ಶೀಘ್ರದಲ್ಲೇ ಪದವಿ ವಿದ್ಯಾರ್ಥಿಗಳಿಗೆ ಪರಿಷ್ಕೃತ ವಾರ್ಷಿಕ ವೇಳಾಪಟ್ಟಿ-ಮಂಗಳೂರು ವಿ.ವಿ.ಕುಲಸಚಿವ ಕೆ. ರಾಜುಮೊಗವೀರ

December 5, 2020
1:02 PM

ಮಂಗಳೂರು ವಿಶ್ವವಿದ್ಯಾನಿಲಯ ಶೀಘ್ರದಲ್ಲೇ ಯುಜಿಸಿ ನಿಯಮಗಳನ್ನು ಆಧರಿಸಿ ನವೀಕೃತ ವಾರ್ಷಿಕ ವೇಳಾಪಟ್ಟಿ ಪ್ರಕಟಿಸಲಿದ್ದು ವಿದ್ಯಾರ್ಥಿಗಳು, ಪೋಷಕರು ಮತ್ತು ಪ್ರಾಧ್ಯಾಪಕರು ಆತಂಕಿತರಾಗಬೇಕಿಲ್ಲ ಎಂದು ಕುಲಸಚಿವ ಕೆ. ರಾಜುಮೊಗವೀರ (ಕೆ.ಎ.ಎಸ್) ಹೇಳಿದ್ದಾರೆ.

ಕುಲಸಚಿವರಾಗಿ ಅಧಿಕಾರವಹಿಸಿಕೊಂಡ ಬಳಿಕ ನಗರದ ವಿಶ್ವವಿದ್ಯಾನಿಲಯ ಕಾಲೇಜಿಗೆ ಬುಧವಾರ ಮೊದಲ ಭೇಟಿ ನೀಡಿದ ಅವರು, ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದರು.

Advertisement

ಪದವಿಯ ಎಲ್ಲಾ ವಿದ್ಯಾರ್ಥಿಗಳಿಗೆ ತರಗತಿ ಪಾಠ ಆರಂಭಿಸುವ ಕುರಿತು ಪ್ರಯತ್ನಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳ ಸಭೆಯನ್ನೂ ನಡೆಸಲಾಗಿದೆ. ವಿದ್ಯಾರ್ಥಿಗಳಿಗೂ ಕಾಲೇಜಿಗೆ ಬರುವ ಆತ್ಮವಿಶ್ವಾಸ ಮೂಡುವುದು ಮುಖ್ಯ, ಎಂದರು. ಇದೇ ವೇಳೆ ಅವರು ಅತಿಥಿ ಉಪನ್ಯಾಸಕರುಗಳ ನೇಮಕಾತಿ ಪಟ್ಟಿಯನ್ನು ಇದೇ ವಾರಾಂತ್ಯಕ್ಕೆ ಬಿಡುಗಡೆ ಮಾಡುವ ಭರವಸೆ ನೀಡಿದರು.

ಭವ್ಯ ಇತಿಹಾಸವಿರುವ ವಿವಿ ಕಾಲೇಜಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿಕೊಂಡ ಅವರು, ಮಂಗಳೂರು ವಿಶ್ವವಿದ್ಯಾನಿಲಯ ಎಲ್ಲಾ ಅಗತ್ಯ ನೆರವು ನೀಡಲಿದೆ. ಆದರೆ ಕಾಲೇಜುಗಳು ತಮಗಿರುವ ಸ್ವಾತಂತ್ರ್ಯವನ್ನು ಬಳಸಿಕೊಳ್ಳುವುದು ಅಗತ್ಯ ಎಂದರು. ಕಾಲೇಜಿನ ಸ್ವಚ್ಛತೆ, ಪೀಠೋಪಕರಣಗಳ ನಿರ್ವಹಣೆ, ಪ್ರಥಮ ಚಿಕಿತ್ಸೆ ವ್ಯವಸ್ಥೆ ಮೊದಲಾದ ವಿಷಯಗಳ ಕುರಿತು ಗಮನಹರಿಸುವಂತೆ ಸಲಹೆ ನೀಡಿದರು.

Advertisement

ಕಾಲೇಜಿನ ಪ್ರಾಂಶುಪಾಲ ಡಾ. ಹರೀಶ್ ಎ, ವಿಶ್ವವಿದ್ಯಾನಿಲಯದ ಎಂಜಿನಿಯರಿಂಗ್ ವಿಭಾಗದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ
ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ
June 27, 2026
9:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror