Advertisement
Exclusive - Mirror Hunt

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮುಗಿಯದ ಶೈವ-ವೈಷ್ಣವ ವಿವಾದ | ಹಿಂದೂ ಸಮಾಜದ ನಿರ್ಲಕ್ಷ್ಯದ ಬಗ್ಗೆ ವಿದ್ಯಾಪ್ರಸನ್ನ ಶ್ರೀಗಳ ವಿಷಾದದ ಮಾತು

Share

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಉಮಾಮಹೇಶ್ವರ ಗುಡಿಯಲ್ಲಿ ಶಿವರಾತ್ರಿಯಂದು ಶೈವ ಪದ್ಧತಿ ಪ್ರಕಾರ ಪೂಜೆ ನಡೆಯಬೇಕು ಎಂಬ ವಿವಾದ ರಾಜ್ಯದಲ್ಲಿ ಸುದ್ದಿಯಾಗಿತ್ತು. ಅದಾದ ಬಳಿಕ ಮುಜರಾಯಿ ಇಲಾಖೆ ಶೈವ ಪದ್ದತಿಯ ಪ್ರಕಾರ ಪೂಜೆ ನಡೆಸಲು ತಿಳಿಸಿತ್ತು. ಈ ಬಗ್ಗೆ ಮತ್ತೆ ವಿವಾದ ನಡೆದು  ನ್ಯಾಯಾಲಯದ ಮೆಟ್ಟಿಲೇರಿದ ಈ ಪ್ರಕರಣದಲ್ಲಿ ಯಥಾ ಪ್ರಕಾರ ಕಾಯ್ದುಕೊಳ್ಳಲು ನ್ಯಾಯಾಲಯ ನಿರ್ದೆಶನ ನೀಡಿದೆ.

Advertisement
Advertisement

ಈ ನಡುವೆ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರು ಶೈವ-ವೈಷ್ಣವ ಹಾಗೂ ಹಿಂದೂ ಧರ್ಮದ ಬಗ್ಗೆ ಹೇಳಿರುವ ಹೇಳಿಕೆ ಇದೀಗ ವೈರಲ್‌ ಆಗುತ್ತಿದೆ. ಈ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಸ್ವಾಮೀಜಿಗಳ ಈ ಮಾತಿನ ಬಗ್ಗೆ ವಿವಿಧ ಚರ್ಚೆಗಳು ಆರಂಭವಾಗಿದೆ. ಮಾತಿನ ಆರಂಭದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರ ನಿಷ್ಟೆಯ ಬಗ್ಗೆ ಮಾತನಾಡಿದ ಶ್ರೀಗಳು ನಂತರ ಶೈವ-ವೈಷ್ಣವ ಚರ್ಚೆಯ ಬಗ್ಗೆ ಮಾತನಾಡಿ ಹಿಂದೂ ಸಮಾಜವು ಮಾಡುತ್ತಿರುವ ನಿರ್ಲಕ್ಷ್ಯದ ಬಗ್ಗೆ ಹೇಳಿದ್ದಾರೆ. ಇದೇ ವೇಳೆ ಮಠದ ವಿರುದ್ಧವೂ ನಿರಂತರ ಕಿರುಕುಳದ ಬಗ್ಗೆಯೂ ಉಲ್ಲೇಖಿಸಿದ್ದಾರೆ.

Advertisement
ವೈರಲ್‌ ಆಗಿರುವ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳ ಹೇಳಿಕೆಯ ಲಿಂಕ್..

 

ಹಿಂದೂ ಧರ್ಮದೊಳಗೆ ಶೈವ-ವೈಷ್ಣವ ಚರ್ಚೆಯನ್ನು ಬಗೆಹರಿಸುವವರು ಯಾರು ಎಂಬ ಪ್ರಶ್ನೆಗೆ ಸದ್ಯ ಉತ್ತರಲಿಲ್ಲ. ಹಿಂದೂ ಸಂಘಟನೆಗಳು ಅದರಲ್ಲೂ ವಿಶ್ವ ಹಿಂದೂ ಪರಿಷತ್ ಮುಖಂಡರೊಬ್ಬರು ಈ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಸ್ವಾಮಿ ಮಠದ ನಡುವಿನ ವಿವಾದ ಬಗೆಹರಿಸಲು ಪ್ರಯತ್ನಿಸಿದ್ದರೂ ಫಲ ನೀಡಿರಲಿಲ್ಲ. ಹಿಂದೂಗಳ ನಡುವೆತೇ ಐಕ್ಯತೆ ತರಲು ಸಾಧ್ಯವಾಗಿರಲಿಲ್ಲ. ಪ್ರತಿಷ್ಟೆಯ ಈ ವಿಷಯದಲ್ಲಿ ಈಗ ಸ್ವಾಮೀಜಿಗಳ ಹೇಳಿಕೆ ಕೂಡಾ ಚರ್ಚೆಗೆ ಕಾರಣವಾಗಿದೆ.

Advertisement

ಸದ್ಯ ಚರ್ಚೆ ಅಂತ್ಯ ಕಾಣುವ ಲಕ್ಷಣಗಳು ಕಾಣುತ್ತಿಲ್ಲ. ಶಿವಾರಾಧಕರಿಗೆ ಶಿವ ಪೂಜೆ ನಡೆಯಬೇಕಾದರೆ ಪೂಜೆ ನಡೆಸುವವರು ಯಾರು ಎಂಬ ಪ್ರಶ್ನೆ ಒಂದು ಕಡೆ ಇದ್ದರೆ , ಈ ಹಿಂದಿನಂತೆಯೇ ಪೂಜೆ ನಡೆಯುತ್ತದೆ ಎನ್ನುವುದು  ಇನ್ನೊಂದು ವಾದ. ಶಿವರಾತ್ರಿಯಂದು ಗೊಂದಲದ ಪೂಜೆ ನಡೆಯುತ್ತಿರುವುದು  ಮಾತ್ರಾ ಈಗಿನ ವಿಪರ್ಯಾಸ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |

ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…

5 hours ago

ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |

ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…

6 hours ago

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?

ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…

2 days ago

ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!

ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…

2 days ago

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ

ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…

2 days ago

ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ | ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು |

ಹೆಚ್ಚಿನ ಪಾಲಕರು(Parents) ಮಕ್ಕಳನ್ನು(Children) ಹೆತ್ತ ನಂತರ ಅವರನ್ನು ಶಿಕ್ಷಣದ ವ್ಯವಸ್ಥೆ(Education system) ಮಾಡುವುದು…

2 days ago