Advertisement
ಸುದ್ದಿಗಳು

ಕುಕ್ಕೆಯ ಜಾತ್ರೆಗೆ ಬರ್ತೀರಾ… ? | ಪಾರ್ಕಿಂಕ್‌ ವ್ಯವಸ್ಥೆ ಗಮನಿಸಿ | ಪೋಲೀಸ್‌ರಿಂದ ವ್ಯವಸ್ಥಿತ ವಾಹನ ಸಂಚಾರಕ್ಕೆ ಕ್ರಮ |

Share

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಸುಬ್ರಹ್ಮಣ್ಯ ದಲ್ಲಿ ವಾಹನ ಪಾರ್ಕಿಂಗ್‌ಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಸುಗಮ ಸಂಚಾರಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಹೀಗಾಗಿ ಭಕ್ತಾದಿಗಳು ಇದಕ್ಕೆ ಸಹಕರಿಸಿದರೆ ವಾಹನ ಸಂಚಾರವೂ, ವಾಹನ ಪಾರ್ಕಿಂಗ್‌ ವ್ಯವಸ್ಥೆಯೂ ಸುಗಮವಾಗಲಿದೆ. ಇದಕ್ಕಾಗಿ ಭಕ್ತಾದಿಗಳು ಸಹಕರಿಸಿ.

ಡಿ.17ರಂದು ಸಂಜೆ 4 ಗಂಟೆಯಿಂದ ಎಲ್ಲಾ ವಾಹನಗಳು ನಿಗದಿ ಪಡಿಸಿದ ಪಾರ್ಕಿಂಗ್ ಸ್ಥಳದಲ್ಲೇ ನಿಲುಗಡೆಗೊಳಿಸಬೇಕು. ವಸತಿ ಗೃಹದಲ್ಲಿ ಕೊಠಡಿ ಕಾಯ್ದಿರಿಸಿದವರು 4 ಗಂಟೆಯ ಒಳಗೆ ನಿಗದಿ ಪಡಿಸಿದ ವಸತಿಗೃಹಗಳಿಗೆ ತೆರಳಬೇಕು. ಅಲ್ಲದೆ ತುರ್ತು ಸಂದರ್ಭ ಹೊರತು ಪಡಿಸಿ ಸರ್ವರಿಗೂ ಈ ನಿಯಮಗಳು ಅನ್ವಯವಾಗಲಿದೆ.ಅಲ್ಲದೆ ಕುಮಾರಧಾರದಿಂದ ಸವಾರಿ ಮಂಟಪದ ತನಕ ರಸ್ತೆಯ ಇಕ್ಕೆಲಗಳಲ್ಲಿ ವಾಹನ ನಿಲುಗಡೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ನಿಲ್ದಾಣ ಮಾರ್ಗಸೂಚಿ: ಗುಂಡ್ಯ, ಉಪ್ಪಿನಂಗಡಿ, ಪುತ್ತೂರು, ಕಡೆಯಿಂದ ಬರುವ ಕೆ.ಎಸ್.ಆರ್.ಟಿ.ಸಿ ಬಸ್‌ಗಳು ಸುಬ್ರಹ್ಮಣ್ಯದ ವಲ್ಲೀಶ ಸಭಾ ಭವನದ ಬಳಿ, ಲಘು ವಾಹನಗಳಿಗೆ ಕುಮಾರಧಾರ ಹಲಿಪ್ಯಾಡ್ ಮತ್ತು ಪದವಿ ಪೂರ್ವ ಕಾಲೇಜು ಮೈದಾನ, ದ್ವಿಚಕ್ರ ವಾಹನಗಳಿಗೆ ಪದವಿ ಕಾಲೇಜು ಮೈದಾನ, ಬಿಲದ್ವಾರದ ಎದುರಿನ ಮೈದಾನಗಳನ್ನು ನಿಲುಗಡೆಗೆ ವ್ಯವಸ್ಥೆಗೊಳಿಸಲಾಗಿದೆ. ಸುಳ್ಯ ಕಡೆಯಿಂದ ಬರುವ ಕೆ.ಎಸ್.ಆರ್.ಟಿ.ಸಿ ಬಸ್‌ಗಳು ಇಂಜಾಡಿ ಫಾರೆಸ್ಟ್ ವಸತಿ ಗೃಹದ ಬಳಿ, ದ್ವಿಚಕ್ರ ವಾಹನಗಳು ಮತ್ತು ಲಘು ವಾಹನಗಳು ಸವಾರಿ ಮಂಟಪದ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆಗೊಳಿಸಬೇಕು.ಅಟೋ ರಿಕ್ಷಾ ಚಾಲಕರು ಪ್ರಯಾಣಿಕರನ್ನು ಕುಮಾರಧಾರದಿಂದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ಎದುರಿನ ತನಕ ಸಾಗಾಟ ಮಾಡಬಹುದಾಗಿದೆ. ಜಾತ್ರೋತ್ಸವಕ್ಕೆ ಅತ್ಯಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಕಾರಣ ಅವರ ಸುರಕ್ಷತಾ ದೃಷ್ಠಿಯಿಂದ ವಿಶೇಷ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ವಾಹನಗಳಿಗೆ ಡಿ.17 ಮತ್ತು 18 ರಂದು ವಿಶೇಷ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಆದುದರಿಂದ ಸಾರ್ವಜನಿಕರು ಮತ್ತು ಭಕ್ತರು ಸಹಕರಿಸಬೇಕು ಎಂದು ಸುಬ್ರಹ್ಮಣ್ಯ ಠಾಣಾಧಿಕಾರಿ ಕಾರ್ತಿಕ್ ತಿಳಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

8 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

9 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

16 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

22 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

22 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago