Advertisement
ಸುದ್ದಿಗಳು

ಶೀಘ್ರದಲ್ಲೇ ಪದವಿ ವಿದ್ಯಾರ್ಥಿಗಳಿಗೆ ಪರಿಷ್ಕೃತ ವಾರ್ಷಿಕ ವೇಳಾಪಟ್ಟಿ-ಮಂಗಳೂರು ವಿ.ವಿ.ಕುಲಸಚಿವ ಕೆ. ರಾಜುಮೊಗವೀರ

Share

ಮಂಗಳೂರು ವಿಶ್ವವಿದ್ಯಾನಿಲಯ ಶೀಘ್ರದಲ್ಲೇ ಯುಜಿಸಿ ನಿಯಮಗಳನ್ನು ಆಧರಿಸಿ ನವೀಕೃತ ವಾರ್ಷಿಕ ವೇಳಾಪಟ್ಟಿ ಪ್ರಕಟಿಸಲಿದ್ದು ವಿದ್ಯಾರ್ಥಿಗಳು, ಪೋಷಕರು ಮತ್ತು ಪ್ರಾಧ್ಯಾಪಕರು ಆತಂಕಿತರಾಗಬೇಕಿಲ್ಲ ಎಂದು ಕುಲಸಚಿವ ಕೆ. ರಾಜುಮೊಗವೀರ (ಕೆ.ಎ.ಎಸ್) ಹೇಳಿದ್ದಾರೆ.

ಕುಲಸಚಿವರಾಗಿ ಅಧಿಕಾರವಹಿಸಿಕೊಂಡ ಬಳಿಕ ನಗರದ ವಿಶ್ವವಿದ್ಯಾನಿಲಯ ಕಾಲೇಜಿಗೆ ಬುಧವಾರ ಮೊದಲ ಭೇಟಿ ನೀಡಿದ ಅವರು, ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದರು.

ಪದವಿಯ ಎಲ್ಲಾ ವಿದ್ಯಾರ್ಥಿಗಳಿಗೆ ತರಗತಿ ಪಾಠ ಆರಂಭಿಸುವ ಕುರಿತು ಪ್ರಯತ್ನಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳ ಸಭೆಯನ್ನೂ ನಡೆಸಲಾಗಿದೆ. ವಿದ್ಯಾರ್ಥಿಗಳಿಗೂ ಕಾಲೇಜಿಗೆ ಬರುವ ಆತ್ಮವಿಶ್ವಾಸ ಮೂಡುವುದು ಮುಖ್ಯ, ಎಂದರು. ಇದೇ ವೇಳೆ ಅವರು ಅತಿಥಿ ಉಪನ್ಯಾಸಕರುಗಳ ನೇಮಕಾತಿ ಪಟ್ಟಿಯನ್ನು ಇದೇ ವಾರಾಂತ್ಯಕ್ಕೆ ಬಿಡುಗಡೆ ಮಾಡುವ ಭರವಸೆ ನೀಡಿದರು.

ಭವ್ಯ ಇತಿಹಾಸವಿರುವ ವಿವಿ ಕಾಲೇಜಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿಕೊಂಡ ಅವರು, ಮಂಗಳೂರು ವಿಶ್ವವಿದ್ಯಾನಿಲಯ ಎಲ್ಲಾ ಅಗತ್ಯ ನೆರವು ನೀಡಲಿದೆ. ಆದರೆ ಕಾಲೇಜುಗಳು ತಮಗಿರುವ ಸ್ವಾತಂತ್ರ್ಯವನ್ನು ಬಳಸಿಕೊಳ್ಳುವುದು ಅಗತ್ಯ ಎಂದರು. ಕಾಲೇಜಿನ ಸ್ವಚ್ಛತೆ, ಪೀಠೋಪಕರಣಗಳ ನಿರ್ವಹಣೆ, ಪ್ರಥಮ ಚಿಕಿತ್ಸೆ ವ್ಯವಸ್ಥೆ ಮೊದಲಾದ ವಿಷಯಗಳ ಕುರಿತು ಗಮನಹರಿಸುವಂತೆ ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಹರೀಶ್ ಎ, ವಿಶ್ವವಿದ್ಯಾನಿಲಯದ ಎಂಜಿನಿಯರಿಂಗ್ ವಿಭಾಗದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

8 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 day ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago