Advertisement
Exclusive - Mirror Hunt

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮುಗಿಯದ ಶೈವ-ವೈಷ್ಣವ ವಿವಾದ | ಹಿಂದೂ ಸಮಾಜದ ನಿರ್ಲಕ್ಷ್ಯದ ಬಗ್ಗೆ ವಿದ್ಯಾಪ್ರಸನ್ನ ಶ್ರೀಗಳ ವಿಷಾದದ ಮಾತು

Share

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಉಮಾಮಹೇಶ್ವರ ಗುಡಿಯಲ್ಲಿ ಶಿವರಾತ್ರಿಯಂದು ಶೈವ ಪದ್ಧತಿ ಪ್ರಕಾರ ಪೂಜೆ ನಡೆಯಬೇಕು ಎಂಬ ವಿವಾದ ರಾಜ್ಯದಲ್ಲಿ ಸುದ್ದಿಯಾಗಿತ್ತು. ಅದಾದ ಬಳಿಕ ಮುಜರಾಯಿ ಇಲಾಖೆ ಶೈವ ಪದ್ದತಿಯ ಪ್ರಕಾರ ಪೂಜೆ ನಡೆಸಲು ತಿಳಿಸಿತ್ತು. ಈ ಬಗ್ಗೆ ಮತ್ತೆ ವಿವಾದ ನಡೆದು  ನ್ಯಾಯಾಲಯದ ಮೆಟ್ಟಿಲೇರಿದ ಈ ಪ್ರಕರಣದಲ್ಲಿ ಯಥಾ ಪ್ರಕಾರ ಕಾಯ್ದುಕೊಳ್ಳಲು ನ್ಯಾಯಾಲಯ ನಿರ್ದೆಶನ ನೀಡಿದೆ.

ಈ ನಡುವೆ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರು ಶೈವ-ವೈಷ್ಣವ ಹಾಗೂ ಹಿಂದೂ ಧರ್ಮದ ಬಗ್ಗೆ ಹೇಳಿರುವ ಹೇಳಿಕೆ ಇದೀಗ ವೈರಲ್‌ ಆಗುತ್ತಿದೆ. ಈ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಸ್ವಾಮೀಜಿಗಳ ಈ ಮಾತಿನ ಬಗ್ಗೆ ವಿವಿಧ ಚರ್ಚೆಗಳು ಆರಂಭವಾಗಿದೆ. ಮಾತಿನ ಆರಂಭದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರ ನಿಷ್ಟೆಯ ಬಗ್ಗೆ ಮಾತನಾಡಿದ ಶ್ರೀಗಳು ನಂತರ ಶೈವ-ವೈಷ್ಣವ ಚರ್ಚೆಯ ಬಗ್ಗೆ ಮಾತನಾಡಿ ಹಿಂದೂ ಸಮಾಜವು ಮಾಡುತ್ತಿರುವ ನಿರ್ಲಕ್ಷ್ಯದ ಬಗ್ಗೆ ಹೇಳಿದ್ದಾರೆ. ಇದೇ ವೇಳೆ ಮಠದ ವಿರುದ್ಧವೂ ನಿರಂತರ ಕಿರುಕುಳದ ಬಗ್ಗೆಯೂ ಉಲ್ಲೇಖಿಸಿದ್ದಾರೆ.

ವೈರಲ್‌ ಆಗಿರುವ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳ ಹೇಳಿಕೆಯ ಲಿಂಕ್..

 

ಹಿಂದೂ ಧರ್ಮದೊಳಗೆ ಶೈವ-ವೈಷ್ಣವ ಚರ್ಚೆಯನ್ನು ಬಗೆಹರಿಸುವವರು ಯಾರು ಎಂಬ ಪ್ರಶ್ನೆಗೆ ಸದ್ಯ ಉತ್ತರಲಿಲ್ಲ. ಹಿಂದೂ ಸಂಘಟನೆಗಳು ಅದರಲ್ಲೂ ವಿಶ್ವ ಹಿಂದೂ ಪರಿಷತ್ ಮುಖಂಡರೊಬ್ಬರು ಈ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಸ್ವಾಮಿ ಮಠದ ನಡುವಿನ ವಿವಾದ ಬಗೆಹರಿಸಲು ಪ್ರಯತ್ನಿಸಿದ್ದರೂ ಫಲ ನೀಡಿರಲಿಲ್ಲ. ಹಿಂದೂಗಳ ನಡುವೆತೇ ಐಕ್ಯತೆ ತರಲು ಸಾಧ್ಯವಾಗಿರಲಿಲ್ಲ. ಪ್ರತಿಷ್ಟೆಯ ಈ ವಿಷಯದಲ್ಲಿ ಈಗ ಸ್ವಾಮೀಜಿಗಳ ಹೇಳಿಕೆ ಕೂಡಾ ಚರ್ಚೆಗೆ ಕಾರಣವಾಗಿದೆ.

ಸದ್ಯ ಚರ್ಚೆ ಅಂತ್ಯ ಕಾಣುವ ಲಕ್ಷಣಗಳು ಕಾಣುತ್ತಿಲ್ಲ. ಶಿವಾರಾಧಕರಿಗೆ ಶಿವ ಪೂಜೆ ನಡೆಯಬೇಕಾದರೆ ಪೂಜೆ ನಡೆಸುವವರು ಯಾರು ಎಂಬ ಪ್ರಶ್ನೆ ಒಂದು ಕಡೆ ಇದ್ದರೆ , ಈ ಹಿಂದಿನಂತೆಯೇ ಪೂಜೆ ನಡೆಯುತ್ತದೆ ಎನ್ನುವುದು  ಇನ್ನೊಂದು ವಾದ. ಶಿವರಾತ್ರಿಯಂದು ಗೊಂದಲದ ಪೂಜೆ ನಡೆಯುತ್ತಿರುವುದು  ಮಾತ್ರಾ ಈಗಿನ ವಿಪರ್ಯಾಸ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

21 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago