Advertisement
ಧಾರ್ಮಿಕ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ‌ಸರ್ಪ ಸಂಸ್ಕಾರ ಸೇವಾ ದರ ಹೆಚ್ಚಳ |

Share

ದೇಶದ ಅತ್ಯಂತ ಪ್ರಸಿದ್ಧ ನಾಗಾರಾಧನೆಯ ಕ್ಷೇತ್ರ  ಕುಕ್ಕೆ ಶ್ರೀ ಸುಬ್ರಹ್ಮಣ್ಯ(Kukke subrahmanya) ದೇವಸ್ಥಾನದಲ್ಲಿ ನಡೆಯುವ ಸರ್ಪ ಸಂಸ್ಕಾರ ಸೇವಾ ದರವನ್ನು ಹೆಚ್ಚಳ ಮಾಡಲಾಗಿದೆ.ಪರಿಷ್ಕೃತ ದರದಂತೆ ಈ ಹಿಂದಿನ ದರಕ್ಕಿಂತ ದರವನ್ನು ಭಾರೀ ಹೆಚ್ಚಳ ಮಾಡಲಾಗಿದೆ.

Advertisement
Advertisement
Advertisement
Advertisement

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಸೇವೆಗಳಲ್ಲಿ ಒಂದಾಗಿರುವ  ಸರ್ಪ ಸಂಸ್ಕಾರ (Sarpa samskara) ಸೇವಾ ದರವನ್ನು ಪರಿಷ್ಕರಿಸಲಾಗಿದೆ. ಈ ಮೊದಲು 3,200 ರೂಪಾಯಿ ಇದ್ದ ಸರ್ಪ ಸಂಸ್ಕಾರ ಸೇವೆಯ ದರವನ್ನು 4,200ಕ್ಕೆ ಹೆಚ್ಚಿಸಲಾಗಿದೆ. ಈ ಮೂಲಕ ಸರ್ಪ ಸಂಸ್ಕಾರ ದರದಲ್ಲಿ ಒಂದು ಸಾವಿರ ಹೆಚ್ಚಿಸಲಾಗಿದೆ. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯ ದೇವಳದಿಂದ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಲಾಗಿದೆ.

Advertisement

ಈ ಹಿಂದಿನ ಸೇವಾ ದರದಲ್ಲಿಯೇ ಹಲವು ದೇವಸ್ಥಾನದ ಹೊರತಾಗಿಯೂ ಹಲವು ಕಡೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ ನಡೆಯುತ್ತಿತ್ತು. ನಾಗ ದೋಷ ನಿವಾರಣೆಗೆ ದೇಶದ ಹಲವಾರು ಮಂದಿ ಸರ್ಪಸಂಸ್ಕಾರ, ಆಶ್ಲೇಷ ಬಲಿ ಪೂಜೆಯನ್ನು ನೆರವೇರಿಸುತ್ತಾರೆ. ಕ್ರಿಕೆಟ್‌ ತಾರೆ ಸಚಿನ್‌ ತೆಂಡೂಲ್ಕರ್‌ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ಸರ್ಪಸಂಸ್ಕಾರ ಸೇವೆ ಮಾಡಿಸಿದ ಬಳಿಕ ದೇಶದಾದ್ಯಂತ ಕುಕ್ಕೆ ಸುಬ್ರಹ್ಮಣ್ಯದ ಸರ್ಪಸಂಸ್ಕಾರ ಸೇವೆ ಮತ್ತಷ್ಟು ವ್ಯಾಪಕವಾಗಿ ಪ್ರಚಾರವಾಗಿತ್ತು.

ಸರ್ಪ ಹತ್ಯೆ ದೋಷ ಇದ್ದವರು ಮಾತ್ರವೇ ಈ ಹಿಂದೆ ಈ ಸೇವೆ ಮಾಡುತ್ತಿದ್ದರೂ ಈಚೆಗೆ ಎಲ್ಲಾ ಭಕ್ತರೂ ದೋಷ ನಿವಾರಣೆಗಾಗಿ ಸರ್ಪಸಂಸ್ಕಾರ ನಡೆಸುತ್ತಿದ್ದಾರೆ. ಆಶ್ಲೇಷ ಬಲಿ ಪೂಜೆಯು ಸುಮಾರು 10 ವರ್ಷಗಳ ಹಿಂದೆ ಸರ್ಪದೋಷ ನಿವಾರಣೆಗೆ ನಡೆಸುತ್ತಿದ್ದ ಸೇವೆಯಾಗಿತ್ತು. ಇದೀಗ ಸಾರ್ವತ್ರಿಕವಾಗಿ ಸರ್ಪಸಂಸ್ಕಾರ ನಡೆಸುವುದರಿಂದ ಕುಕ್ಕೆ ಸುಬ್ರಹ್ಮಣ್ಯದ ಹಲವು ಕಡೆಗಳಲ್ಲಿ ಖಾಸಗಿಯಾಗಿಯೂ ಸೇವೆಗಳು ನಡೆಯುತ್ತಿವೆ. ಈಗ ಸೇವಾ ದರ ಹೆಚ್ಚಿರುವುದರಿಂದ ಖಾಸಗಿಯಾಗಿ ನಡೆಯುವ ಸೇವೆಗಳಿಗೆ ಹೆಚ್ಚಿನ ಮಹತ್ವ ನೀಡಿದಂತಾಗಿದೆ ಎಂದು ಭಕ್ತರು ಅಭಿಪ್ರಾಯ ಪಟ್ಟಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆ | ಹವಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…

1 hour ago

ಕುಂಭಸ್ನಾನ ಮತ್ತು ವಿಜ್ಞಾನ

ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…

2 hours ago

ಹವಾಮಾನ ವರದಿ | 27-02-2025 | ಮಳೆಯ ಸಾಧ್ಯತೆ ಕ್ಷೀಣ | ಒಣ ಹವೆ ಮುಂದುವರಿಕೆ | ಕೆಲವು ಕಡೆ ತುಂತುರು ಮಳೆ ನಿರೀಕ್ಷೆ |

ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.

12 hours ago

ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ | ಅಹೋ ರಾತ್ರಿ ಶಿವ ಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ

ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…

23 hours ago

ಈಶಾ ಫೌಂಡೇಷನ್ ನಿಂದ ಶಿವರಾತ್ರಿ | ಆತ್ಮ ಜಾಗೃತಿಯ ರಾತ್ರಿ, ಆತ್ಮಕ್ಕೆ ಮೂಲ ಆಧಾರ

ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…

23 hours ago

ಶಿವರಾತ್ರಿ | ನೇಪಾಳದ ಪಶುಪತಿನಾಥನಿಗೆ ವಿಶೇಷ ಪೂಜೆ- ಲಕ್ಷಾಂತರ ಭಕ್ತಾದಿಗಳಿಂದ ದರ್ಶನ

ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…

23 hours ago