Advertisement
Exclusive - Mirror Hunt

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮುಗಿಯದ ಶೈವ-ವೈಷ್ಣವ ವಿವಾದ | ಹಿಂದೂ ಸಮಾಜದ ನಿರ್ಲಕ್ಷ್ಯದ ಬಗ್ಗೆ ವಿದ್ಯಾಪ್ರಸನ್ನ ಶ್ರೀಗಳ ವಿಷಾದದ ಮಾತು

Share

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಉಮಾಮಹೇಶ್ವರ ಗುಡಿಯಲ್ಲಿ ಶಿವರಾತ್ರಿಯಂದು ಶೈವ ಪದ್ಧತಿ ಪ್ರಕಾರ ಪೂಜೆ ನಡೆಯಬೇಕು ಎಂಬ ವಿವಾದ ರಾಜ್ಯದಲ್ಲಿ ಸುದ್ದಿಯಾಗಿತ್ತು. ಅದಾದ ಬಳಿಕ ಮುಜರಾಯಿ ಇಲಾಖೆ ಶೈವ ಪದ್ದತಿಯ ಪ್ರಕಾರ ಪೂಜೆ ನಡೆಸಲು ತಿಳಿಸಿತ್ತು. ಈ ಬಗ್ಗೆ ಮತ್ತೆ ವಿವಾದ ನಡೆದು  ನ್ಯಾಯಾಲಯದ ಮೆಟ್ಟಿಲೇರಿದ ಈ ಪ್ರಕರಣದಲ್ಲಿ ಯಥಾ ಪ್ರಕಾರ ಕಾಯ್ದುಕೊಳ್ಳಲು ನ್ಯಾಯಾಲಯ ನಿರ್ದೆಶನ ನೀಡಿದೆ.

Advertisement
Advertisement

ಈ ನಡುವೆ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರು ಶೈವ-ವೈಷ್ಣವ ಹಾಗೂ ಹಿಂದೂ ಧರ್ಮದ ಬಗ್ಗೆ ಹೇಳಿರುವ ಹೇಳಿಕೆ ಇದೀಗ ವೈರಲ್‌ ಆಗುತ್ತಿದೆ. ಈ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಸ್ವಾಮೀಜಿಗಳ ಈ ಮಾತಿನ ಬಗ್ಗೆ ವಿವಿಧ ಚರ್ಚೆಗಳು ಆರಂಭವಾಗಿದೆ. ಮಾತಿನ ಆರಂಭದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರ ನಿಷ್ಟೆಯ ಬಗ್ಗೆ ಮಾತನಾಡಿದ ಶ್ರೀಗಳು ನಂತರ ಶೈವ-ವೈಷ್ಣವ ಚರ್ಚೆಯ ಬಗ್ಗೆ ಮಾತನಾಡಿ ಹಿಂದೂ ಸಮಾಜವು ಮಾಡುತ್ತಿರುವ ನಿರ್ಲಕ್ಷ್ಯದ ಬಗ್ಗೆ ಹೇಳಿದ್ದಾರೆ. ಇದೇ ವೇಳೆ ಮಠದ ವಿರುದ್ಧವೂ ನಿರಂತರ ಕಿರುಕುಳದ ಬಗ್ಗೆಯೂ ಉಲ್ಲೇಖಿಸಿದ್ದಾರೆ.

ವೈರಲ್‌ ಆಗಿರುವ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳ ಹೇಳಿಕೆಯ ಲಿಂಕ್..

 

ಹಿಂದೂ ಧರ್ಮದೊಳಗೆ ಶೈವ-ವೈಷ್ಣವ ಚರ್ಚೆಯನ್ನು ಬಗೆಹರಿಸುವವರು ಯಾರು ಎಂಬ ಪ್ರಶ್ನೆಗೆ ಸದ್ಯ ಉತ್ತರಲಿಲ್ಲ. ಹಿಂದೂ ಸಂಘಟನೆಗಳು ಅದರಲ್ಲೂ ವಿಶ್ವ ಹಿಂದೂ ಪರಿಷತ್ ಮುಖಂಡರೊಬ್ಬರು ಈ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಸ್ವಾಮಿ ಮಠದ ನಡುವಿನ ವಿವಾದ ಬಗೆಹರಿಸಲು ಪ್ರಯತ್ನಿಸಿದ್ದರೂ ಫಲ ನೀಡಿರಲಿಲ್ಲ. ಹಿಂದೂಗಳ ನಡುವೆತೇ ಐಕ್ಯತೆ ತರಲು ಸಾಧ್ಯವಾಗಿರಲಿಲ್ಲ. ಪ್ರತಿಷ್ಟೆಯ ಈ ವಿಷಯದಲ್ಲಿ ಈಗ ಸ್ವಾಮೀಜಿಗಳ ಹೇಳಿಕೆ ಕೂಡಾ ಚರ್ಚೆಗೆ ಕಾರಣವಾಗಿದೆ.

ಸದ್ಯ ಚರ್ಚೆ ಅಂತ್ಯ ಕಾಣುವ ಲಕ್ಷಣಗಳು ಕಾಣುತ್ತಿಲ್ಲ. ಶಿವಾರಾಧಕರಿಗೆ ಶಿವ ಪೂಜೆ ನಡೆಯಬೇಕಾದರೆ ಪೂಜೆ ನಡೆಸುವವರು ಯಾರು ಎಂಬ ಪ್ರಶ್ನೆ ಒಂದು ಕಡೆ ಇದ್ದರೆ , ಈ ಹಿಂದಿನಂತೆಯೇ ಪೂಜೆ ನಡೆಯುತ್ತದೆ ಎನ್ನುವುದು  ಇನ್ನೊಂದು ವಾದ. ಶಿವರಾತ್ರಿಯಂದು ಗೊಂದಲದ ಪೂಜೆ ನಡೆಯುತ್ತಿರುವುದು  ಮಾತ್ರಾ ಈಗಿನ ವಿಪರ್ಯಾಸ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

6 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

6 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

6 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

7 hours ago

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ  ಅಗತ್ಯ ಕ್ರಮ…

7 hours ago

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

17 hours ago