ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಕುಕ್ಕೆ ಲಿಂಗ ದೇವರು, ಶ್ರೀ ಕಾಲಭೈರವ ದೇವರು, ಶ್ರೀ ಚಂದ್ರಮೌಳೀಶ್ವರ ದೇವರುಗಳಿಗೆ ನಿತ್ಯ ಮೂರು ಹೊತ್ತು ಪೂಜೆ ಮತ್ತು ನೈವೇದ್ಯ ನಡೆಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿತರಕ್ಷಣಾ ವೇದಿಕೆ ವತಿಯಿಂದ ಮುಜರಾಯಿ ಇಲಾಖೆಗೆ, ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಭಕ್ತಾದಿ ಟಿ ಎಸ್ ಶ್ರೀನಾಥ್ ಎಂಬವರು ದೂರು ನೀಡಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕವಾಗಿ 95 ಕೋಟಿಗಿಂತಲೂ ಅಧಿಕ ಆದಾಯ ಬರುತ್ತಿದೆ. ಆದರೆ ಕುಕ್ಕೆ ದೇವಸ್ಥಾನದ ಒಳಾಂಗಣದಲ್ಲಿರುವ ಪರಿವಾರ ದೇವರುಗಳಾದ ಶ್ರೀ ಕುಕ್ಕೆ ಲಿಂಗ ದೇವರು, ಶ್ರೀ ಕಾಲಭೈರವ ದೇವರು ಹಾಗೂ ಹೊರಾಂಗಣದಲ್ಲಿರುವ ಶ್ರೀ ಚಂದ್ರಮೌಳೀಶ್ವರ ದೇವರುಗಳಿಗೆ ಸದ್ಯ ಬೆಳಗಿನ ಪೂಜೆ ಮಾತ್ರಾ ನಡೆಯುತ್ತಿದೆ, ಇದು ಸರಿಯಲ್ಲ, ಮೂರು ಹೊತ್ತಿನ ಪೂಜೆ ನಡೆಯಬೇಕು ಎಂದು ಟಿ ಎಸ್ ಶ್ರೀನಾಥ್ ಒತ್ತಾಯಿಸಿದ್ದಾರೆ. ಎಲ್ಲಾ ಪರಿವಾರ ದೇವರುಗಳಿಗೂ ಮೂರು ಹೊತ್ತು ಪೂಜೆ ನಡೆಯಬೇಕು ಎಂಬುದು ಭಕ್ತರ ಆಶಯವಾಗಿದ್ದು ಒಂದು ಹೊತ್ತಿನ ಪೂಜೆ ಮಾತ್ರವೇ ಮಾಡಿ ಭಕ್ತರ ವಿಶ್ವಾಸ, ಭಾವನೆಗಳಿಗೆ ಧಕ್ಕೆ ತರಬಾರದು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ದಿಟ್ಟಂನಲ್ಲಿ ಕೂಡಾ ಮೂರು ಹೊತ್ತಿನ ಪೂಜೆ ನಡೆಸಬೇಕು ಎಂದು ಉಲ್ಲೇಖಿಸಲಾಗಿದೆ.ಆದರೆ ಇಲ್ಲಿನ ಅರ್ಚಕರು ಇದರ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…