Advertisement
ಸುದ್ದಿಗಳು

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು

Share

ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ ತಮ್ಮ ಊರಲ್ಲೇ ಆದಾಯವನ್ನು ಗಳಿಸಲು ರಾಜ್ಯ ಸರ್ಕಾರವೂ 2024-25 ಬಜೆಟ್ ನಲ್ಲಿ ಘೋಷಿಸಿದ ಕುಕ್ಕುಟ ಸಂಜೀವಿನಿ ಅಂದರೆ ಸರ್ಕಾರದಿಂದ ಉಚಿತ ಕೋಳಿ ಮರಿಗಳು ಇತ್ಯಾದಿಯನ್ನು ನೀಡುವುದಾಗಿದೆ.

2025 ರಲ್ಲಿ ಈ ಯೋಜನೆಯು ಹೆಚ್ಚಿನ ಜಿಲ್ಲೆಗಳಲ್ಲಿ ವಿಸ್ತರಣೆಯನ್ನು ಕಂಡಿದ್ದು, ಸಾವಿರಾರು ಮಹಿಳೆಯರಿಗೆ ಲಾಭ ತಂದುಕೊಟ್ಟಿದೆ. ಇದೀಗ ಈ ಯೋಜನೆಯನ್ನು ಇನ್ನು ಉಳಿದ ಮಹಿಳೆಯರು ಯಾವ ರೀತಿ ಪಡೆದುಕೊಳ್ಳಬಹುದು ಎಂಬ ಸಂಪೂರ್ಣ ವಿವರಣೆ ಇಲ್ಲಿದೆ.

ಪಶುಸಂಗೋಪನಾ ಇಲಾಖೆಯಿಂದ 6 ವಾರಗಳ ಹಳೆಯ ಉತ್ತಮ ನಾಟಿ ಕೋಳಿಮರಿಗಳನ್ನು ಉಚಿತವಾಗಿ ಅಥವಾ ಕಡಿಮೆ ದರದಲ್ಲಿ ವಿತರಿಸಲಾಗುತ್ತದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಶೆಡ್ ಕಟ್ಟುವ ಖರ್ಚಿಗೆ ಸಹಾಯ. ಹಾಗೂ 500 ಕೋಳಿಗಳ ಸಾಕಾಣಿಕೆಗೆ ರೂ4.5ಲಕ್ಷದವರೆಗೆ ಮತ್ತು 1000ಕೋಳಿಗಳಿಗೆ ರೂ7.5 ಲಕ್ಷದವರೆಗೆ ನೀಡಲಾಗುತ್ತದೆ. ಇನ್ನು ಪ್ರೋತ್ಸಾಹಧನವಾಗಿ ಆರ್ಥಿಕವಾಗಿ ಬೆಂಬಲ ನೀಡಲಾಗುತ್ತದೆ. ಹಾಗೂ ಉತ್ಪಾದಿತ ಮೊಟ್ಟೆಗಳನ್ನು ಸರ್ಕಾರಿ ಶಾಲೆಗಳ ಮಧ್ಯಾಹ್ನದ ಭೋಜನ ಮತ್ತು ಅಂಗನವಾಡಿ ಕೇಂದ್ರಗಳಿಗೆ ಮಾರುಕಟ್ಟೆಯ ಬೆಲೆಯ ನೀಡಬಹುದು.

ಈ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ:

  • ಆನ್ ಲೈನ್ ಮೂಲಕ ಅರ್ಜಿ ಇರುವುದಿಲ್ಲ ಆದ್ದರಿಂದ ಆಯಾ ತಾಲೂಕು ಪಶು ಸಂಗೋಪನಾ ಇಲಾಖೆಗೆಗೆ ಭೇಟಿ ನೀಡಿ. ಪಶುವೈದೈ ಅಧಿಕಾರಿಯಿಂದ ಕುಕ್ಕುಟ ಸಂಜೀವಿನಿ ಅರ್ಜಿ ಫಾರ್ಮ್ ಪಡೆಯಬಹುದು.
  • ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಸಂರ್ಪಕಿಸಿ  ಶೆಡ್ ನಿರ್ಮಾಣಕ್ಕೆ ಅರ್ಜಿ ಸಲ್ಲಿಸುವುದು.
  • ಅಗತ್ಯ ದಾಖಲೆಗಳು:
    • ಆಧಾರ್ ಕಾರ್ಡ್
    • ಪಾಸ್ ಪೋರ್ಟ್ ಫೋಟೋ
    • ಬ್ಯಾಂಕ್ ಪಾಸ್ ಬುಕ್
    • SHG ನೋಂದಣಿ ಮತ್ತು ಜಮೀನು ದಾಖಲೆ ಪ್ರತಿ
    • ಮೊಬೈಲ್ ನಂಬರ್
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

3 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

8 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

9 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

11 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

12 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 day ago