ಕುಕ್ಕೆ ಸುಬ್ರಹ್ಮಣ್ಯ – ತಿರುಪತಿ | ಕೆಎಸ್‌ಆರ್‌ಟಿಸಿ ಬಸ್ಸು ಸೇವೆ ಆರಂಭ |

March 26, 2022
9:55 PM

ಎರಡು ಪ್ರಸಿದ್ಧ ಪುಣ್ಯ ಕ್ಷೇತ್ರಗಳಾದ ಸುಬ್ರಹ್ಮಣ್ಯ- ತಿರುಪತಿ  ಸಂಪರ್ಕಿಸಲು ಕೆ ಎಸ್‌ ಆರ್‌ ಟಿ ಸಿ ಬಸ್ಸು ಸೇವೆ ಶನಿವಾರ ಸಂಜೆ ಆರಂಭಗೊಂಡಿದೆ. ಸಚಿವ ಎಸ್‌ ಅಂಗಾರ ಬಸ್ಸು ಸೇವೆಯನ್ನು ಉದ್ಘಾಟಿಸಿದರು. 

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಭಿವೃದ್ದಿ ವಿಭಾಗದ ಪುತ್ತೂರು ಉಪ ವಿಭಾಗದ ಧರ್ಮಸ್ಥಳ ಡಿಪೋದ ವತಿಯಿಂದ ಈ ಸೇವೆ ಆರಂಭಗೊಂಡಿದೆ. ಕುಕ್ಕೆ ಸುಬ್ರಹ್ಮಣ್ಯ-ತಿರುಪತಿ ಬಸ್ ರಾತ್ರಿ 9 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯದಿಂದ ಹೊರಡಲಿದೆ. ಬೆಳಗ್ಗೆ 4.30 ಗಂಟೆಗೆ ಗೆ ಬೆಂಗಳೂರು ತಲುಪಲಿದೆ.ಅಲ್ಲಿಂದ 5 ಗಂಟೆಗೆ ಹೊರಟು 10.30 ಗಂಟೆಗೆ ತಿರುಪತಿ ತಲುಪಲಿದೆ. ತಿರುಪತಿಯಿಂದ ಸಂಜೆ 4 ಗಂಟೆಗೆ ಹೊರಡಲಿದೆ.ಅಲ್ಲಿಂದ ಬೆಂಗಳೂರು ಮೂಲಕ ಬೆಳಗ್ಗೆ 5 ಗಂಟೆಗೆ ಸುಬ್ರಹ್ಮಣ್ಯ ತಲುಪಲಿದೆ.ಬಸ್‌ನಲ್ಲಿ ಇಬ್ಬರು ಚಾಲಕರು ಇರಲಿದ್ದಾರೆ.

ಬಸ್ಸು ಸೇವೆ ಉದ್ಘಾಟಿಸಿದ ಸಚಿವ ಎಸ್‌ ಅಂಗಾರ, ಎರಡು ಪುಣ್ಯ ಕ್ಷೇತ್ರಗಳ ಸಂಪರ್ಕದ ಈ ಬಸ್ಸು ಸೇವೆಯನ್ನು ಎಲ್ಲರೂ ಬಳಸಿಕೊಳ್ಳಬೇಕು, ಯಾತ್ರಾ ಕ್ಷೇತ್ರಗಳಿಗೆ ನೇರವಾಗಿ ಪ್ರಯಾಣ ಬೆಳೆಸಲು ಬಸ್ ವ್ಯವಸ್ಥೆ ಬೇಕು ಎಂದು ಭಕ್ತರು ಬೇಡಿಕೆ ಇರಿಸಿದ್ದರು ಎಂದರು.

ಪುರೋಹಿತ ಪ್ರಸನ್ನ ಹೊಳ್ಳ ವೈದಿಕ ವಿದಿ ವಿಧಾನಗಳ ಮೂಲಕ ಬಸ್‌ಗೆ ಪೂಜೆ ನೆರವೇರಿಸಿದರು. ಈ ಸಂದರ್ಭ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ, ಪುತ್ತೂರು ವಿಭಾಗೀಯ ಸಂಚಾರಾಧಿಕಾರಿ ಮುರಳೀಧರ ಆಚಾರ್,ಕಾರ್ಯನಿರ್ವಾಹಕ ಅಭಿಯಂತರ ಮಂಜುನಾಥ್ ಗುಡಿಗಾರ್, ಕಾರ್ಮಿಕ ಕಲ್ಯಾಣಾಧಿಕಾರಿ ಪ್ರಕಾಶ್, ಸಂಚಾರ ನಿಯಂತ್ರಕರಾದ ಗೋಪಾಲಕೃಷ್ಣ ಎಡಮಂಗಲ,  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ.ವಿ.ಭಟ್, ಶೋಭಾ ಗಿರಿಧರ್, ಗ್ರಾ.ಪಂ.ಸದಸ್ಯೆ ಭಾರತಿ ದಿನೇಶ್ ಮೊದಲಾದವರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಿ ಎಸ್ ಎನ್ ಎಲ್ ವಿರುದ್ಧ ಸುಳ್ಯದ ಗ್ರಾಹಕನಿಗೆ ಜಯ – ಇಂಟರ್ನೆಟ್ ಸೇವೆಯಲ್ಲಿ ವ್ಯತ್ಯಯಕ್ಕೆ ₹30,000 ಪರಿಹಾರ ಆದೇಶ..!
May 1, 2026
2:37 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 01-05-2026 | ಮಳೆಯ ಚಟುವಟಿಕೆ ಕಡಿಮೆಯಾಗುತ್ತಾ? ಮೇ 2ರಿಂದ ಕೆಲವು ದಿನ ಮಳೆ ಕಡಿಮೆ, ಬಳಿಕ ಮತ್ತೆ ಚುರುಕು..!?
May 1, 2026
2:16 PM
by: ಸಾಯಿಶೇಖರ್ ಕರಿಕಳ
ಚಿಕ್ಕಮಗಳೂರಿನಲ್ಲಿ ದಾಳಿ – ಅಕ್ರಮವಾಗಿ ಸಂಗ್ರಹಿಸಿದ್ದ 181 ಯೂರಿಯಾ ಚೀಲಗಳು ಜಪ್ತಿ
May 1, 2026
11:34 AM
by: ಮಿರರ್‌ ಡೆಸ್ಕ್
ರಾಜ್ಯದ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ – ಮುಂದಿನ ಕೆಲ ದಿನ ಮಳೆ ಎಚ್ಚರಿಕೆ..!
May 1, 2026
11:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror