#KukkeSubrahmanaya | ಬಸ್ ತಂಗುದಾಣ ಅಭಿವೃದ್ಧಿ ನಮ್ಮ ವ್ಯಾಪ್ತಿಯಲ್ಲಿ ಇಲ್ಲ | ಕುಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟನೆ

July 29, 2023
8:16 PM
ಕುಕ್ಕೆ ಸುಬ್ರಹ್ಮಣ್ಯದ ಕೆ.ಎಸ್. ಆರ್.ಟಿ. ಬಸ್ ತಂಗುದಾಣಕ್ಕೆ ಹೋಗುವ ರಸ್ತೆ ಅವ್ಯವಸ್ಥೆ ಬಗ್ಗೆ ದೇವಸ್ಥಾನ ಜವಾಬ್ದಾರಿ ಅಲ್ಲ, ಅದು ಕೆಎಸ್‌ಆರ್‌ಟಿಸಿ ಜವಾಬ್ದಾರಿ ಆಗಿದೆ ಎಂದು ದೇವಸ್ಥಾನದ ಆಡಳಿತವು ಸ್ಪಷ್ಟಪಡಿಸಿದೆ.

ಕುಕ್ಕೆ ಸುಬ್ರಹ್ಮಣ್ಯದ ಕೆ.ಎಸ್.ಆರ್.ಟಿ. ಬಸ್ ತಂಗುದಾಣ ಹಾಗೂ ತಂಗುದಾಣ ಕ್ಕೆ ಬರುವ ರಸ್ತೆ ಅಭಿವೃದ್ಧಿ ನಮ್ಮ ವ್ಯಾಪ್ತಿಯಲ್ಲಿ ಇಲ್ಲ, ಅದು ಕೆ.ಎಸ್.ಆರ್.ಟಿ.ಯ ಆಸ್ತಿ ಎಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟ ಪಡಿಸಿದೆ.

ಜು.28 ರಂದು ಸುಬ್ರಹ್ಮಣ್ಯ ಕೆ.ಎಸ್.ಆರ್.ಟಿ.ಸಿ ಬಸ್ ತಂಗುದಾಣದ ರಸ್ತೆ ದುರವ್ಯವಸ್ಥೆ ಬಗ್ಗೆ ಮಾಡಿರುವ ವರದಿಗೆ ಪ್ರತಿಕ್ರಿಯಿಸಿರುವ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಸುಮಾರು 45 ವರ್ಷಗಳ ಹಿಂದೆ ದೇವಾಲಯದ ವತಿಯಿಂದ ಕೆ.ಎಸ್.ಆರ್.ಟಿ.ಸಿ.ಗೆ ಬಸ್ ನಿಲ್ದಾಣದ ಅವಶ್ಯಕತೆಗಾಗಿ 2 ಎಕ್ರೆ ಜಾಗವನ್ನು ಉಚಿತವಾಗಿ ದಾನ ನೀಡಿತ್ತು. ದೇವಾಲಯ ವತಿಯಿಂದ ಮಾಸ್ಟರ್ ಪ್ಲಾನ್ ಕೆಲಸಕ್ಕಾಗುವಾಗ ದೇವಾಲಯ ವತಿಯಿಂದ 25 ಸೆಂಟ್ಸ್ ಜಾಗವನ್ನು ಮತ್ತೆ ದೇವಾಲಯದ ರಸ್ತೆಗಾಗಿ ಪಡೆದುಕೊಳ್ಳುವಾಗ 84 ಲಕ್ಷ ರೂಪಾಯಿಯನ್ನು ಕೂಡ ಕೆ.ಎಸ್.ಆರ್.ಟಿ.ಗೆ ಪಾವತಿಯೂ ಮಾಡಿತ್ತು. ಆದರೆ ಆ ಜಾಗವನ್ನು ಪೂರ್ಣವಾಗಿ ವಶಕ್ಕೆ ಪಡೆದಿಲ್ಲ 84 ಲಕ್ಷ ಪಾವತಿ ಮಾತ್ರ ಆಗಿದೆ ಆ ಹಣದಲ್ಲಿ ಅವರ ಈ ರಸ್ತೆಯನ್ನು ಅಭಿವೃದ್ಧಿ ಮಾಡಬಹುದಿತ್ತು ಆದರೆ ಅವರು ಮಾಡದೆ ಆ ಹಣವನ್ನು ಬೇರೆಲ್ಲಿಗೋ ಖರ್ಚು ಮಾಡಿದ್ದಾರೆ ಇವಾಗ ಅವರ ಒಳಾಂಗಣದ ರಸ್ತೆಯನ್ನ ದೇವಸ್ಥಾನದ ತಲೆಗೆ ಕಟ್ಟುವುದು ಎಷ್ಟು ಸರಿ.

ಕೆ.ಎಸ್. ಆರ್.ಟಿ. ಬಸ್ ತಂಗುದಾಣಕ್ಕೆ ಹೋಗುವ ರಸ್ತೆ ಅವ್ಯವಸ್ಥೆ ಬಗ್ಗೆ ದೇವಸ್ಥಾನ ಜವಾಬ್ದಾರಿ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

#KukkeSubrahmanya | ಪ್ರಸಿದ್ಧ ಪುಣ್ಯ ಕ್ಷೇತ್ರ | ಬಸ್‌ ನಿಲ್ದಾಣದ ಅವಸ್ಥೆ…! | ರಸ್ತೆ ಅಭಿವೃದ್ಧಿಗೆ ಯಾವುದಾದರೂ “ಮಾಸ್ಟರ್‌ ಪ್ಲಾನ್”‌ ಮಾಡಿ…!

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ
July 5, 2026
11:09 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ
July 5, 2026
10:43 AM
by: ದ ರೂರಲ್ ಮಿರರ್.ಕಾಂ
ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ
July 4, 2026
10:47 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?
July 4, 2026
9:45 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror