Advertisement
Exclusive - Mirror Hunt

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮುಗಿಯದ ಶೈವ-ವೈಷ್ಣವ ವಿವಾದ | ಹಿಂದೂ ಸಮಾಜದ ನಿರ್ಲಕ್ಷ್ಯದ ಬಗ್ಗೆ ವಿದ್ಯಾಪ್ರಸನ್ನ ಶ್ರೀಗಳ ವಿಷಾದದ ಮಾತು

Share

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಉಮಾಮಹೇಶ್ವರ ಗುಡಿಯಲ್ಲಿ ಶಿವರಾತ್ರಿಯಂದು ಶೈವ ಪದ್ಧತಿ ಪ್ರಕಾರ ಪೂಜೆ ನಡೆಯಬೇಕು ಎಂಬ ವಿವಾದ ರಾಜ್ಯದಲ್ಲಿ ಸುದ್ದಿಯಾಗಿತ್ತು. ಅದಾದ ಬಳಿಕ ಮುಜರಾಯಿ ಇಲಾಖೆ ಶೈವ ಪದ್ದತಿಯ ಪ್ರಕಾರ ಪೂಜೆ ನಡೆಸಲು ತಿಳಿಸಿತ್ತು. ಈ ಬಗ್ಗೆ ಮತ್ತೆ ವಿವಾದ ನಡೆದು  ನ್ಯಾಯಾಲಯದ ಮೆಟ್ಟಿಲೇರಿದ ಈ ಪ್ರಕರಣದಲ್ಲಿ ಯಥಾ ಪ್ರಕಾರ ಕಾಯ್ದುಕೊಳ್ಳಲು ನ್ಯಾಯಾಲಯ ನಿರ್ದೆಶನ ನೀಡಿದೆ.

ಈ ನಡುವೆ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರು ಶೈವ-ವೈಷ್ಣವ ಹಾಗೂ ಹಿಂದೂ ಧರ್ಮದ ಬಗ್ಗೆ ಹೇಳಿರುವ ಹೇಳಿಕೆ ಇದೀಗ ವೈರಲ್‌ ಆಗುತ್ತಿದೆ. ಈ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಸ್ವಾಮೀಜಿಗಳ ಈ ಮಾತಿನ ಬಗ್ಗೆ ವಿವಿಧ ಚರ್ಚೆಗಳು ಆರಂಭವಾಗಿದೆ. ಮಾತಿನ ಆರಂಭದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರ ನಿಷ್ಟೆಯ ಬಗ್ಗೆ ಮಾತನಾಡಿದ ಶ್ರೀಗಳು ನಂತರ ಶೈವ-ವೈಷ್ಣವ ಚರ್ಚೆಯ ಬಗ್ಗೆ ಮಾತನಾಡಿ ಹಿಂದೂ ಸಮಾಜವು ಮಾಡುತ್ತಿರುವ ನಿರ್ಲಕ್ಷ್ಯದ ಬಗ್ಗೆ ಹೇಳಿದ್ದಾರೆ. ಇದೇ ವೇಳೆ ಮಠದ ವಿರುದ್ಧವೂ ನಿರಂತರ ಕಿರುಕುಳದ ಬಗ್ಗೆಯೂ ಉಲ್ಲೇಖಿಸಿದ್ದಾರೆ.

ವೈರಲ್‌ ಆಗಿರುವ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳ ಹೇಳಿಕೆಯ ಲಿಂಕ್..

 

ಹಿಂದೂ ಧರ್ಮದೊಳಗೆ ಶೈವ-ವೈಷ್ಣವ ಚರ್ಚೆಯನ್ನು ಬಗೆಹರಿಸುವವರು ಯಾರು ಎಂಬ ಪ್ರಶ್ನೆಗೆ ಸದ್ಯ ಉತ್ತರಲಿಲ್ಲ. ಹಿಂದೂ ಸಂಘಟನೆಗಳು ಅದರಲ್ಲೂ ವಿಶ್ವ ಹಿಂದೂ ಪರಿಷತ್ ಮುಖಂಡರೊಬ್ಬರು ಈ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಸ್ವಾಮಿ ಮಠದ ನಡುವಿನ ವಿವಾದ ಬಗೆಹರಿಸಲು ಪ್ರಯತ್ನಿಸಿದ್ದರೂ ಫಲ ನೀಡಿರಲಿಲ್ಲ. ಹಿಂದೂಗಳ ನಡುವೆತೇ ಐಕ್ಯತೆ ತರಲು ಸಾಧ್ಯವಾಗಿರಲಿಲ್ಲ. ಪ್ರತಿಷ್ಟೆಯ ಈ ವಿಷಯದಲ್ಲಿ ಈಗ ಸ್ವಾಮೀಜಿಗಳ ಹೇಳಿಕೆ ಕೂಡಾ ಚರ್ಚೆಗೆ ಕಾರಣವಾಗಿದೆ.

ಸದ್ಯ ಚರ್ಚೆ ಅಂತ್ಯ ಕಾಣುವ ಲಕ್ಷಣಗಳು ಕಾಣುತ್ತಿಲ್ಲ. ಶಿವಾರಾಧಕರಿಗೆ ಶಿವ ಪೂಜೆ ನಡೆಯಬೇಕಾದರೆ ಪೂಜೆ ನಡೆಸುವವರು ಯಾರು ಎಂಬ ಪ್ರಶ್ನೆ ಒಂದು ಕಡೆ ಇದ್ದರೆ , ಈ ಹಿಂದಿನಂತೆಯೇ ಪೂಜೆ ನಡೆಯುತ್ತದೆ ಎನ್ನುವುದು  ಇನ್ನೊಂದು ವಾದ. ಶಿವರಾತ್ರಿಯಂದು ಗೊಂದಲದ ಪೂಜೆ ನಡೆಯುತ್ತಿರುವುದು  ಮಾತ್ರಾ ಈಗಿನ ವಿಪರ್ಯಾಸ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

23 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

23 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago