ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಕುಕ್ಕೆ ಲಿಂಗ ದೇವರು, ಶ್ರೀ ಕಾಲಭೈರವ ದೇವರು, ಶ್ರೀ ಚಂದ್ರಮೌಳೀಶ್ವರ ದೇವರುಗಳಿಗೆ ನಿತ್ಯ ಮೂರು ಹೊತ್ತು ಪೂಜೆ ಮತ್ತು ನೈವೇದ್ಯ ನಡೆಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿತರಕ್ಷಣಾ ವೇದಿಕೆ ವತಿಯಿಂದ ಮುಜರಾಯಿ ಇಲಾಖೆಗೆ, ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಭಕ್ತಾದಿ ಟಿ ಎಸ್ ಶ್ರೀನಾಥ್ ಎಂಬವರು ದೂರು ನೀಡಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕವಾಗಿ 95 ಕೋಟಿಗಿಂತಲೂ ಅಧಿಕ ಆದಾಯ ಬರುತ್ತಿದೆ. ಆದರೆ ಕುಕ್ಕೆ ದೇವಸ್ಥಾನದ ಒಳಾಂಗಣದಲ್ಲಿರುವ ಪರಿವಾರ ದೇವರುಗಳಾದ ಶ್ರೀ ಕುಕ್ಕೆ ಲಿಂಗ ದೇವರು, ಶ್ರೀ ಕಾಲಭೈರವ ದೇವರು ಹಾಗೂ ಹೊರಾಂಗಣದಲ್ಲಿರುವ ಶ್ರೀ ಚಂದ್ರಮೌಳೀಶ್ವರ ದೇವರುಗಳಿಗೆ ಸದ್ಯ ಬೆಳಗಿನ ಪೂಜೆ ಮಾತ್ರಾ ನಡೆಯುತ್ತಿದೆ, ಇದು ಸರಿಯಲ್ಲ, ಮೂರು ಹೊತ್ತಿನ ಪೂಜೆ ನಡೆಯಬೇಕು ಎಂದು ಟಿ ಎಸ್ ಶ್ರೀನಾಥ್ ಒತ್ತಾಯಿಸಿದ್ದಾರೆ. ಎಲ್ಲಾ ಪರಿವಾರ ದೇವರುಗಳಿಗೂ ಮೂರು ಹೊತ್ತು ಪೂಜೆ ನಡೆಯಬೇಕು ಎಂಬುದು ಭಕ್ತರ ಆಶಯವಾಗಿದ್ದು ಒಂದು ಹೊತ್ತಿನ ಪೂಜೆ ಮಾತ್ರವೇ ಮಾಡಿ ಭಕ್ತರ ವಿಶ್ವಾಸ, ಭಾವನೆಗಳಿಗೆ ಧಕ್ಕೆ ತರಬಾರದು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ದಿಟ್ಟಂನಲ್ಲಿ ಕೂಡಾ ಮೂರು ಹೊತ್ತಿನ ಪೂಜೆ ನಡೆಸಬೇಕು ಎಂದು ಉಲ್ಲೇಖಿಸಲಾಗಿದೆ.ಆದರೆ ಇಲ್ಲಿನ ಅರ್ಚಕರು ಇದರ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…