ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಕುಕ್ಕೆ ಲಿಂಗ ದೇವರು, ಶ್ರೀ ಕಾಲಭೈರವ ದೇವರು, ಶ್ರೀ ಚಂದ್ರಮೌಳೀಶ್ವರ ದೇವರುಗಳಿಗೆ ನಿತ್ಯ ಮೂರು ಹೊತ್ತು ಪೂಜೆ ಮತ್ತು ನೈವೇದ್ಯ ನಡೆಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಿತರಕ್ಷಣಾ ವೇದಿಕೆ ವತಿಯಿಂದ ಮುಜರಾಯಿ ಇಲಾಖೆಗೆ, ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಭಕ್ತಾದಿ ಟಿ ಎಸ್ ಶ್ರೀನಾಥ್ ಎಂಬವರು ದೂರು ನೀಡಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕವಾಗಿ 95 ಕೋಟಿಗಿಂತಲೂ ಅಧಿಕ ಆದಾಯ ಬರುತ್ತಿದೆ. ಆದರೆ ಕುಕ್ಕೆ ದೇವಸ್ಥಾನದ ಒಳಾಂಗಣದಲ್ಲಿರುವ ಪರಿವಾರ ದೇವರುಗಳಾದ ಶ್ರೀ ಕುಕ್ಕೆ ಲಿಂಗ ದೇವರು, ಶ್ರೀ ಕಾಲಭೈರವ ದೇವರು ಹಾಗೂ ಹೊರಾಂಗಣದಲ್ಲಿರುವ ಶ್ರೀ ಚಂದ್ರಮೌಳೀಶ್ವರ ದೇವರುಗಳಿಗೆ ಸದ್ಯ ಬೆಳಗಿನ ಪೂಜೆ ಮಾತ್ರಾ ನಡೆಯುತ್ತಿದೆ, ಇದು ಸರಿಯಲ್ಲ, ಮೂರು ಹೊತ್ತಿನ ಪೂಜೆ ನಡೆಯಬೇಕು ಎಂದು ಟಿ ಎಸ್ ಶ್ರೀನಾಥ್ ಒತ್ತಾಯಿಸಿದ್ದಾರೆ. ಎಲ್ಲಾ ಪರಿವಾರ ದೇವರುಗಳಿಗೂ ಮೂರು ಹೊತ್ತು ಪೂಜೆ ನಡೆಯಬೇಕು ಎಂಬುದು ಭಕ್ತರ ಆಶಯವಾಗಿದ್ದು ಒಂದು ಹೊತ್ತಿನ ಪೂಜೆ ಮಾತ್ರವೇ ಮಾಡಿ ಭಕ್ತರ ವಿಶ್ವಾಸ, ಭಾವನೆಗಳಿಗೆ ಧಕ್ಕೆ ತರಬಾರದು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ದಿಟ್ಟಂನಲ್ಲಿ ಕೂಡಾ ಮೂರು ಹೊತ್ತಿನ ಪೂಜೆ ನಡೆಸಬೇಕು ಎಂದು ಉಲ್ಲೇಖಿಸಲಾಗಿದೆ.ಆದರೆ ಇಲ್ಲಿನ ಅರ್ಚಕರು ಇದರ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.
ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಯ ಬೇಡಿಕೆ ಯಾವ ತಿಂಗಳಲ್ಲಿ ಹೆಚ್ಚು ಗೊತ್ತಾ?…
ಕಸ್ಟಮ್ಸ್ ವಶಪಡಿಸಿಕೊಂಡಿದ್ದ 380 ಚೀಲ ಅಡಿಕೆ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಿಸಿದೆ. ಅಡಿಕೆ…
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…