ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ‌ಸರ್ಪ ಸಂಸ್ಕಾರ ಸೇವಾ ದರ ಹೆಚ್ಚಳ |

September 22, 2022
7:18 PM

ದೇಶದ ಅತ್ಯಂತ ಪ್ರಸಿದ್ಧ ನಾಗಾರಾಧನೆಯ ಕ್ಷೇತ್ರ  ಕುಕ್ಕೆ ಶ್ರೀ ಸುಬ್ರಹ್ಮಣ್ಯ(Kukke subrahmanya) ದೇವಸ್ಥಾನದಲ್ಲಿ ನಡೆಯುವ ಸರ್ಪ ಸಂಸ್ಕಾರ ಸೇವಾ ದರವನ್ನು ಹೆಚ್ಚಳ ಮಾಡಲಾಗಿದೆ.ಪರಿಷ್ಕೃತ ದರದಂತೆ ಈ ಹಿಂದಿನ ದರಕ್ಕಿಂತ ದರವನ್ನು ಭಾರೀ ಹೆಚ್ಚಳ ಮಾಡಲಾಗಿದೆ.

Advertisement
Advertisement
Advertisement

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಸೇವೆಗಳಲ್ಲಿ ಒಂದಾಗಿರುವ  ಸರ್ಪ ಸಂಸ್ಕಾರ (Sarpa samskara) ಸೇವಾ ದರವನ್ನು ಪರಿಷ್ಕರಿಸಲಾಗಿದೆ. ಈ ಮೊದಲು 3,200 ರೂಪಾಯಿ ಇದ್ದ ಸರ್ಪ ಸಂಸ್ಕಾರ ಸೇವೆಯ ದರವನ್ನು 4,200ಕ್ಕೆ ಹೆಚ್ಚಿಸಲಾಗಿದೆ. ಈ ಮೂಲಕ ಸರ್ಪ ಸಂಸ್ಕಾರ ದರದಲ್ಲಿ ಒಂದು ಸಾವಿರ ಹೆಚ್ಚಿಸಲಾಗಿದೆ. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯ ದೇವಳದಿಂದ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಲಾಗಿದೆ.

Advertisement

ಈ ಹಿಂದಿನ ಸೇವಾ ದರದಲ್ಲಿಯೇ ಹಲವು ದೇವಸ್ಥಾನದ ಹೊರತಾಗಿಯೂ ಹಲವು ಕಡೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ ನಡೆಯುತ್ತಿತ್ತು. ನಾಗ ದೋಷ ನಿವಾರಣೆಗೆ ದೇಶದ ಹಲವಾರು ಮಂದಿ ಸರ್ಪಸಂಸ್ಕಾರ, ಆಶ್ಲೇಷ ಬಲಿ ಪೂಜೆಯನ್ನು ನೆರವೇರಿಸುತ್ತಾರೆ. ಕ್ರಿಕೆಟ್‌ ತಾರೆ ಸಚಿನ್‌ ತೆಂಡೂಲ್ಕರ್‌ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ಸರ್ಪಸಂಸ್ಕಾರ ಸೇವೆ ಮಾಡಿಸಿದ ಬಳಿಕ ದೇಶದಾದ್ಯಂತ ಕುಕ್ಕೆ ಸುಬ್ರಹ್ಮಣ್ಯದ ಸರ್ಪಸಂಸ್ಕಾರ ಸೇವೆ ಮತ್ತಷ್ಟು ವ್ಯಾಪಕವಾಗಿ ಪ್ರಚಾರವಾಗಿತ್ತು.

ಸರ್ಪ ಹತ್ಯೆ ದೋಷ ಇದ್ದವರು ಮಾತ್ರವೇ ಈ ಹಿಂದೆ ಈ ಸೇವೆ ಮಾಡುತ್ತಿದ್ದರೂ ಈಚೆಗೆ ಎಲ್ಲಾ ಭಕ್ತರೂ ದೋಷ ನಿವಾರಣೆಗಾಗಿ ಸರ್ಪಸಂಸ್ಕಾರ ನಡೆಸುತ್ತಿದ್ದಾರೆ. ಆಶ್ಲೇಷ ಬಲಿ ಪೂಜೆಯು ಸುಮಾರು 10 ವರ್ಷಗಳ ಹಿಂದೆ ಸರ್ಪದೋಷ ನಿವಾರಣೆಗೆ ನಡೆಸುತ್ತಿದ್ದ ಸೇವೆಯಾಗಿತ್ತು. ಇದೀಗ ಸಾರ್ವತ್ರಿಕವಾಗಿ ಸರ್ಪಸಂಸ್ಕಾರ ನಡೆಸುವುದರಿಂದ ಕುಕ್ಕೆ ಸುಬ್ರಹ್ಮಣ್ಯದ ಹಲವು ಕಡೆಗಳಲ್ಲಿ ಖಾಸಗಿಯಾಗಿಯೂ ಸೇವೆಗಳು ನಡೆಯುತ್ತಿವೆ. ಈಗ ಸೇವಾ ದರ ಹೆಚ್ಚಿರುವುದರಿಂದ ಖಾಸಗಿಯಾಗಿ ನಡೆಯುವ ಸೇವೆಗಳಿಗೆ ಹೆಚ್ಚಿನ ಮಹತ್ವ ನೀಡಿದಂತಾಗಿದೆ ಎಂದು ಭಕ್ತರು ಅಭಿಪ್ರಾಯ ಪಟ್ಟಿದ್ದಾರೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಂಗಳೂರಿನಲ್ಲಿ ನೀರಿಗಾಗಿ ಖರ್ಚು…! | ಜಲಮಂಡಳಿಗೆ ಆರ್ಥಿಕ ಸಂಕಷ್ಟ..!
March 29, 2024
3:03 PM
by: ದ ರೂರಲ್ ಮಿರರ್.ಕಾಂ
Karnataka Weather | 28-03-2024 | ಕೆಲವು ಕಡೆ ತುಂತುರು ಮಳೆ | ಮಾ.31 ನಂತರ ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ |
March 28, 2024
1:19 PM
by: ಸಾಯಿಶೇಖರ್ ಕರಿಕಳ
ಬರ ಹಿನ್ನೆಲೆ | ಮೈಸೂರು ಜಿಲ್ಲೆಯಲ್ಲಿ ಪಂಪ್‌ಸೆಟ್ ಬಳಸಿ ಕೃಷಿಗೆ ನದಿ ನೀರು ಬಳಕೆ ನಿಷೇಧ |
March 27, 2024
10:01 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಪ್ರಕರಣಗಳಲ್ಲಿ ದೂರು ದಾಖಲಾಗುತ್ತಿಲ್ಲವೇಕೆ…? | ಆರೋಪಿಗಳು ಪತ್ತೆಯಾಗುತ್ತಿಲ್ಲವೇಕೆ…? |
March 27, 2024
9:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror