Advertisement
ಸುದ್ದಿಗಳು

ಕುಕ್ಕೆ ಸುಬ್ರಹ್ಮಣ್ಯ ದೇವಳದ ಆಡಳಿತ ಮಂಡಳಿ ವಿರುದ್ದ ಕಾಂಗ್ರೆಸ್‌ ಆರೋಪ | ಆಡಳಿತ ಮಂಡಳಿಯನ್ನು ವಜಾಗೊಳಿಸಲು ಒತ್ತಾಯಿಸಿ ಪತ್ರ ಚಳವಳಿ | ಟೆಂಡರ್‌ ಸ್ಥಗಿತ-ಕೋಟ್ಯಂತರ ರೂಪಾಯಿ ದೇವಾಲಯಕ್ಕೆ ನಷ್ಟ ಆರೋಪ |

Share

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಈಗಿನ ಆಡಳಿತ ಮಂಡಳಿ ವಿರುದ್ಧ ದುರಾಡಳಿತದ ಆರೋಪವನ್ನು ಕಾಂಗ್ರೆಸ್‌ ಮಾಡಿದೆ. ಟೆಂಡರ್‌ ರದ್ದು ಮಾಡಿ ದುಬಾರಿ ಬೆಲೆಯಲ್ಲಿ ಜನತಾ ಬಜಾರಿನಿಂದ ಖರೀದಿಸಿ ದೇವಳಕ್ಕೆ ಕೋಟ್ಯಾಂತರ ನಷ್ಟ ಉಂಟು ಮಾಡಿರುತ್ತಾರೆ ಎಂದು ಕಾಂಗ್ರೆಸ್‌ ನೇರ ಆರೋಪ ಮಾಡಿದೆ.

ಸುಬ್ರಹ್ಮಣ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಡಬ ಬ್ಲಾಕ್‌ ಕಾಂಗ್ರೆಸ್‌ ಪದಾಧಿಕಾರಿಗಳು, ಆಡಳಿತದಿಂದ ದುರಾಡಳಿತ ನಡೆಯುತಿದ್ದು ಇದರಿಂದ ದೇವಸ್ಥಾನಕ್ಕೆ ಕೋಟ್ಯಾಂತರ ರೂಪಾಯಿ ನಷ್ಟವಾಗುತ್ತಿದೆ.ಇಲಾಖಾ ಅನುಮತಿ ಪಡೆದು ಮಾಡಿರುವ ಕಾಮಗಾರಿ, ಟೆಂಡರ್ ಕರೆದು ಆದೇಶ ನೀಡಿರುವ ಕೆಲಸವನ್ನು ಈಗಿನ ಅಡಳಿತ ಮಂಡಳಿಯವರು ಸ್ಥಗಿತಗೊಳಿಸಿದ್ದಾರೆ. ದೇವಳಕ್ಕೆ ಟೆಂಡರ್ ಮುಖಾಂತರ ದಿನಸಿ ವಸ್ತುಗಳನ್ನು ಖರೀದಿ ಮಾಡದೇ ದುಬಾರಿ ಬೆಲೆಯಲ್ಲಿ ಜನತಾ ಬಜಾರಿನಿಂದ ಖರೀದಿಸಿ ಕೋಟ್ಯಾಂತರ ನಷ್ಟ ಉಂಟು ಮಾಡಿರುತ್ತಾರೆ.  ಹೀಗೆ ಹಲವು ನಿಯಮ ಬಾಹಿರ ಕೆಲಸಗಳನ್ನು ಆಡಳಿತ ಮಂಡಳಿ ಮಾಡಿದ್ದು ಈ ಆಡಳಿತ ಮಂಡಳಿಯನ್ನು ವಜಾಗೊಳಿಸ ಬೇಕು ಅದಕ್ಕಾಗಿ ಪತ್ರ ಚಳವಳಿ ಮಾಡಲಿದ್ದೇವೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಆರೋಪಿಸಿದೆ.

ದತ್ತು ತೆಗೆದುಕೊಂಡ ದೇವಾಲಯಗಳಿಗೆ ಹಣ ಬಿಡುಗಡೆಗೊಳಿಸಬೇಕಾದ ಹಣವನ್ನು ನೀಡದೆ ಹಿಂದು ವಿರೋಧಿ ನೀತಿ ಅನುಸರಿಸಲಾಗಿದೆ. ಸುಬ್ರಹ್ಮಣ್ಯದ ಒಳಚರಂಡಿ ಯೋಜನೆಯ ಶುಲ್ಕ ವಸೂಲಾತಿ ಮಾಡದೆ ದೇವಳದ ಬೊಕ್ಕಸಕ್ಕೆ ಅಪಾರ ನಷ್ಟ ಉಂಟು ಮಾಡಲಾಗಿದೆ. ದೇವಳದಿಂದ ಅಪಾರ ಪ್ರಮಾಣದ ಲಾಡು ಕದ್ದು ಸಾಗಾಟ ಮಾಡಿರುವುದು ಅಲ್ಲದೆ ದೇವಳದ ವಾಹನದಲ್ಲಿ ಮೀನು ಸಾಗಾಟ ಮಾಡಿರುವುದು ಇತ್ಯಾದಿ ವಿಷಯಗಳು ಭಕ್ತಾದಿಗಳು ತಲೆತಗ್ಗಿಸುವ ಕೆಲಸ ಮಾಡಿದಂತೆ ಎಂದು ಆರೋಪಿಸಿದರು.ದೇವಸ್ಥಾನದ ಅವ್ಯವಸ್ಥೆಗೆ ಕಾರಣವಾಗಿರುವ ಈಗಿನ ಆಡಳಿತ ಮಂಡಳಿಯನ್ನು ವಜಾಗೊಳಿಸಲು ಭಕ್ತಾಧಿಗಳ ಮುಖಾಂತರ ಒತ್ತಾಯ ಪಡಿಸುವ ಪತ್ರಚಳುವಳಿಯನ್ನು ನಡೆಸಲು ತೀರ್ಮಾನಿಸಿರುವುದಾಗಿ ಎಂದವರು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಪ್ರಮುಖರಾದ ಶಿವರಾಮ ರೈ ,  ಹರೀಶ್ ಇಂಜಾಡಿ ,  ಕೃಷ್ಣಮೂರ್ತಿ ಭಟ್ ,  ಮಾಜಿ ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ, ವಿಮಲಾ ರಂಗಯ್ಯ, ಬಾಲಕೃಷ್ಣ ಮರೀಲ್, ಮಾದವ ದೇವರಗದ್ದೆ, ಲಕ್ಷ್ಮೀ ಸುಬ್ರಹ್ಮಣ್ಯ, ಸೌಮ್ಯ, ಲೋಲಾಕ್ಷ, ಚಿದಾನಂದ ಮಾನಾಡು, ದಿನೇಶ್ ದೇವರಗದ್ದೆ, ಪವನ್ ಕುಮಾರ್, ಕಿರಣ್ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

5 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

13 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

14 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

24 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago