ಕುಕ್ಕೆ ಸುಬ್ರಹ್ಮಣ್ಯ ದೇವಳದ ಆಡಳಿತ ಮಂಡಳಿ ವಿರುದ್ದ ಕಾಂಗ್ರೆಸ್‌ ಆರೋಪ | ಆಡಳಿತ ಮಂಡಳಿಯನ್ನು ವಜಾಗೊಳಿಸಲು ಒತ್ತಾಯಿಸಿ ಪತ್ರ ಚಳವಳಿ | ಟೆಂಡರ್‌ ಸ್ಥಗಿತ-ಕೋಟ್ಯಂತರ ರೂಪಾಯಿ ದೇವಾಲಯಕ್ಕೆ ನಷ್ಟ ಆರೋಪ |

March 26, 2022
11:16 PM
Advertisement

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಈಗಿನ ಆಡಳಿತ ಮಂಡಳಿ ವಿರುದ್ಧ ದುರಾಡಳಿತದ ಆರೋಪವನ್ನು ಕಾಂಗ್ರೆಸ್‌ ಮಾಡಿದೆ. ಟೆಂಡರ್‌ ರದ್ದು ಮಾಡಿ ದುಬಾರಿ ಬೆಲೆಯಲ್ಲಿ ಜನತಾ ಬಜಾರಿನಿಂದ ಖರೀದಿಸಿ ದೇವಳಕ್ಕೆ ಕೋಟ್ಯಾಂತರ ನಷ್ಟ ಉಂಟು ಮಾಡಿರುತ್ತಾರೆ ಎಂದು ಕಾಂಗ್ರೆಸ್‌ ನೇರ ಆರೋಪ ಮಾಡಿದೆ.

Advertisement
Advertisement
Advertisement

Advertisement

ಸುಬ್ರಹ್ಮಣ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಡಬ ಬ್ಲಾಕ್‌ ಕಾಂಗ್ರೆಸ್‌ ಪದಾಧಿಕಾರಿಗಳು, ಆಡಳಿತದಿಂದ ದುರಾಡಳಿತ ನಡೆಯುತಿದ್ದು ಇದರಿಂದ ದೇವಸ್ಥಾನಕ್ಕೆ ಕೋಟ್ಯಾಂತರ ರೂಪಾಯಿ ನಷ್ಟವಾಗುತ್ತಿದೆ.ಇಲಾಖಾ ಅನುಮತಿ ಪಡೆದು ಮಾಡಿರುವ ಕಾಮಗಾರಿ, ಟೆಂಡರ್ ಕರೆದು ಆದೇಶ ನೀಡಿರುವ ಕೆಲಸವನ್ನು ಈಗಿನ ಅಡಳಿತ ಮಂಡಳಿಯವರು ಸ್ಥಗಿತಗೊಳಿಸಿದ್ದಾರೆ. ದೇವಳಕ್ಕೆ ಟೆಂಡರ್ ಮುಖಾಂತರ ದಿನಸಿ ವಸ್ತುಗಳನ್ನು ಖರೀದಿ ಮಾಡದೇ ದುಬಾರಿ ಬೆಲೆಯಲ್ಲಿ ಜನತಾ ಬಜಾರಿನಿಂದ ಖರೀದಿಸಿ ಕೋಟ್ಯಾಂತರ ನಷ್ಟ ಉಂಟು ಮಾಡಿರುತ್ತಾರೆ.  ಹೀಗೆ ಹಲವು ನಿಯಮ ಬಾಹಿರ ಕೆಲಸಗಳನ್ನು ಆಡಳಿತ ಮಂಡಳಿ ಮಾಡಿದ್ದು ಈ ಆಡಳಿತ ಮಂಡಳಿಯನ್ನು ವಜಾಗೊಳಿಸ ಬೇಕು ಅದಕ್ಕಾಗಿ ಪತ್ರ ಚಳವಳಿ ಮಾಡಲಿದ್ದೇವೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಆರೋಪಿಸಿದೆ.

