Advertisement
ಸುದ್ದಿಗಳು

ಶೀಘ್ರದಲ್ಲೇ ಪದವಿ ವಿದ್ಯಾರ್ಥಿಗಳಿಗೆ ಪರಿಷ್ಕೃತ ವಾರ್ಷಿಕ ವೇಳಾಪಟ್ಟಿ-ಮಂಗಳೂರು ವಿ.ವಿ.ಕುಲಸಚಿವ ಕೆ. ರಾಜುಮೊಗವೀರ

Share

ಮಂಗಳೂರು ವಿಶ್ವವಿದ್ಯಾನಿಲಯ ಶೀಘ್ರದಲ್ಲೇ ಯುಜಿಸಿ ನಿಯಮಗಳನ್ನು ಆಧರಿಸಿ ನವೀಕೃತ ವಾರ್ಷಿಕ ವೇಳಾಪಟ್ಟಿ ಪ್ರಕಟಿಸಲಿದ್ದು ವಿದ್ಯಾರ್ಥಿಗಳು, ಪೋಷಕರು ಮತ್ತು ಪ್ರಾಧ್ಯಾಪಕರು ಆತಂಕಿತರಾಗಬೇಕಿಲ್ಲ ಎಂದು ಕುಲಸಚಿವ ಕೆ. ರಾಜುಮೊಗವೀರ (ಕೆ.ಎ.ಎಸ್) ಹೇಳಿದ್ದಾರೆ.

ಕುಲಸಚಿವರಾಗಿ ಅಧಿಕಾರವಹಿಸಿಕೊಂಡ ಬಳಿಕ ನಗರದ ವಿಶ್ವವಿದ್ಯಾನಿಲಯ ಕಾಲೇಜಿಗೆ ಬುಧವಾರ ಮೊದಲ ಭೇಟಿ ನೀಡಿದ ಅವರು, ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದರು.

ಪದವಿಯ ಎಲ್ಲಾ ವಿದ್ಯಾರ್ಥಿಗಳಿಗೆ ತರಗತಿ ಪಾಠ ಆರಂಭಿಸುವ ಕುರಿತು ಪ್ರಯತ್ನಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳ ಸಭೆಯನ್ನೂ ನಡೆಸಲಾಗಿದೆ. ವಿದ್ಯಾರ್ಥಿಗಳಿಗೂ ಕಾಲೇಜಿಗೆ ಬರುವ ಆತ್ಮವಿಶ್ವಾಸ ಮೂಡುವುದು ಮುಖ್ಯ, ಎಂದರು. ಇದೇ ವೇಳೆ ಅವರು ಅತಿಥಿ ಉಪನ್ಯಾಸಕರುಗಳ ನೇಮಕಾತಿ ಪಟ್ಟಿಯನ್ನು ಇದೇ ವಾರಾಂತ್ಯಕ್ಕೆ ಬಿಡುಗಡೆ ಮಾಡುವ ಭರವಸೆ ನೀಡಿದರು.

ಭವ್ಯ ಇತಿಹಾಸವಿರುವ ವಿವಿ ಕಾಲೇಜಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿಕೊಂಡ ಅವರು, ಮಂಗಳೂರು ವಿಶ್ವವಿದ್ಯಾನಿಲಯ ಎಲ್ಲಾ ಅಗತ್ಯ ನೆರವು ನೀಡಲಿದೆ. ಆದರೆ ಕಾಲೇಜುಗಳು ತಮಗಿರುವ ಸ್ವಾತಂತ್ರ್ಯವನ್ನು ಬಳಸಿಕೊಳ್ಳುವುದು ಅಗತ್ಯ ಎಂದರು. ಕಾಲೇಜಿನ ಸ್ವಚ್ಛತೆ, ಪೀಠೋಪಕರಣಗಳ ನಿರ್ವಹಣೆ, ಪ್ರಥಮ ಚಿಕಿತ್ಸೆ ವ್ಯವಸ್ಥೆ ಮೊದಲಾದ ವಿಷಯಗಳ ಕುರಿತು ಗಮನಹರಿಸುವಂತೆ ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಹರೀಶ್ ಎ, ವಿಶ್ವವಿದ್ಯಾನಿಲಯದ ಎಂಜಿನಿಯರಿಂಗ್ ವಿಭಾಗದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

6 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

12 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

12 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

12 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

12 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

12 hours ago