Advertisement
ಧಾರ್ಮಿಕ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ‌ಸರ್ಪ ಸಂಸ್ಕಾರ ಸೇವಾ ದರ ಹೆಚ್ಚಳ |

Share

ದೇಶದ ಅತ್ಯಂತ ಪ್ರಸಿದ್ಧ ನಾಗಾರಾಧನೆಯ ಕ್ಷೇತ್ರ  ಕುಕ್ಕೆ ಶ್ರೀ ಸುಬ್ರಹ್ಮಣ್ಯ(Kukke subrahmanya) ದೇವಸ್ಥಾನದಲ್ಲಿ ನಡೆಯುವ ಸರ್ಪ ಸಂಸ್ಕಾರ ಸೇವಾ ದರವನ್ನು ಹೆಚ್ಚಳ ಮಾಡಲಾಗಿದೆ.ಪರಿಷ್ಕೃತ ದರದಂತೆ ಈ ಹಿಂದಿನ ದರಕ್ಕಿಂತ ದರವನ್ನು ಭಾರೀ ಹೆಚ್ಚಳ ಮಾಡಲಾಗಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಸೇವೆಗಳಲ್ಲಿ ಒಂದಾಗಿರುವ  ಸರ್ಪ ಸಂಸ್ಕಾರ (Sarpa samskara) ಸೇವಾ ದರವನ್ನು ಪರಿಷ್ಕರಿಸಲಾಗಿದೆ. ಈ ಮೊದಲು 3,200 ರೂಪಾಯಿ ಇದ್ದ ಸರ್ಪ ಸಂಸ್ಕಾರ ಸೇವೆಯ ದರವನ್ನು 4,200ಕ್ಕೆ ಹೆಚ್ಚಿಸಲಾಗಿದೆ. ಈ ಮೂಲಕ ಸರ್ಪ ಸಂಸ್ಕಾರ ದರದಲ್ಲಿ ಒಂದು ಸಾವಿರ ಹೆಚ್ಚಿಸಲಾಗಿದೆ. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯ ದೇವಳದಿಂದ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಲಾಗಿದೆ.

ಈ ಹಿಂದಿನ ಸೇವಾ ದರದಲ್ಲಿಯೇ ಹಲವು ದೇವಸ್ಥಾನದ ಹೊರತಾಗಿಯೂ ಹಲವು ಕಡೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ ನಡೆಯುತ್ತಿತ್ತು. ನಾಗ ದೋಷ ನಿವಾರಣೆಗೆ ದೇಶದ ಹಲವಾರು ಮಂದಿ ಸರ್ಪಸಂಸ್ಕಾರ, ಆಶ್ಲೇಷ ಬಲಿ ಪೂಜೆಯನ್ನು ನೆರವೇರಿಸುತ್ತಾರೆ. ಕ್ರಿಕೆಟ್‌ ತಾರೆ ಸಚಿನ್‌ ತೆಂಡೂಲ್ಕರ್‌ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ಸರ್ಪಸಂಸ್ಕಾರ ಸೇವೆ ಮಾಡಿಸಿದ ಬಳಿಕ ದೇಶದಾದ್ಯಂತ ಕುಕ್ಕೆ ಸುಬ್ರಹ್ಮಣ್ಯದ ಸರ್ಪಸಂಸ್ಕಾರ ಸೇವೆ ಮತ್ತಷ್ಟು ವ್ಯಾಪಕವಾಗಿ ಪ್ರಚಾರವಾಗಿತ್ತು.

ಸರ್ಪ ಹತ್ಯೆ ದೋಷ ಇದ್ದವರು ಮಾತ್ರವೇ ಈ ಹಿಂದೆ ಈ ಸೇವೆ ಮಾಡುತ್ತಿದ್ದರೂ ಈಚೆಗೆ ಎಲ್ಲಾ ಭಕ್ತರೂ ದೋಷ ನಿವಾರಣೆಗಾಗಿ ಸರ್ಪಸಂಸ್ಕಾರ ನಡೆಸುತ್ತಿದ್ದಾರೆ. ಆಶ್ಲೇಷ ಬಲಿ ಪೂಜೆಯು ಸುಮಾರು 10 ವರ್ಷಗಳ ಹಿಂದೆ ಸರ್ಪದೋಷ ನಿವಾರಣೆಗೆ ನಡೆಸುತ್ತಿದ್ದ ಸೇವೆಯಾಗಿತ್ತು. ಇದೀಗ ಸಾರ್ವತ್ರಿಕವಾಗಿ ಸರ್ಪಸಂಸ್ಕಾರ ನಡೆಸುವುದರಿಂದ ಕುಕ್ಕೆ ಸುಬ್ರಹ್ಮಣ್ಯದ ಹಲವು ಕಡೆಗಳಲ್ಲಿ ಖಾಸಗಿಯಾಗಿಯೂ ಸೇವೆಗಳು ನಡೆಯುತ್ತಿವೆ. ಈಗ ಸೇವಾ ದರ ಹೆಚ್ಚಿರುವುದರಿಂದ ಖಾಸಗಿಯಾಗಿ ನಡೆಯುವ ಸೇವೆಗಳಿಗೆ ಹೆಚ್ಚಿನ ಮಹತ್ವ ನೀಡಿದಂತಾಗಿದೆ ಎಂದು ಭಕ್ತರು ಅಭಿಪ್ರಾಯ ಪಟ್ಟಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

1 day ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

1 day ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

1 day ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 days ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

2 days ago