Advertisement
ಜಿಲ್ಲೆ

ಕುಕ್ಕೆ ಸುಬ್ರಹ್ಮಣ್ಯ – ತಿರುಪತಿ | ಕೆಎಸ್‌ಆರ್‌ಟಿಸಿ ಬಸ್ಸು ಸೇವೆ ಆರಂಭ |

Share

ಎರಡು ಪ್ರಸಿದ್ಧ ಪುಣ್ಯ ಕ್ಷೇತ್ರಗಳಾದ ಸುಬ್ರಹ್ಮಣ್ಯ- ತಿರುಪತಿ  ಸಂಪರ್ಕಿಸಲು ಕೆ ಎಸ್‌ ಆರ್‌ ಟಿ ಸಿ ಬಸ್ಸು ಸೇವೆ ಶನಿವಾರ ಸಂಜೆ ಆರಂಭಗೊಂಡಿದೆ. ಸಚಿವ ಎಸ್‌ ಅಂಗಾರ ಬಸ್ಸು ಸೇವೆಯನ್ನು ಉದ್ಘಾಟಿಸಿದರು. 

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಭಿವೃದ್ದಿ ವಿಭಾಗದ ಪುತ್ತೂರು ಉಪ ವಿಭಾಗದ ಧರ್ಮಸ್ಥಳ ಡಿಪೋದ ವತಿಯಿಂದ ಈ ಸೇವೆ ಆರಂಭಗೊಂಡಿದೆ. ಕುಕ್ಕೆ ಸುಬ್ರಹ್ಮಣ್ಯ-ತಿರುಪತಿ ಬಸ್ ರಾತ್ರಿ 9 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯದಿಂದ ಹೊರಡಲಿದೆ. ಬೆಳಗ್ಗೆ 4.30 ಗಂಟೆಗೆ ಗೆ ಬೆಂಗಳೂರು ತಲುಪಲಿದೆ.ಅಲ್ಲಿಂದ 5 ಗಂಟೆಗೆ ಹೊರಟು 10.30 ಗಂಟೆಗೆ ತಿರುಪತಿ ತಲುಪಲಿದೆ. ತಿರುಪತಿಯಿಂದ ಸಂಜೆ 4 ಗಂಟೆಗೆ ಹೊರಡಲಿದೆ.ಅಲ್ಲಿಂದ ಬೆಂಗಳೂರು ಮೂಲಕ ಬೆಳಗ್ಗೆ 5 ಗಂಟೆಗೆ ಸುಬ್ರಹ್ಮಣ್ಯ ತಲುಪಲಿದೆ.ಬಸ್‌ನಲ್ಲಿ ಇಬ್ಬರು ಚಾಲಕರು ಇರಲಿದ್ದಾರೆ.

ಬಸ್ಸು ಸೇವೆ ಉದ್ಘಾಟಿಸಿದ ಸಚಿವ ಎಸ್‌ ಅಂಗಾರ, ಎರಡು ಪುಣ್ಯ ಕ್ಷೇತ್ರಗಳ ಸಂಪರ್ಕದ ಈ ಬಸ್ಸು ಸೇವೆಯನ್ನು ಎಲ್ಲರೂ ಬಳಸಿಕೊಳ್ಳಬೇಕು, ಯಾತ್ರಾ ಕ್ಷೇತ್ರಗಳಿಗೆ ನೇರವಾಗಿ ಪ್ರಯಾಣ ಬೆಳೆಸಲು ಬಸ್ ವ್ಯವಸ್ಥೆ ಬೇಕು ಎಂದು ಭಕ್ತರು ಬೇಡಿಕೆ ಇರಿಸಿದ್ದರು ಎಂದರು.

ಪುರೋಹಿತ ಪ್ರಸನ್ನ ಹೊಳ್ಳ ವೈದಿಕ ವಿದಿ ವಿಧಾನಗಳ ಮೂಲಕ ಬಸ್‌ಗೆ ಪೂಜೆ ನೆರವೇರಿಸಿದರು. ಈ ಸಂದರ್ಭ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ, ಪುತ್ತೂರು ವಿಭಾಗೀಯ ಸಂಚಾರಾಧಿಕಾರಿ ಮುರಳೀಧರ ಆಚಾರ್,ಕಾರ್ಯನಿರ್ವಾಹಕ ಅಭಿಯಂತರ ಮಂಜುನಾಥ್ ಗುಡಿಗಾರ್, ಕಾರ್ಮಿಕ ಕಲ್ಯಾಣಾಧಿಕಾರಿ ಪ್ರಕಾಶ್, ಸಂಚಾರ ನಿಯಂತ್ರಕರಾದ ಗೋಪಾಲಕೃಷ್ಣ ಎಡಮಂಗಲ,  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ.ವಿ.ಭಟ್, ಶೋಭಾ ಗಿರಿಧರ್, ಗ್ರಾ.ಪಂ.ಸದಸ್ಯೆ ಭಾರತಿ ದಿನೇಶ್ ಮೊದಲಾದವರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

2 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

2 days ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

2 days ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

2 days ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 days ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

3 days ago