Advertisement
ಜಿಲ್ಲೆ

ಕುಕ್ಕೆ ಸುಬ್ರಹ್ಮಣ್ಯ – ತಿರುಪತಿ | ಕೆಎಸ್‌ಆರ್‌ಟಿಸಿ ಬಸ್ಸು ಸೇವೆ ಆರಂಭ |

Share

ಎರಡು ಪ್ರಸಿದ್ಧ ಪುಣ್ಯ ಕ್ಷೇತ್ರಗಳಾದ ಸುಬ್ರಹ್ಮಣ್ಯ- ತಿರುಪತಿ  ಸಂಪರ್ಕಿಸಲು ಕೆ ಎಸ್‌ ಆರ್‌ ಟಿ ಸಿ ಬಸ್ಸು ಸೇವೆ ಶನಿವಾರ ಸಂಜೆ ಆರಂಭಗೊಂಡಿದೆ. ಸಚಿವ ಎಸ್‌ ಅಂಗಾರ ಬಸ್ಸು ಸೇವೆಯನ್ನು ಉದ್ಘಾಟಿಸಿದರು. 

Advertisement
Advertisement

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಭಿವೃದ್ದಿ ವಿಭಾಗದ ಪುತ್ತೂರು ಉಪ ವಿಭಾಗದ ಧರ್ಮಸ್ಥಳ ಡಿಪೋದ ವತಿಯಿಂದ ಈ ಸೇವೆ ಆರಂಭಗೊಂಡಿದೆ. ಕುಕ್ಕೆ ಸುಬ್ರಹ್ಮಣ್ಯ-ತಿರುಪತಿ ಬಸ್ ರಾತ್ರಿ 9 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯದಿಂದ ಹೊರಡಲಿದೆ. ಬೆಳಗ್ಗೆ 4.30 ಗಂಟೆಗೆ ಗೆ ಬೆಂಗಳೂರು ತಲುಪಲಿದೆ.ಅಲ್ಲಿಂದ 5 ಗಂಟೆಗೆ ಹೊರಟು 10.30 ಗಂಟೆಗೆ ತಿರುಪತಿ ತಲುಪಲಿದೆ. ತಿರುಪತಿಯಿಂದ ಸಂಜೆ 4 ಗಂಟೆಗೆ ಹೊರಡಲಿದೆ.ಅಲ್ಲಿಂದ ಬೆಂಗಳೂರು ಮೂಲಕ ಬೆಳಗ್ಗೆ 5 ಗಂಟೆಗೆ ಸುಬ್ರಹ್ಮಣ್ಯ ತಲುಪಲಿದೆ.ಬಸ್‌ನಲ್ಲಿ ಇಬ್ಬರು ಚಾಲಕರು ಇರಲಿದ್ದಾರೆ.

Advertisement

ಬಸ್ಸು ಸೇವೆ ಉದ್ಘಾಟಿಸಿದ ಸಚಿವ ಎಸ್‌ ಅಂಗಾರ, ಎರಡು ಪುಣ್ಯ ಕ್ಷೇತ್ರಗಳ ಸಂಪರ್ಕದ ಈ ಬಸ್ಸು ಸೇವೆಯನ್ನು ಎಲ್ಲರೂ ಬಳಸಿಕೊಳ್ಳಬೇಕು, ಯಾತ್ರಾ ಕ್ಷೇತ್ರಗಳಿಗೆ ನೇರವಾಗಿ ಪ್ರಯಾಣ ಬೆಳೆಸಲು ಬಸ್ ವ್ಯವಸ್ಥೆ ಬೇಕು ಎಂದು ಭಕ್ತರು ಬೇಡಿಕೆ ಇರಿಸಿದ್ದರು ಎಂದರು.

Advertisement

ಪುರೋಹಿತ ಪ್ರಸನ್ನ ಹೊಳ್ಳ ವೈದಿಕ ವಿದಿ ವಿಧಾನಗಳ ಮೂಲಕ ಬಸ್‌ಗೆ ಪೂಜೆ ನೆರವೇರಿಸಿದರು. ಈ ಸಂದರ್ಭ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ, ಪುತ್ತೂರು ವಿಭಾಗೀಯ ಸಂಚಾರಾಧಿಕಾರಿ ಮುರಳೀಧರ ಆಚಾರ್,ಕಾರ್ಯನಿರ್ವಾಹಕ ಅಭಿಯಂತರ ಮಂಜುನಾಥ್ ಗುಡಿಗಾರ್, ಕಾರ್ಮಿಕ ಕಲ್ಯಾಣಾಧಿಕಾರಿ ಪ್ರಕಾಶ್, ಸಂಚಾರ ನಿಯಂತ್ರಕರಾದ ಗೋಪಾಲಕೃಷ್ಣ ಎಡಮಂಗಲ,  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ.ವಿ.ಭಟ್, ಶೋಭಾ ಗಿರಿಧರ್, ಗ್ರಾ.ಪಂ.ಸದಸ್ಯೆ ಭಾರತಿ ದಿನೇಶ್ ಮೊದಲಾದವರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

13 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

14 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

18 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

18 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

19 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

20 hours ago