ದತ್ತು ತೆಗೆದುಕೊಂಡ ದೇವಾಲಯಗಳಿಗೆ ಹಣ ಬಿಡುಗಡೆಗೊಳಿಸಬೇಕಾದ ಹಣವನ್ನು ನೀಡದೆ ಹಿಂದು ವಿರೋಧಿ ನೀತಿ ಅನುಸರಿಸಲಾಗಿದೆ. ಸುಬ್ರಹ್ಮಣ್ಯದ ಒಳಚರಂಡಿ ಯೋಜನೆಯ ಶುಲ್ಕ ವಸೂಲಾತಿ ಮಾಡದೆ ದೇವಳದ ಬೊಕ್ಕಸಕ್ಕೆ ಅಪಾರ ನಷ್ಟ ಉಂಟು ಮಾಡಲಾಗಿದೆ. ದೇವಳದಿಂದ ಅಪಾರ ಪ್ರಮಾಣದ ಲಾಡು ಕದ್ದು ಸಾಗಾಟ ಮಾಡಿರುವುದು ಅಲ್ಲದೆ ದೇವಳದ ವಾಹನದಲ್ಲಿ ಮೀನು ಸಾಗಾಟ ಮಾಡಿರುವುದು ಇತ್ಯಾದಿ ವಿಷಯಗಳು ಭಕ್ತಾದಿಗಳು ತಲೆತಗ್ಗಿಸುವ ಕೆಲಸ ಮಾಡಿದಂತೆ ಎಂದು ಆರೋಪಿಸಿದರು.ದೇವಸ್ಥಾನದ ಅವ್ಯವಸ್ಥೆಗೆ ಕಾರಣವಾಗಿರುವ ಈಗಿನ ಆಡಳಿತ ಮಂಡಳಿಯನ್ನು ವಜಾಗೊಳಿಸಲು ಭಕ್ತಾಧಿಗಳ ಮುಖಾಂತರ ಒತ್ತಾಯ ಪಡಿಸುವ ಪತ್ರಚಳುವಳಿಯನ್ನು ನಡೆಸಲು ತೀರ್ಮಾನಿಸಿರುವುದಾಗಿ ಎಂದವರು ತಿಳಿಸಿದರು.

Advertisement

ಸುದ್ದಿಗೋಷ್ಟಿಯಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಪ್ರಮುಖರಾದ ಶಿವರಾಮ ರೈ ,  ಹರೀಶ್ ಇಂಜಾಡಿ ,  ಕೃಷ್ಣಮೂರ್ತಿ ಭಟ್ ,  ಮಾಜಿ ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ, ವಿಮಲಾ ರಂಗಯ್ಯ, ಬಾಲಕೃಷ್ಣ ಮರೀಲ್, ಮಾದವ ದೇವರಗದ್ದೆ, ಲಕ್ಷ್ಮೀ ಸುಬ್ರಹ್ಮಣ್ಯ, ಸೌಮ್ಯ, ಲೋಲಾಕ್ಷ, ಚಿದಾನಂದ ಮಾನಾಡು, ದಿನೇಶ್ ದೇವರಗದ್ದೆ, ಪವನ್ ಕುಮಾರ್, ಕಿರಣ್ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭೂ ಅಂತರ್ಗತ ನೀರಿನ ಒರತೆಗಳು.. ಮೇಲ್ಮೈ ಒರತೆ ಮತ್ತುಶಿಲಾಸ್ತರದ ನಡುವಣ… : ಸಮುದ್ರ ಸೇರುವ ನೀರು ವ್ಯರ್ಥವೇ ? ಖಂಡಿತ ಅಲ್ಲ.
April 20, 2024
4:46 PM
by: The Rural Mirror ಸುದ್ದಿಜಾಲ
ರಕ್ಷಣಾ ವಲಯದಲ್ಲಿ ಭಾರದ ಸಾಧನೆ : ಫಿಲಿಪೈನ್ಸ್‌ಗೆ ಭಾರತದ ಬ್ರಹ್ಮೋಸ್ ರಫ್ತು : ಬೇರೆ ರಾಷ್ಟ್ರಗಳಿಂದ ಹೆಚ್ಚಿದ ಬೇಡಿಕೆ
April 20, 2024
3:14 PM
by: The Rural Mirror ಸುದ್ದಿಜಾಲ
ವೆದರ್‌ ಮಿರರ್‌ | 20.04.2024 | ರಾಜ್ಯದ ಹಲವೆಡೆ ಇಂದು ಮಳೆಯ ಮುನ್ಸೂಚನೆ
April 20, 2024
11:35 AM
by: ಸಾಯಿಶೇಖರ್ ಕರಿಕಳ
ಚಾಮರಾಜನಗರ-ಹಾವೇರಿಯಲ್ಲಿ ಗಾಳಿಗೆ ಅಪಾರ ಕೃಷಿ ಹಾನಿ |
April 19, 2024
11:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror