ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಕುಕ್ಕೆ ಲಿಂಗ ದೇವರು, ಶ್ರೀ ಕಾಲಭೈರವ ದೇವರು, ಶ್ರೀ ಚಂದ್ರಮೌಳೀಶ್ವರ ದೇವರುಗಳಿಗೆ ನಿತ್ಯ ಮೂರು ಹೊತ್ತು ಪೂಜೆ ಮತ್ತು ನೈವೇದ್ಯ ನಡೆಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿತರಕ್ಷಣಾ ವೇದಿಕೆ ವತಿಯಿಂದ ಮುಜರಾಯಿ ಇಲಾಖೆಗೆ, ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಭಕ್ತಾದಿ ಟಿ ಎಸ್ ಶ್ರೀನಾಥ್ ಎಂಬವರು ದೂರು ನೀಡಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕವಾಗಿ 95 ಕೋಟಿಗಿಂತಲೂ ಅಧಿಕ ಆದಾಯ ಬರುತ್ತಿದೆ. ಆದರೆ ಕುಕ್ಕೆ ದೇವಸ್ಥಾನದ ಒಳಾಂಗಣದಲ್ಲಿರುವ ಪರಿವಾರ ದೇವರುಗಳಾದ ಶ್ರೀ ಕುಕ್ಕೆ ಲಿಂಗ ದೇವರು, ಶ್ರೀ ಕಾಲಭೈರವ ದೇವರು ಹಾಗೂ ಹೊರಾಂಗಣದಲ್ಲಿರುವ ಶ್ರೀ ಚಂದ್ರಮೌಳೀಶ್ವರ ದೇವರುಗಳಿಗೆ ಸದ್ಯ ಬೆಳಗಿನ ಪೂಜೆ ಮಾತ್ರಾ ನಡೆಯುತ್ತಿದೆ, ಇದು ಸರಿಯಲ್ಲ, ಮೂರು ಹೊತ್ತಿನ ಪೂಜೆ ನಡೆಯಬೇಕು ಎಂದು ಟಿ ಎಸ್ ಶ್ರೀನಾಥ್ ಒತ್ತಾಯಿಸಿದ್ದಾರೆ. ಎಲ್ಲಾ ಪರಿವಾರ ದೇವರುಗಳಿಗೂ ಮೂರು ಹೊತ್ತು ಪೂಜೆ ನಡೆಯಬೇಕು ಎಂಬುದು ಭಕ್ತರ ಆಶಯವಾಗಿದ್ದು ಒಂದು ಹೊತ್ತಿನ ಪೂಜೆ ಮಾತ್ರವೇ ಮಾಡಿ ಭಕ್ತರ ವಿಶ್ವಾಸ, ಭಾವನೆಗಳಿಗೆ ಧಕ್ಕೆ ತರಬಾರದು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ದಿಟ್ಟಂನಲ್ಲಿ ಕೂಡಾ ಮೂರು ಹೊತ್ತಿನ ಪೂಜೆ ನಡೆಸಬೇಕು ಎಂದು ಉಲ್ಲೇಖಿಸಲಾಗಿದೆ.ಆದರೆ ಇಲ್ಲಿನ ಅರ್ಚಕರು ಇದರ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸುಜನಾ ಸ್ತ್ರೀಶಕ್ತಿ ಸ್ವಸಹಾಯ ಸಂಘ ಕಳೆದ 23 ವರ್ಷಗಳಿಂದ ಎಳ್ಳು–ಬೆಲ್ಲ…
ನಕಲಿ ಹಾಗೂ ಕಳಪೆ ಬೀಜಗಳ ಮಾರಾಟ ತಡೆಗೆ ನೂತನ ಬೀಜ ಕಾಯ್ದೆ–2026ನ್ನು ಬಜೆಟ್…
ಉತ್ತರ ಕನ್ನಡದ ದಾಂಡೇಲಿಯಲ್ಲಿ ಹಾರ್ನ್ಬಿಲ್ ಹಬ್ಬಕ್ಕೆ ಚಾಲನೆ ನೀಡಲಾಗಿದ್ದು, ಶಾಲಾ ಮಕ್ಕಳು ಹಾಗೂ…
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಕಾಮಗಾರಿಯನ್ನು ಸಚಿವ ಕೃಷ್ಣಭೈರೇಗೌಡ…
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ಒತ್ತಾಯಿಸಿ ಸಂಯುಕ್ತ…