ಕುಕ್ಕೆಯ ಜಾತ್ರೆಗೆ ಬರ್ತೀರಾ… ? | ಪಾರ್ಕಿಂಕ್‌ ವ್ಯವಸ್ಥೆ ಗಮನಿಸಿ | ಪೋಲೀಸ್‌ರಿಂದ ವ್ಯವಸ್ಥಿತ ವಾಹನ ಸಂಚಾರಕ್ಕೆ ಕ್ರಮ |

December 14, 2023
9:42 PM
ಕುಕ್ಕೆ ಸುಬ್ರಹ್ಮಣ್ಯ ಜಾತ್ರಾ ಉತ್ಸವದ ಸಂದರ್ಭ ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಸುಬ್ರಹ್ಮಣ್ಯ ದಲ್ಲಿ ವಾಹನ ಪಾರ್ಕಿಂಗ್‌ಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಸುಗಮ ಸಂಚಾರಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಹೀಗಾಗಿ ಭಕ್ತಾದಿಗಳು ಇದಕ್ಕೆ ಸಹಕರಿಸಿದರೆ ವಾಹನ ಸಂಚಾರವೂ, ವಾಹನ ಪಾರ್ಕಿಂಗ್‌ ವ್ಯವಸ್ಥೆಯೂ ಸುಗಮವಾಗಲಿದೆ. ಇದಕ್ಕಾಗಿ ಭಕ್ತಾದಿಗಳು ಸಹಕರಿಸಿ.

ಡಿ.17ರಂದು ಸಂಜೆ 4 ಗಂಟೆಯಿಂದ ಎಲ್ಲಾ ವಾಹನಗಳು ನಿಗದಿ ಪಡಿಸಿದ ಪಾರ್ಕಿಂಗ್ ಸ್ಥಳದಲ್ಲೇ ನಿಲುಗಡೆಗೊಳಿಸಬೇಕು. ವಸತಿ ಗೃಹದಲ್ಲಿ ಕೊಠಡಿ ಕಾಯ್ದಿರಿಸಿದವರು 4 ಗಂಟೆಯ ಒಳಗೆ ನಿಗದಿ ಪಡಿಸಿದ ವಸತಿಗೃಹಗಳಿಗೆ ತೆರಳಬೇಕು. ಅಲ್ಲದೆ ತುರ್ತು ಸಂದರ್ಭ ಹೊರತು ಪಡಿಸಿ ಸರ್ವರಿಗೂ ಈ ನಿಯಮಗಳು ಅನ್ವಯವಾಗಲಿದೆ.ಅಲ್ಲದೆ ಕುಮಾರಧಾರದಿಂದ ಸವಾರಿ ಮಂಟಪದ ತನಕ ರಸ್ತೆಯ ಇಕ್ಕೆಲಗಳಲ್ಲಿ ವಾಹನ ನಿಲುಗಡೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ನಿಲ್ದಾಣ ಮಾರ್ಗಸೂಚಿ: ಗುಂಡ್ಯ, ಉಪ್ಪಿನಂಗಡಿ, ಪುತ್ತೂರು, ಕಡೆಯಿಂದ ಬರುವ ಕೆ.ಎಸ್.ಆರ್.ಟಿ.ಸಿ ಬಸ್‌ಗಳು ಸುಬ್ರಹ್ಮಣ್ಯದ ವಲ್ಲೀಶ ಸಭಾ ಭವನದ ಬಳಿ, ಲಘು ವಾಹನಗಳಿಗೆ ಕುಮಾರಧಾರ ಹಲಿಪ್ಯಾಡ್ ಮತ್ತು ಪದವಿ ಪೂರ್ವ ಕಾಲೇಜು ಮೈದಾನ, ದ್ವಿಚಕ್ರ ವಾಹನಗಳಿಗೆ ಪದವಿ ಕಾಲೇಜು ಮೈದಾನ, ಬಿಲದ್ವಾರದ ಎದುರಿನ ಮೈದಾನಗಳನ್ನು ನಿಲುಗಡೆಗೆ ವ್ಯವಸ್ಥೆಗೊಳಿಸಲಾಗಿದೆ. ಸುಳ್ಯ ಕಡೆಯಿಂದ ಬರುವ ಕೆ.ಎಸ್.ಆರ್.ಟಿ.ಸಿ ಬಸ್‌ಗಳು ಇಂಜಾಡಿ ಫಾರೆಸ್ಟ್ ವಸತಿ ಗೃಹದ ಬಳಿ, ದ್ವಿಚಕ್ರ ವಾಹನಗಳು ಮತ್ತು ಲಘು ವಾಹನಗಳು ಸವಾರಿ ಮಂಟಪದ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆಗೊಳಿಸಬೇಕು.ಅಟೋ ರಿಕ್ಷಾ ಚಾಲಕರು ಪ್ರಯಾಣಿಕರನ್ನು ಕುಮಾರಧಾರದಿಂದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ಎದುರಿನ ತನಕ ಸಾಗಾಟ ಮಾಡಬಹುದಾಗಿದೆ. ಜಾತ್ರೋತ್ಸವಕ್ಕೆ ಅತ್ಯಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಕಾರಣ ಅವರ ಸುರಕ್ಷತಾ ದೃಷ್ಠಿಯಿಂದ ವಿಶೇಷ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ವಾಹನಗಳಿಗೆ ಡಿ.17 ಮತ್ತು 18 ರಂದು ವಿಶೇಷ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಆದುದರಿಂದ ಸಾರ್ವಜನಿಕರು ಮತ್ತು ಭಕ್ತರು ಸಹಕರಿಸಬೇಕು ಎಂದು ಸುಬ್ರಹ್ಮಣ್ಯ ಠಾಣಾಧಿಕಾರಿ ಕಾರ್ತಿಕ್ ತಿಳಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror