Advertisement
Exclusive - Mirror Hunt

ಕುಕ್ಕೆ ಸುಬ್ರಹ್ಮಣ್ಯ | ನೀರುಬಂಡಿ ಉತ್ಸವದಲ್ಲಿ ತುಂಟಾಟವಾಡಿದ ಆನೆ…! | ನೀರಿಗೆ ಬಿದ್ದ ಸೆಕ್ಯುರಿಟಿ….! | ಮಕ್ಕಳ ಆಟಕ್ಕೂ ಬೇಕಿದೆ ಎಚ್ಚರಿಕೆ… |

Share

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಟಿ ಉತ್ಸವದ ಬಳಿಕ ಕೊಪ್ಪರಿಗೆ ಇಳಿದ ನಂತರ ರಾತ್ರಿ ನೀರು ಬಂಡಿ ಉತ್ಸವ ನಡೆಯುತ್ತದೆ. ನೀರಿನಲ್ಲಿ ನಡೆಯುವ ಈ ಉತ್ಸವದ ವೇಳೆ ಈ ಬಾರಿ ಕುಕ್ಕೆ ಸುಬ್ರಹ್ಮಣ್ಯದ ಆನೆ “ತುಂಟಾಟ”ವಾಡಿದೆ. ಮಹಿಳಾ ಸೆಕ್ಯುರಿಟಿ ಒಬ್ಬರನ್ನು ಸೊಂಡಿಲಿನಿಂದ ಎಳೆದು ನೀರಿಗೆ ಹಾಕಿದೆ..!. ವಿಪರೀತ ಜನ ಸೇರುವ “ಮಕ್ಕಳಾಟ” ಉತ್ಸವ ಆಗುತ್ತಿರುವ ಈ ಬಗ್ಗೆ ಎಚ್ಚರಿಕೆ ವಹಿಸಬೇಕಾದ್ದು ಅಗತ್ಯವಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಉತ್ಸವದ  ಬಳಿಕ ಕೊಪ್ಪರಿಗೆ ಇಳಿದ ನಂತರ ರಾತ್ರಿ ನೀರು ಬಂಡಿ ಉತ್ಸವ ನಡೆಯುತ್ತದೆ. ಕಳೆದ ಕೆಲವು ವರ್ಷಗಳಿಂದ ಈ ಉತ್ಸವಕ್ಕೆ ಮಕ್ಕಳಿಂದ ತೊಡಗಿ ಅನೇಕರು ಈ ಉತ್ಸವಕ್ಕೆ ಆಗಮಿಸಿ ನೀರು ಬಂಡಿ ಉತ್ಸವದಲ್ಲಿ ತೊಡಗಿಸಿಕೊಳ್ಳುತ್ತಾರೆ. ಈಚೆಗೆ ಇದೊಂದು ಸೇವೆಯ ಜೊತೆಗೆ “ಮಕ್ಕಳಾಟ”ದ ಉತ್ಸವವೂ ಆಗುತ್ತಿದೆ. ಆನೆಯೂ ನೀರಿನಲ್ಲಿ ಕುಣಿದು ಕುಪ್ಪಳಿಸುವ ವಿಡಿಯೋ, ಫೋಟೋ ವೈರಲ್‌ ಆಗುವ ಕಾರಣದಿಂದ ಈ ಉತ್ಸವ  ನೋಡಲೆಂದೇ ಜನರು ಬರುತ್ತಾರೆ. ಬಂದವರು ಸಹಜವಾಗಿಯೇ ನೀರಿನ ಮೋಜಿಗೆ ಸೆಳೆತಗೊಂಡು ಮಕ್ಕಳೂ ಈ ಉತ್ಸವದಲ್ಲಿ ತೊಡಗಿಸಿಕೊಳ್ಳುತ್ತಾರೆ. ಆನೆಯ ಮೇಲೆ ನೀರು ಎರಚುವುದಿಂದ ತೊಡಗಿಕೊಂಡು ಬಂದವರ ಮೇಲೆಲ್ಲಾ ನೀರೇ ನೀರು. ಇದು ಉತ್ಸವ ಆದ್ದರಿಂದ ಸಂಭ್ರಮ…

ವಿಡಿಯೋ….

ಆದರೆ ಈ ಬಾರಿ ಆನೆಯು ನೀರಿನಲ್ಲಿ ಆಟವಾಡುವುದರ ಜೊತೆಗೆ ಮಹಿಳಾ ಸೆಕ್ಯುರಿಟಿ ಒಬ್ಬರನ್ನು ಎಳೆದು ಹಾಕಿದೆ..!. ಇದು ಆನೆಯ ತುಂಟಾಟವೇನೋ ಹೌದು. ಸಾವಿರಾರು ಜನರು ಈ ಉತ್ಸವದಲ್ಲಿ ಇರುತ್ತಾರೆ, ಆನೆಯ ತುಂಟಾಟವು ನೂಕುನುಗ್ಗಲಿಗೂ ಕಾರಣವಾಗಬಹುದು, ಇಂತಹ ಸಂದರ್ಭದಲ್ಲಿ ನೀರು ತುಂಬಿರುವ ಹೊರಾಂಗಣದಲ್ಲಿ ಓಡುವುದೂ ಕಷ್ಟ, ಈ ಸಮಯ ನೀರಿಗೆ ಬಿದ್ದರೂ ಅಪಾಯವೇ ಸರಿ. ಪುಣ್ಯ ಸ್ಥಳದಲ್ಲಿ ಇಂತಹ ಅವಘಡಗಳಿಗೆ ಕಾರಣವಾಗುವ ಮೊದಲು ಆಡಳಿತ ಮಂಡಳಿ ಎಚ್ಚರಿಗೆ ವಹಿಸಬೇಕಿದೆ. ಮುಂದಿನ ವರ್ಷದಿಂದ ನೀರಿನ ಆಟಕ್ಕೆ ನಿಯಂತ್ರಣ ಹೇರಬೇಕಿದೆ. ಉತ್ಸವವು ಆಟದ ಸ್ವರೂಪ ಹೋಗುವುದಕ್ಕೆ ಆಡಳಿತ ವ್ಯವಸ್ಥೆ ನಿಯಂತ್ರಣ ಹೇರಬೇಕಿದೆ.

Nirubandi Utsav held after the Champa Shashti Utsav at the Kukke Subrahmanya Temple. In this utsav   Subrahmanya’s elephant ,dragged a women security guard into the water. So caution is needed in such festivals.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

2 hours ago

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

3 hours ago

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

11 hours ago

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…

16 hours ago

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ

ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್‌ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…

16 hours ago

ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…

17 hours ago