Advertisement
ಸುದ್ದಿಗಳು

ಶೀಘ್ರದಲ್ಲೇ ಪದವಿ ವಿದ್ಯಾರ್ಥಿಗಳಿಗೆ ಪರಿಷ್ಕೃತ ವಾರ್ಷಿಕ ವೇಳಾಪಟ್ಟಿ-ಮಂಗಳೂರು ವಿ.ವಿ.ಕುಲಸಚಿವ ಕೆ. ರಾಜುಮೊಗವೀರ

Share

ಮಂಗಳೂರು ವಿಶ್ವವಿದ್ಯಾನಿಲಯ ಶೀಘ್ರದಲ್ಲೇ ಯುಜಿಸಿ ನಿಯಮಗಳನ್ನು ಆಧರಿಸಿ ನವೀಕೃತ ವಾರ್ಷಿಕ ವೇಳಾಪಟ್ಟಿ ಪ್ರಕಟಿಸಲಿದ್ದು ವಿದ್ಯಾರ್ಥಿಗಳು, ಪೋಷಕರು ಮತ್ತು ಪ್ರಾಧ್ಯಾಪಕರು ಆತಂಕಿತರಾಗಬೇಕಿಲ್ಲ ಎಂದು ಕುಲಸಚಿವ ಕೆ. ರಾಜುಮೊಗವೀರ (ಕೆ.ಎ.ಎಸ್) ಹೇಳಿದ್ದಾರೆ.

Advertisement
Advertisement

ಕುಲಸಚಿವರಾಗಿ ಅಧಿಕಾರವಹಿಸಿಕೊಂಡ ಬಳಿಕ ನಗರದ ವಿಶ್ವವಿದ್ಯಾನಿಲಯ ಕಾಲೇಜಿಗೆ ಬುಧವಾರ ಮೊದಲ ಭೇಟಿ ನೀಡಿದ ಅವರು, ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದರು.

Advertisement

ಪದವಿಯ ಎಲ್ಲಾ ವಿದ್ಯಾರ್ಥಿಗಳಿಗೆ ತರಗತಿ ಪಾಠ ಆರಂಭಿಸುವ ಕುರಿತು ಪ್ರಯತ್ನಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳ ಸಭೆಯನ್ನೂ ನಡೆಸಲಾಗಿದೆ. ವಿದ್ಯಾರ್ಥಿಗಳಿಗೂ ಕಾಲೇಜಿಗೆ ಬರುವ ಆತ್ಮವಿಶ್ವಾಸ ಮೂಡುವುದು ಮುಖ್ಯ, ಎಂದರು. ಇದೇ ವೇಳೆ ಅವರು ಅತಿಥಿ ಉಪನ್ಯಾಸಕರುಗಳ ನೇಮಕಾತಿ ಪಟ್ಟಿಯನ್ನು ಇದೇ ವಾರಾಂತ್ಯಕ್ಕೆ ಬಿಡುಗಡೆ ಮಾಡುವ ಭರವಸೆ ನೀಡಿದರು.

ಭವ್ಯ ಇತಿಹಾಸವಿರುವ ವಿವಿ ಕಾಲೇಜಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿಕೊಂಡ ಅವರು, ಮಂಗಳೂರು ವಿಶ್ವವಿದ್ಯಾನಿಲಯ ಎಲ್ಲಾ ಅಗತ್ಯ ನೆರವು ನೀಡಲಿದೆ. ಆದರೆ ಕಾಲೇಜುಗಳು ತಮಗಿರುವ ಸ್ವಾತಂತ್ರ್ಯವನ್ನು ಬಳಸಿಕೊಳ್ಳುವುದು ಅಗತ್ಯ ಎಂದರು. ಕಾಲೇಜಿನ ಸ್ವಚ್ಛತೆ, ಪೀಠೋಪಕರಣಗಳ ನಿರ್ವಹಣೆ, ಪ್ರಥಮ ಚಿಕಿತ್ಸೆ ವ್ಯವಸ್ಥೆ ಮೊದಲಾದ ವಿಷಯಗಳ ಕುರಿತು ಗಮನಹರಿಸುವಂತೆ ಸಲಹೆ ನೀಡಿದರು.

Advertisement

ಕಾಲೇಜಿನ ಪ್ರಾಂಶುಪಾಲ ಡಾ. ಹರೀಶ್ ಎ, ವಿಶ್ವವಿದ್ಯಾನಿಲಯದ ಎಂಜಿನಿಯರಿಂಗ್ ವಿಭಾಗದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

2 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

2 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

2 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

2 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

2 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

3 hours ago