Advertisement
MIRROR FOCUS

ಕುಕ್ಕೆಯಲ್ಲಿ ಆಶ್ಲೇಷ ಬಲಿ..! ಈಗ Online ವ್ಯವಹಾರ…! | ದೈವ ಕೋಲದ ಬಳಿಕ ಈಗ ಪೂಜೆಯೂ ವ್ಯವಹಾರವೇ…? |

Share

ಈಚೆಗೆ ವೀಕೆಂಡ್‌ ಟೂರ್‌ನಲ್ಲಿ ತುಳುನಾಡಿನ ದೈವಾರಾಧನೆಯೂ ಸೇರಿದಂತೆ ಪ್ಯಾಕೇಜ್‌ ವ್ಯವಸ್ಥೆಯಲ್ಲಿ  ಕಂಡುಬಂದ ಉದ್ಯಮವೊಂದು ವಿರೋಧದ ಕಾರಣದಿಂದ ಸ್ಥಗಿತವಾಯಿತು. ಇದೀಗ ಕುಕ್ಕೆಯಲ್ಲಿ ಆಶ್ಲೇಷ ಬಲಿಯೂ ವ್ಯವಹಾರವಾಗಿದೆ. Online ನಲ್ಲಿ ಬುಕಿಂಗ್‌ ಮಾಡಿ ಪ್ರಸಾದವೂ ಕೊರಿಯರ್‌ ಮೂಲಕ ಕಳುಹಿಸುವ ವ್ಯವಸ್ಥೆ ಇದಾಗಿದೆ..!. 

ರಾಜ್ಯದ ನಂಬರ್‌ ವನ್‌ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ. ಸರ್ಪ ದೋಷ ನಿವಾರಣೆಯ ಪ್ರಸಿದ್ಧ ಕ್ಷೇತ್ರ. ಈಗ ಇದುವೇ ಕೆಲವು ಕಡೆ ಉದ್ಯಮದ ಭಾಗವಾಗಿ ಬೆಳೆದಿದೆ. ಧಾರ್ಮಿಕ ಭಾವನೆಗಳೂ ಉದ್ಯಮ, ವ್ಯವಹಾರವಾದಾಗಲೂ ಯಾವ ಆಡಳಿತವೂ ಧ್ವನಿ ಎತ್ತುತ್ತಿಲ್ಲ. ಮೌನವಾಗಿದೆ ಎಂದು ಭಕ್ತಾದಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇವ-ಸೇವಾ ಎನ್ನುವ ಆನ್‌ ಲೈನ್‌ ವ್ಯವಹಾರದ ಧಾರ್ಮಿಕ ಕಾರ್ಯಕ್ರಮದ ಡಿಜಿಟಲ್‌ ಪ್ಲಾಟ್‌ ಫಾರಂನಲ್ಲಿ ಶುಕ್ರವಾರ ಬೆಳಗಿನಿಂದ ಜಾಹೀರಾತು ರೂಪದಲ್ಲಿ ಪ್ರಸಾರವಾಗುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷ ಬಲಿ ಪೂಜೆಯಂದು ವಿಶೇಷವಾಗಿ ಆಶ್ಲೇಷ ಬಲಿ ಪೂಜೆ ಮಾಡಲಾಗುತ್ತದೆ. ತಮ್ಮ ದೋಷ ನಿವಾರಣೆಗೆ ಇಲ್ಲಿ ಬುಕಿಂಗ್‌ ಮಾಡಿ ಸೇವೆ ಸಲ್ಲಿಸಬಹುದು. ರಾಶಿ ಹಾಗೂ ನಕ್ಷತ್ರವನ್ನು ತಿಳಿಸಿದರೆ ಪುರೋಹಿತರು ಸಂಕಲ್ಪ ಮಾಡಿ ತಮ್ಮ ದೋಷ ನಿವಾರಣೆಗೆ ಪೂಜೆ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ತಿಳಿಸಲಾಗಿದೆ. ಈ ಪೂಜೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತದೆ, ನೇರ ಪ್ರಸಾರದ ಮೂಲಕವೂ ನೋಡಬಹುದು ಎಂದು ಹೇಳಲಾಗಿದೆ. ಇದರ ಜೊತೆಗೆ ಪ್ರಸಾದವನ್ನು ಕೂಡಾ ಕಳುಹಿಸಿ ಕೊಡುವ ವ್ಯವಸ್ಥೆ ಇದೆ ಎಂದು ಉಲ್ಲೇಖಿಸಲಾಗಿದೆ.

