣೆಯ ಹೆಸರಿನಲ್ಲಿ ನಡೆಯುವ ಪೂಜೆ ಎಲ್ಲಿ ನಡೆಯುತ್ತದೆ,ಯಾರು ನಡೆಸುತ್ತಾರೆ ಎಂಬುದರ ಉಲ್ಲೇಖ ಇರಬೇಕಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

6 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

8 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

14 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

14 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

21 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

22 hours ago