Advertisement
ಸುದ್ದಿಗಳು

ಕುಕ್ಕೆ ಸುಬ್ರಹ್ಮಣ್ಯ ದೇವಳದ ಆಡಳಿತ ಮಂಡಳಿ ವಿರುದ್ದ ಕಾಂಗ್ರೆಸ್‌ ಆರೋಪ | ಆಡಳಿತ ಮಂಡಳಿಯನ್ನು ವಜಾಗೊಳಿಸಲು ಒತ್ತಾಯಿಸಿ ಪತ್ರ ಚಳವಳಿ | ಟೆಂಡರ್‌ ಸ್ಥಗಿತ-ಕೋಟ್ಯಂತರ ರೂಪಾಯಿ ದೇವಾಲಯಕ್ಕೆ ನಷ್ಟ ಆರೋಪ |

Share

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಈಗಿನ ಆಡಳಿತ ಮಂಡಳಿ ವಿರುದ್ಧ ದುರಾಡಳಿತದ ಆರೋಪವನ್ನು ಕಾಂಗ್ರೆಸ್‌ ಮಾಡಿದೆ. ಟೆಂಡರ್‌ ರದ್ದು ಮಾಡಿ ದುಬಾರಿ ಬೆಲೆಯಲ್ಲಿ ಜನತಾ ಬಜಾರಿನಿಂದ ಖರೀದಿಸಿ ದೇವಳಕ್ಕೆ ಕೋಟ್ಯಾಂತರ ನಷ್ಟ ಉಂಟು ಮಾಡಿರುತ್ತಾರೆ ಎಂದು ಕಾಂಗ್ರೆಸ್‌ ನೇರ ಆರೋಪ ಮಾಡಿದೆ.

Advertisement
Advertisement

ಸುಬ್ರಹ್ಮಣ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಡಬ ಬ್ಲಾಕ್‌ ಕಾಂಗ್ರೆಸ್‌ ಪದಾಧಿಕಾರಿಗಳು, ಆಡಳಿತದಿಂದ ದುರಾಡಳಿತ ನಡೆಯುತಿದ್ದು ಇದರಿಂದ ದೇವಸ್ಥಾನಕ್ಕೆ ಕೋಟ್ಯಾಂತರ ರೂಪಾಯಿ ನಷ್ಟವಾಗುತ್ತಿದೆ.ಇಲಾಖಾ ಅನುಮತಿ ಪಡೆದು ಮಾಡಿರುವ ಕಾಮಗಾರಿ, ಟೆಂಡರ್ ಕರೆದು ಆದೇಶ ನೀಡಿರುವ ಕೆಲಸವನ್ನು ಈಗಿನ ಅಡಳಿತ ಮಂಡಳಿಯವರು ಸ್ಥಗಿತಗೊಳಿಸಿದ್ದಾರೆ. ದೇವಳಕ್ಕೆ ಟೆಂಡರ್ ಮುಖಾಂತರ ದಿನಸಿ ವಸ್ತುಗಳನ್ನು ಖರೀದಿ ಮಾಡದೇ ದುಬಾರಿ ಬೆಲೆಯಲ್ಲಿ ಜನತಾ ಬಜಾರಿನಿಂದ ಖರೀದಿಸಿ ಕೋಟ್ಯಾಂತರ ನಷ್ಟ ಉಂಟು ಮಾಡಿರುತ್ತಾರೆ.  ಹೀಗೆ ಹಲವು ನಿಯಮ ಬಾಹಿರ ಕೆಲಸಗಳನ್ನು ಆಡಳಿತ ಮಂಡಳಿ ಮಾಡಿದ್ದು ಈ ಆಡಳಿತ ಮಂಡಳಿಯನ್ನು ವಜಾಗೊಳಿಸ ಬೇಕು ಅದಕ್ಕಾಗಿ ಪತ್ರ ಚಳವಳಿ ಮಾಡಲಿದ್ದೇವೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಆರೋಪಿಸಿದೆ.

ದತ್ತು ತೆಗೆದುಕೊಂಡ ದೇವಾಲಯಗಳಿಗೆ ಹಣ ಬಿಡುಗಡೆಗೊಳಿಸಬೇಕಾದ ಹಣವನ್ನು ನೀಡದೆ ಹಿಂದು ವಿರೋಧಿ ನೀತಿ ಅನುಸರಿಸಲಾಗಿದೆ. ಸುಬ್ರಹ್ಮಣ್ಯದ ಒಳಚರಂಡಿ ಯೋಜನೆಯ ಶುಲ್ಕ ವಸೂಲಾತಿ ಮಾಡದೆ ದೇವಳದ ಬೊಕ್ಕಸಕ್ಕೆ ಅಪಾರ ನಷ್ಟ ಉಂಟು ಮಾಡಲಾಗಿದೆ. ದೇವಳದಿಂದ ಅಪಾರ ಪ್ರಮಾಣದ ಲಾಡು ಕದ್ದು ಸಾಗಾಟ ಮಾಡಿರುವುದು ಅಲ್ಲದೆ ದೇವಳದ ವಾಹನದಲ್ಲಿ ಮೀನು ಸಾಗಾಟ ಮಾಡಿರುವುದು ಇತ್ಯಾದಿ ವಿಷಯಗಳು ಭಕ್ತಾದಿಗಳು ತಲೆತಗ್ಗಿಸುವ ಕೆಲಸ ಮಾಡಿದಂತೆ ಎಂದು ಆರೋಪಿಸಿದರು.ದೇವಸ್ಥಾನದ ಅವ್ಯವಸ್ಥೆಗೆ ಕಾರಣವಾಗಿರುವ ಈಗಿನ ಆಡಳಿತ ಮಂಡಳಿಯನ್ನು ವಜಾಗೊಳಿಸಲು ಭಕ್ತಾಧಿಗಳ ಮುಖಾಂತರ ಒತ್ತಾಯ ಪಡಿಸುವ ಪತ್ರಚಳುವಳಿಯನ್ನು ನಡೆಸಲು ತೀರ್ಮಾನಿಸಿರುವುದಾಗಿ ಎಂದವರು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಪ್ರಮುಖರಾದ ಶಿವರಾಮ ರೈ ,  ಹರೀಶ್ ಇಂಜಾಡಿ ,  ಕೃಷ್ಣಮೂರ್ತಿ ಭಟ್ ,  ಮಾಜಿ ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ, ವಿಮಲಾ ರಂಗಯ್ಯ, ಬಾಲಕೃಷ್ಣ ಮರೀಲ್, ಮಾದವ ದೇವರಗದ್ದೆ, ಲಕ್ಷ್ಮೀ ಸುಬ್ರಹ್ಮಣ್ಯ, ಸೌಮ್ಯ, ಲೋಲಾಕ್ಷ, ಚಿದಾನಂದ ಮಾನಾಡು, ದಿನೇಶ್ ದೇವರಗದ್ದೆ, ಪವನ್ ಕುಮಾರ್, ಕಿರಣ್ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

2 hours ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

2 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

12 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

12 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

12 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

12 hours ago