ಆದರೆ ಕುಕ್ಕೆ ಸುಬ್ರಹ್ಮಣ್ಯದ ಎಲ್ಲಿ ಪೂಜೆ ನಡೆಸಲಾಗುತ್ತದೆ ಎನ್ನುವ ಮಾಹಿತಿ ಇಲ್ಲ. ದೇವಸ್ಥಾನದಲ್ಲೋ ಅಥವಾ ಬೇರೆಲ್ಲಾದರೂ ನಡೆಯುತ್ತದೆಯೂ ಎನ್ನುವ ಸ್ಪಷ್ಟ ಮಾಹಿತಿ ಇಲ್ಲ. ಬಹುತೇಕ ಉತ್ತರ ಭಾರತದ ಮಂದಿ ಈ ಡಿಜಿಟಲ್‌ ಪ್ಲಾಟ್‌ ಫಾರಂಗೆ ಸ್ಪಂದನೆ ನೀಡಿದ್ದು ಸಂಜೆಯ ವೇಳೆಗೆ 2 ಸಾವಿರಕ್ಕೂ ಅಧಿಕ ಮಂದಿ ಸ್ಪಂದಿಸಿದ್ದಾರೆ. 60 ಕ್ಕೂ ಹೆಚ್ಚು ಜನರು ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಪೇಸ್‌ ಬುಕ್‌ ಮೂಲಕ ಪ್ರಚಾರ ನೀಡಲಾಗಿದೆ.

ಸಂಜೆಯವರೆಗೂ ಈ ಪೂಜೆ ಎಲ್ಲಿ ನಡೆಯುತ್ತದೆ, ಯಾರು ನಡೆಸುತ್ತಾರೆ ಎನ್ನುವ ಮಾಹಿತಿ ಇಲ್ಲ. ಈ ಬಗ್ಗೆ ಇದುವರೆಗೂ ಯಾವುದೇ ಆಡಳಿತವು ಯಾವ ಪ್ರತಿಕ್ರಿಯೆಯೂ ನೀಡಿಲ್ಲ. ಕುಕ್ಕೆ ಸುಬ್ರಹ್ಮಣ್ಯ ಎನ್ನುವ ಹೆಸರು ಉಲ್ಲೇಖ ಮಾಡಿರುವುದರಿಂದ ದೇವಸ್ಥಾನವು ಈ ಬಗ್ಗೆ ಸ್ಪಷ್ಟನೆ ನೀಡಬೇಕಾಗಿತ್ತು, ಇದು ದೇವಸ್ಥಾನದ ವತಿಯಿಂದಲೇ ಮಾಡಲಾಗುತ್ತದೆಯೇ, ಅಥವಾ ಬೇರೆ ಯಾರಾದರೂ ಇದರಲ್ಲಿ ಭಾಗಿಯಾಗಿದ್ದಾರೆಯೇ ಎಂಬುದರ ಬಗ್ಗೆ ಸ್ಪಷ್ಟನೆ ಬೇಕಾಗಿತ್ತು ಎಂಬುದು ಭಕ್ತರ ಅಪೇಕ್ಷೆಯಾಗಿದೆ. ಆಶ್ಲೇಷ ಬಲಿ ಸಹಿತ ಯಾವ ಪೂಜೆಗಳು ಎಲ್ಲಿ ಬೇಕಾದರೂ ನಡೆಯಬಹುದು, ಆದರೆ ಕುಕ್ಕೆ ಸುಬ್ರಹ್ಮಣ್ಯದ ಹೆಸರಿನಲ್ಲಿ, ನಾಗದೋಷ ನಿವಾರಣೆಯ ಹೆಸರಿನಲ್ಲಿ ನಡೆಯುವ ಪೂಜೆ ಎಲ್ಲಿ ನಡೆಯುತ್ತದೆ,ಯಾರು ನಡೆಸುತ್ತಾರೆ ಎಂಬುದರ ಉಲ್ಲೇಖ ಇರಬೇಕಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

7 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

7 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago