Advertisement
ಸುದ್ದಿಗಳು

ಕುಕ್ಕೆಯ ಜಾತ್ರೆಗೆ ಬರ್ತೀರಾ… ? | ಪಾರ್ಕಿಂಕ್‌ ವ್ಯವಸ್ಥೆ ಗಮನಿಸಿ | ಪೋಲೀಸ್‌ರಿಂದ ವ್ಯವಸ್ಥಿತ ವಾಹನ ಸಂಚಾರಕ್ಕೆ ಕ್ರಮ |

Share

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಸುಬ್ರಹ್ಮಣ್ಯ ದಲ್ಲಿ ವಾಹನ ಪಾರ್ಕಿಂಗ್‌ಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಸುಗಮ ಸಂಚಾರಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಹೀಗಾಗಿ ಭಕ್ತಾದಿಗಳು ಇದಕ್ಕೆ ಸಹಕರಿಸಿದರೆ ವಾಹನ ಸಂಚಾರವೂ, ವಾಹನ ಪಾರ್ಕಿಂಗ್‌ ವ್ಯವಸ್ಥೆಯೂ ಸುಗಮವಾಗಲಿದೆ. ಇದಕ್ಕಾಗಿ ಭಕ್ತಾದಿಗಳು ಸಹಕರಿಸಿ.

ಡಿ.17ರಂದು ಸಂಜೆ 4 ಗಂಟೆಯಿಂದ ಎಲ್ಲಾ ವಾಹನಗಳು ನಿಗದಿ ಪಡಿಸಿದ ಪಾರ್ಕಿಂಗ್ ಸ್ಥಳದಲ್ಲೇ ನಿಲುಗಡೆಗೊಳಿಸಬೇಕು. ವಸತಿ ಗೃಹದಲ್ಲಿ ಕೊಠಡಿ ಕಾಯ್ದಿರಿಸಿದವರು 4 ಗಂಟೆಯ ಒಳಗೆ ನಿಗದಿ ಪಡಿಸಿದ ವಸತಿಗೃಹಗಳಿಗೆ ತೆರಳಬೇಕು. ಅಲ್ಲದೆ ತುರ್ತು ಸಂದರ್ಭ ಹೊರತು ಪಡಿಸಿ ಸರ್ವರಿಗೂ ಈ ನಿಯಮಗಳು ಅನ್ವಯವಾಗಲಿದೆ.ಅಲ್ಲದೆ ಕುಮಾರಧಾರದಿಂದ ಸವಾರಿ ಮಂಟಪದ ತನಕ ರಸ್ತೆಯ ಇಕ್ಕೆಲಗಳಲ್ಲಿ ವಾಹನ ನಿಲುಗಡೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ನಿಲ್ದಾಣ ಮಾರ್ಗಸೂಚಿ: ಗುಂಡ್ಯ, ಉಪ್ಪಿನಂಗಡಿ, ಪುತ್ತೂರು, ಕಡೆಯಿಂದ ಬರುವ ಕೆ.ಎಸ್.ಆರ್.ಟಿ.ಸಿ ಬಸ್‌ಗಳು ಸುಬ್ರಹ್ಮಣ್ಯದ ವಲ್ಲೀಶ ಸಭಾ ಭವನದ ಬಳಿ, ಲಘು ವಾಹನಗಳಿಗೆ ಕುಮಾರಧಾರ ಹಲಿಪ್ಯಾಡ್ ಮತ್ತು ಪದವಿ ಪೂರ್ವ ಕಾಲೇಜು ಮೈದಾನ, ದ್ವಿಚಕ್ರ ವಾಹನಗಳಿಗೆ ಪದವಿ ಕಾಲೇಜು ಮೈದಾನ, ಬಿಲದ್ವಾರದ ಎದುರಿನ ಮೈದಾನಗಳನ್ನು ನಿಲುಗಡೆಗೆ ವ್ಯವಸ್ಥೆಗೊಳಿಸಲಾಗಿದೆ. ಸುಳ್ಯ ಕಡೆಯಿಂದ ಬರುವ ಕೆ.ಎಸ್.ಆರ್.ಟಿ.ಸಿ ಬಸ್‌ಗಳು ಇಂಜಾಡಿ ಫಾರೆಸ್ಟ್ ವಸತಿ ಗೃಹದ ಬಳಿ, ದ್ವಿಚಕ್ರ ವಾಹನಗಳು ಮತ್ತು ಲಘು ವಾಹನಗಳು ಸವಾರಿ ಮಂಟಪದ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆಗೊಳಿಸಬೇಕು.ಅಟೋ ರಿಕ್ಷಾ ಚಾಲಕರು ಪ್ರಯಾಣಿಕರನ್ನು ಕುಮಾರಧಾರದಿಂದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ಎದುರಿನ ತನಕ ಸಾಗಾಟ ಮಾಡಬಹುದಾಗಿದೆ. ಜಾತ್ರೋತ್ಸವಕ್ಕೆ ಅತ್ಯಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಕಾರಣ ಅವರ ಸುರಕ್ಷತಾ ದೃಷ್ಠಿಯಿಂದ ವಿಶೇಷ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ವಾಹನಗಳಿಗೆ ಡಿ.17 ಮತ್ತು 18 ರಂದು ವಿಶೇಷ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಆದುದರಿಂದ ಸಾರ್ವಜನಿಕರು ಮತ್ತು ಭಕ್ತರು ಸಹಕರಿಸಬೇಕು ಎಂದು ಸುಬ್ರಹ್ಮಣ್ಯ ಠಾಣಾಧಿಕಾರಿ ಕಾರ್ತಿಕ್ ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

3 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

5 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

14 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

14 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

14 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

19 hours ago