Exclusive - Mirror Hunt

ಕುಕ್ಕೆ ಸುಬ್ರಹ್ಮಣ್ಯ | ನೀರುಬಂಡಿ ಉತ್ಸವದಲ್ಲಿ ತುಂಟಾಟವಾಡಿದ ಆನೆ…! | ನೀರಿಗೆ ಬಿದ್ದ ಸೆಕ್ಯುರಿಟಿ….! | ಮಕ್ಕಳ ಆಟಕ್ಕೂ ಬೇಕಿದೆ ಎಚ್ಚರಿಕೆ… |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಟಿ ಉತ್ಸವದ ಬಳಿಕ ಕೊಪ್ಪರಿಗೆ ಇಳಿದ ನಂತರ ರಾತ್ರಿ ನೀರು ಬಂಡಿ ಉತ್ಸವ ನಡೆಯುತ್ತದೆ. ನೀರಿನಲ್ಲಿ ನಡೆಯುವ ಈ ಉತ್ಸವದ ವೇಳೆ ಈ ಬಾರಿ ಕುಕ್ಕೆ ಸುಬ್ರಹ್ಮಣ್ಯದ ಆನೆ “ತುಂಟಾಟ”ವಾಡಿದೆ. ಮಹಿಳಾ ಸೆಕ್ಯುರಿಟಿ ಒಬ್ಬರನ್ನು ಸೊಂಡಿಲಿನಿಂದ ಎಳೆದು ನೀರಿಗೆ ಹಾಕಿದೆ..!. ವಿಪರೀತ ಜನ ಸೇರುವ “ಮಕ್ಕಳಾಟ” ಉತ್ಸವ ಆಗುತ್ತಿರುವ ಈ ಬಗ್ಗೆ ಎಚ್ಚರಿಕೆ ವಹಿಸಬೇಕಾದ್ದು ಅಗತ್ಯವಿದೆ.

Advertisement

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಉತ್ಸವದ  ಬಳಿಕ ಕೊಪ್ಪರಿಗೆ ಇಳಿದ ನಂತರ ರಾತ್ರಿ ನೀರು ಬಂಡಿ ಉತ್ಸವ ನಡೆಯುತ್ತದೆ. ಕಳೆದ ಕೆಲವು ವರ್ಷಗಳಿಂದ ಈ ಉತ್ಸವಕ್ಕೆ ಮಕ್ಕಳಿಂದ ತೊಡಗಿ ಅನೇಕರು ಈ ಉತ್ಸವಕ್ಕೆ ಆಗಮಿಸಿ ನೀರು ಬಂಡಿ ಉತ್ಸವದಲ್ಲಿ ತೊಡಗಿಸಿಕೊಳ್ಳುತ್ತಾರೆ. ಈಚೆಗೆ ಇದೊಂದು ಸೇವೆಯ ಜೊತೆಗೆ “ಮಕ್ಕಳಾಟ”ದ ಉತ್ಸವವೂ ಆಗುತ್ತಿದೆ. ಆನೆಯೂ ನೀರಿನಲ್ಲಿ ಕುಣಿದು ಕುಪ್ಪಳಿಸುವ ವಿಡಿಯೋ, ಫೋಟೋ ವೈರಲ್‌ ಆಗುವ ಕಾರಣದಿಂದ ಈ ಉತ್ಸವ  ನೋಡಲೆಂದೇ ಜನರು ಬರುತ್ತಾರೆ. ಬಂದವರು ಸಹಜವಾಗಿಯೇ ನೀರಿನ ಮೋಜಿಗೆ ಸೆಳೆತಗೊಂಡು ಮಕ್ಕಳೂ ಈ ಉತ್ಸವದಲ್ಲಿ ತೊಡಗಿಸಿಕೊಳ್ಳುತ್ತಾರೆ. ಆನೆಯ ಮೇಲೆ ನೀರು ಎರಚುವುದಿಂದ ತೊಡಗಿಕೊಂಡು ಬಂದವರ ಮೇಲೆಲ್ಲಾ ನೀರೇ ನೀರು. ಇದು ಉತ್ಸವ ಆದ್ದರಿಂದ ಸಂಭ್ರಮ…

ವಿಡಿಯೋ….

ಆದರೆ ಈ ಬಾರಿ ಆನೆಯು ನೀರಿನಲ್ಲಿ ಆಟವಾಡುವುದರ ಜೊತೆಗೆ ಮಹಿಳಾ ಸೆಕ್ಯುರಿಟಿ ಒಬ್ಬರನ್ನು ಎಳೆದು ಹಾಕಿದೆ..!. ಇದು ಆನೆಯ ತುಂಟಾಟವೇನೋ ಹೌದು. ಸಾವಿರಾರು ಜನರು ಈ ಉತ್ಸವದಲ್ಲಿ ಇರುತ್ತಾರೆ, ಆನೆಯ ತುಂಟಾಟವು ನೂಕುನುಗ್ಗಲಿಗೂ ಕಾರಣವಾಗಬಹುದು, ಇಂತಹ ಸಂದರ್ಭದಲ್ಲಿ ನೀರು ತುಂಬಿರುವ ಹೊರಾಂಗಣದಲ್ಲಿ ಓಡುವುದೂ ಕಷ್ಟ, ಈ ಸಮಯ ನೀರಿಗೆ ಬಿದ್ದರೂ ಅಪಾಯವೇ ಸರಿ. ಪುಣ್ಯ ಸ್ಥಳದಲ್ಲಿ ಇಂತಹ ಅವಘಡಗಳಿಗೆ ಕಾರಣವಾಗುವ ಮೊದಲು ಆಡಳಿತ ಮಂಡಳಿ ಎಚ್ಚರಿಗೆ ವಹಿಸಬೇಕಿದೆ. ಮುಂದಿನ ವರ್ಷದಿಂದ ನೀರಿನ ಆಟಕ್ಕೆ ನಿಯಂತ್ರಣ ಹೇರಬೇಕಿದೆ. ಉತ್ಸವವು ಆಟದ ಸ್ವರೂಪ ಹೋಗುವುದಕ್ಕೆ ಆಡಳಿತ ವ್ಯವಸ್ಥೆ ನಿಯಂತ್ರಣ ಹೇರಬೇಕಿದೆ.

Nirubandi Utsav held after the Champa Shashti Utsav at the Kukke Subrahmanya Temple. In this utsav   Subrahmanya’s elephant ,dragged a women security guard into the water. So caution is needed in such festivals.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ

ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…

7 hours ago

ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…

8 hours ago

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

17 hours ago

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ…

17 hours ago

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…

20 hours ago

ಹೊಸರುಚಿ| ಗುಜ್ಜೆ ರೋಲ್

ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…

20 hours ago