Advertisement
ಧಾರ್ಮಿಕ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ‌ಸರ್ಪ ಸಂಸ್ಕಾರ ಸೇವಾ ದರ ಹೆಚ್ಚಳ |

Share

ದೇಶದ ಅತ್ಯಂತ ಪ್ರಸಿದ್ಧ ನಾಗಾರಾಧನೆಯ ಕ್ಷೇತ್ರ  ಕುಕ್ಕೆ ಶ್ರೀ ಸುಬ್ರಹ್ಮಣ್ಯ(Kukke subrahmanya) ದೇವಸ್ಥಾನದಲ್ಲಿ ನಡೆಯುವ ಸರ್ಪ ಸಂಸ್ಕಾರ ಸೇವಾ ದರವನ್ನು ಹೆಚ್ಚಳ ಮಾಡಲಾಗಿದೆ.ಪರಿಷ್ಕೃತ ದರದಂತೆ ಈ ಹಿಂದಿನ ದರಕ್ಕಿಂತ ದರವನ್ನು ಭಾರೀ ಹೆಚ್ಚಳ ಮಾಡಲಾಗಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಸೇವೆಗಳಲ್ಲಿ ಒಂದಾಗಿರುವ  ಸರ್ಪ ಸಂಸ್ಕಾರ (Sarpa samskara) ಸೇವಾ ದರವನ್ನು ಪರಿಷ್ಕರಿಸಲಾಗಿದೆ. ಈ ಮೊದಲು 3,200 ರೂಪಾಯಿ ಇದ್ದ ಸರ್ಪ ಸಂಸ್ಕಾರ ಸೇವೆಯ ದರವನ್ನು 4,200ಕ್ಕೆ ಹೆಚ್ಚಿಸಲಾಗಿದೆ. ಈ ಮೂಲಕ ಸರ್ಪ ಸಂಸ್ಕಾರ ದರದಲ್ಲಿ ಒಂದು ಸಾವಿರ ಹೆಚ್ಚಿಸಲಾಗಿದೆ. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯ ದೇವಳದಿಂದ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಲಾಗಿದೆ.

ಈ ಹಿಂದಿನ ಸೇವಾ ದರದಲ್ಲಿಯೇ ಹಲವು ದೇವಸ್ಥಾನದ ಹೊರತಾಗಿಯೂ ಹಲವು ಕಡೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ ನಡೆಯುತ್ತಿತ್ತು. ನಾಗ ದೋಷ ನಿವಾರಣೆಗೆ ದೇಶದ ಹಲವಾರು ಮಂದಿ ಸರ್ಪಸಂಸ್ಕಾರ, ಆಶ್ಲೇಷ ಬಲಿ ಪೂಜೆಯನ್ನು ನೆರವೇರಿಸುತ್ತಾರೆ. ಕ್ರಿಕೆಟ್‌ ತಾರೆ ಸಚಿನ್‌ ತೆಂಡೂಲ್ಕರ್‌ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ಸರ್ಪಸಂಸ್ಕಾರ ಸೇವೆ ಮಾಡಿಸಿದ ಬಳಿಕ ದೇಶದಾದ್ಯಂತ ಕುಕ್ಕೆ ಸುಬ್ರಹ್ಮಣ್ಯದ ಸರ್ಪಸಂಸ್ಕಾರ ಸೇವೆ ಮತ್ತಷ್ಟು ವ್ಯಾಪಕವಾಗಿ ಪ್ರಚಾರವಾಗಿತ್ತು.

ಸರ್ಪ ಹತ್ಯೆ ದೋಷ ಇದ್ದವರು ಮಾತ್ರವೇ ಈ ಹಿಂದೆ ಈ ಸೇವೆ ಮಾಡುತ್ತಿದ್ದರೂ ಈಚೆಗೆ ಎಲ್ಲಾ ಭಕ್ತರೂ ದೋಷ ನಿವಾರಣೆಗಾಗಿ ಸರ್ಪಸಂಸ್ಕಾರ ನಡೆಸುತ್ತಿದ್ದಾರೆ. ಆಶ್ಲೇಷ ಬಲಿ ಪೂಜೆಯು ಸುಮಾರು 10 ವರ್ಷಗಳ ಹಿಂದೆ ಸರ್ಪದೋಷ ನಿವಾರಣೆಗೆ ನಡೆಸುತ್ತಿದ್ದ ಸೇವೆಯಾಗಿತ್ತು. ಇದೀಗ ಸಾರ್ವತ್ರಿಕವಾಗಿ ಸರ್ಪಸಂಸ್ಕಾರ ನಡೆಸುವುದರಿಂದ ಕುಕ್ಕೆ ಸುಬ್ರಹ್ಮಣ್ಯದ ಹಲವು ಕಡೆಗಳಲ್ಲಿ ಖಾಸಗಿಯಾಗಿಯೂ ಸೇವೆಗಳು ನಡೆಯುತ್ತಿವೆ. ಈಗ ಸೇವಾ ದರ ಹೆಚ್ಚಿರುವುದರಿಂದ ಖಾಸಗಿಯಾಗಿ ನಡೆಯುವ ಸೇವೆಗಳಿಗೆ ಹೆಚ್ಚಿನ ಮಹತ್ವ ನೀಡಿದಂತಾಗಿದೆ ಎಂದು ಭಕ್ತರು ಅಭಿಪ್ರಾಯ ಪಟ್ಟಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

5 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

7 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

8 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago