ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಕುಕ್ಕೆ ಲಿಂಗ ದೇವರು, ಶ್ರೀ ಕಾಲಭೈರವ ದೇವರು, ಶ್ರೀ ಚಂದ್ರಮೌಳೀಶ್ವರ ದೇವರುಗಳಿಗೆ ನಿತ್ಯ ಮೂರು ಹೊತ್ತು ಪೂಜೆ ಮತ್ತು ನೈವೇದ್ಯ ನಡೆಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿತರಕ್ಷಣಾ ವೇದಿಕೆ ವತಿಯಿಂದ ಮುಜರಾಯಿ ಇಲಾಖೆಗೆ, ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಭಕ್ತಾದಿ ಟಿ ಎಸ್ ಶ್ರೀನಾಥ್ ಎಂಬವರು ದೂರು ನೀಡಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕವಾಗಿ 95 ಕೋಟಿಗಿಂತಲೂ ಅಧಿಕ ಆದಾಯ ಬರುತ್ತಿದೆ. ಆದರೆ ಕುಕ್ಕೆ ದೇವಸ್ಥಾನದ ಒಳಾಂಗಣದಲ್ಲಿರುವ ಪರಿವಾರ ದೇವರುಗಳಾದ ಶ್ರೀ ಕುಕ್ಕೆ ಲಿಂಗ ದೇವರು, ಶ್ರೀ ಕಾಲಭೈರವ ದೇವರು ಹಾಗೂ ಹೊರಾಂಗಣದಲ್ಲಿರುವ ಶ್ರೀ ಚಂದ್ರಮೌಳೀಶ್ವರ ದೇವರುಗಳಿಗೆ ಸದ್ಯ ಬೆಳಗಿನ ಪೂಜೆ ಮಾತ್ರಾ ನಡೆಯುತ್ತಿದೆ, ಇದು ಸರಿಯಲ್ಲ, ಮೂರು ಹೊತ್ತಿನ ಪೂಜೆ ನಡೆಯಬೇಕು ಎಂದು ಟಿ ಎಸ್ ಶ್ರೀನಾಥ್ ಒತ್ತಾಯಿಸಿದ್ದಾರೆ. ಎಲ್ಲಾ ಪರಿವಾರ ದೇವರುಗಳಿಗೂ ಮೂರು ಹೊತ್ತು ಪೂಜೆ ನಡೆಯಬೇಕು ಎಂಬುದು ಭಕ್ತರ ಆಶಯವಾಗಿದ್ದು ಒಂದು ಹೊತ್ತಿನ ಪೂಜೆ ಮಾತ್ರವೇ ಮಾಡಿ ಭಕ್ತರ ವಿಶ್ವಾಸ, ಭಾವನೆಗಳಿಗೆ ಧಕ್ಕೆ ತರಬಾರದು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ದಿಟ್ಟಂನಲ್ಲಿ ಕೂಡಾ ಮೂರು ಹೊತ್ತಿನ ಪೂಜೆ ನಡೆಸಬೇಕು ಎಂದು ಉಲ್ಲೇಖಿಸಲಾಗಿದೆ.ಆದರೆ ಇಲ್ಲಿನ ಅರ್ಚಕರು ಇದರ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.
ಕೊರೋನಾ ಸಂಬಂಧಿಸಿದ ವದಂತಿಗಳನ್ನು ಜನತೆ ನಂಬಬಾರದು. ಸಾಮಾಜಿಕ ಜಾಲತಾಣದಲ್ಲಿ ಬರುವ ಎಲ್ಲ ಸುದ್ದಿಗಳು…
ಮಾವಿನ ಹಣ್ಣಿನ ಕಾಲದಲ್ಲಿ ನಿತ್ಯ ಏನಾದರೊಂದು ಬಗೆ ಮಾಡಿ ಉಣಬಡಿಸದಿದ್ದರೆ ಮನೆಯಾಕೆಗೆ ಖಂಡಿತಾ…
ಅಡಿಕೆಯನ್ನು ಮುಖ್ಯವಾಗಿ ಬೀಡಾದ ತಯಾರಿಯಲ್ಲಿ ಒಂದು ಮೂಲ ಉತ್ಪನ್ನ ಆಗಿ ಬಳಸಲಾಗುತ್ತಿದೆ.ಇದನ್ನು ವಿವಿಧ…
ಜೂನ್ 11ರಿಂದ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕುಗೊಂಡು ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…