ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಕುಕ್ಕೆ ಲಿಂಗ ದೇವರು, ಶ್ರೀ ಕಾಲಭೈರವ ದೇವರು, ಶ್ರೀ ಚಂದ್ರಮೌಳೀಶ್ವರ ದೇವರುಗಳಿಗೆ ನಿತ್ಯ ಮೂರು ಹೊತ್ತು ಪೂಜೆ ಮತ್ತು ನೈವೇದ್ಯ ನಡೆಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿತರಕ್ಷಣಾ ವೇದಿಕೆ ವತಿಯಿಂದ ಮುಜರಾಯಿ ಇಲಾಖೆಗೆ, ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಭಕ್ತಾದಿ ಟಿ ಎಸ್ ಶ್ರೀನಾಥ್ ಎಂಬವರು ದೂರು ನೀಡಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕವಾಗಿ 95 ಕೋಟಿಗಿಂತಲೂ ಅಧಿಕ ಆದಾಯ ಬರುತ್ತಿದೆ. ಆದರೆ ಕುಕ್ಕೆ ದೇವಸ್ಥಾನದ ಒಳಾಂಗಣದಲ್ಲಿರುವ ಪರಿವಾರ ದೇವರುಗಳಾದ ಶ್ರೀ ಕುಕ್ಕೆ ಲಿಂಗ ದೇವರು, ಶ್ರೀ ಕಾಲಭೈರವ ದೇವರು ಹಾಗೂ ಹೊರಾಂಗಣದಲ್ಲಿರುವ ಶ್ರೀ ಚಂದ್ರಮೌಳೀಶ್ವರ ದೇವರುಗಳಿಗೆ ಸದ್ಯ ಬೆಳಗಿನ ಪೂಜೆ ಮಾತ್ರಾ ನಡೆಯುತ್ತಿದೆ, ಇದು ಸರಿಯಲ್ಲ, ಮೂರು ಹೊತ್ತಿನ ಪೂಜೆ ನಡೆಯಬೇಕು ಎಂದು ಟಿ ಎಸ್ ಶ್ರೀನಾಥ್ ಒತ್ತಾಯಿಸಿದ್ದಾರೆ. ಎಲ್ಲಾ ಪರಿವಾರ ದೇವರುಗಳಿಗೂ ಮೂರು ಹೊತ್ತು ಪೂಜೆ ನಡೆಯಬೇಕು ಎಂಬುದು ಭಕ್ತರ ಆಶಯವಾಗಿದ್ದು ಒಂದು ಹೊತ್ತಿನ ಪೂಜೆ ಮಾತ್ರವೇ ಮಾಡಿ ಭಕ್ತರ ವಿಶ್ವಾಸ, ಭಾವನೆಗಳಿಗೆ ಧಕ್ಕೆ ತರಬಾರದು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ದಿಟ್ಟಂನಲ್ಲಿ ಕೂಡಾ ಮೂರು ಹೊತ್ತಿನ ಪೂಜೆ ನಡೆಸಬೇಕು ಎಂದು ಉಲ್ಲೇಖಿಸಲಾಗಿದೆ.ಆದರೆ ಇಲ್ಲಿನ ಅರ್ಚಕರು ಇದರ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…