MIRROR FOCUS

ಕುಮಾರಯಾತ್ರೆಗೆ ಸಜ್ಜಾಗುತ್ತಿರುವ ಭಕ್ತರು | 10 ಕಿಮೀ ಬೆಟ್ಟ ಕಾಲ್ನಡಿಗೆಯಲ್ಲಿ ಏರಲು ಸಿದ್ಧತೆ | ಕುಕ್ಕೆ-ಕುಮಾರಪರ್ವತಕ್ಕೆ ಪೌರಾಣಿಕ ಸಂಬಂಧ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕುಮಾರಪರ್ವತದ ತುತ್ತ ತುದಿಯಲ್ಲಿರುವ ಕುಮಾರಪಾದ ಮತ್ತು  ವಾಸುಕಿಗೆ ಕುಕ್ಕೆಸುಬ್ರಹ್ಮಣ್ಯ ದೇವಳದ ವತಿಯಿಂದ ಜ.2 ರಂದು ಪೂಜೆ  ನಡೆಯಲಿದೆ. ಇದಕ್ಕಾಗಿ ಸಿದ್ಧತೆ ನಡೆಯುತ್ತಿದೆ. ಜ.1 ರಂದು ಕುಮಾರ ಯಾತ್ರೆ ಆರಂಭವಾಗಲಿದೆ.

Advertisement

ಸಮುದ್ರ ಮಟ್ಟದಿಂದ ಸುಮಾರು 4000 ಅಡಿ ಎತ್ತರವಿರುವ  ಕುಮಾರಪರ್ವತದ ತುತ್ತ ತುದಿಗೆ 10 ಕಿ.ಮೀ. ದೂರ ಕಡಿದಾದ ಬೆಟ್ಟದ ಹಾದಿಯಲ್ಲಿ ಪಾದುಕೆಯಿಲ್ಲದೆ ಕಾಲ್ನಡಿಗೆಯಲ್ಲಿ ಅರ್ಚಕರು ಮತ್ತು ಭಕ್ತರು ತೆರಳಿ ಪೂಜೆ ನಡೆಯುವ ವಿಶೇಷ ಸಂಪ್ರದಾಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯಲಿದೆ.ಜ.1 ರಂದು ಯಾತ್ರೆ ಆರಂಭವಾಗಿ ಜ.2 ರಂದು ಕುಮಾರ ಪರ್ವತದಲ್ಲಿ ಪೂಜೆ ನಡೆಯಲಿದೆ.

ಕುಕ್ಕೆ-ಕುಮಾರಪರ್ವತಕ್ಕೆ ಪವಿತ್ರ ಸಂಬಂಧ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಕುಮಾರಪರ್ವತಕ್ಕೆ ಪವಿತ್ರ ಸಂಬಂಧವಿದೆ. ಕುಮಾರಪರ್ವತದ ತುತ್ತ ತುದಿಯಲ್ಲಿನ ಶಿಲೆಯಲ್ಲಿ ಕುಮಾರಸ್ವಾಮಿಯ ಪಾದಗಳ ಪಡಿಯಚ್ಚು ಇದೆ. ಇದರ ಪಕ್ಕದಲ್ಲಿ ವಾಸುಕಿ ನೆಲೆಯಾಗಿದ್ದಾರೆ. ಜಾತ್ರೋತ್ಸವ ಕೊನೆಯಾದ 10 ದಿನಗಳ ಒಳಗೆ ಕುಮಾರಪರ್ವತಕ್ಕೆ ದೇವಳದ  ಅರ್ಚಕರೇ ತೆರಳಿ ಕುಮಾರ ಪಾದಗಳಿಗೆ ಮತ್ತು ವಾಸುಕಿಗೆ ಅಭಿಷೇಕ ನೆರವೇರಿಸಿ ಪೂಜೆ ಮಾಡುವುದು ಸಂಪ್ರದಾಯ.

ಕುಮಾರಪರ್ವತದಲ್ಲಿ ಕುಮಾರಸ್ವಾಮಿಯು ತಾರಕಾದಿ ರಾಕ್ಷಸರನ್ನು ಕೊಂದು ಕತ್ತಿಯ ಅಲಗನ್ನು ಕುಮಾರಪರ್ವತದಲ್ಲಿ ಹುಟ್ಟುವ ಕುಮಾರಧಾರೆಯಲ್ಲಿ ತೊಳೆದ. ಬಳಿಕ ಷಣ್ಮುಖನು ವಾಸುಕಿಯೊಂದಿಗೆ ಕುಕ್ಕೆ ಕ್ಷೇತ್ರದಲ್ಲಿ ನೆಲೆಯಾದ ಎಂದು ಕ್ಷೇತ್ರ ಪುರಾಣ ಉಲ್ಲೇಖಿಸಿದೆ. ಪುರಾಣದಲ್ಲಿ ಉಲ್ಲೇಖಗೊಂಡಿರುವ ಪ್ರಕಾರ ಸುಬ್ರಹ್ಮಣ್ಯ ದೇವರು ತಾರಕಾಸುರನ ವಧೆಯನ್ನು ಇದೇ ಪರ್ವತ ಶ್ರೇಣಿಯಲ್ಲಿ ಮಾಡಿ ಕುಮಾರ ಪರ್ವತದಲ್ಲಿ ತ್ರಿಮೂರ್ತಿಗಳು ದೇವತೆಗಳ ಸಮ್ಮುಖದಲ್ಲಿ ಮಾರ್ಗಶಿರ ಶುದ್ಧ ಷಷ್ಠಿಯಂದು ದೇವತೆಗಳ ರಾಜ ದೇವೇಂದ್ರನ ಮಗಳಾದ ದೇವರಮನೆಯನ್ನು ಸುಬ್ರಹ್ಮಣ್ಯ ದೇವರಿಗೆ ವಿವಾಹ ಮಾಡಿಸಿ ಪಟ್ಟಾಭಿಷೇಕ ಮಾಡಿದರು. ಈ ಅಭಿಷೇಕದ ನೀರು ಮುಂದೆ ಹರಿದು ಕುಮಾರಧಾರ ನದಿಯಾಯಿತು ಎಂದು ಪುರಾಣವು ಹೇಳುತ್ತದೆ.ಕುಮಾರಪರ್ವತದ ಶಿಖರದಲ್ಲಿ ಈಗಲೂ ಸುಬ್ರಹ್ಮಣ್ಯ ದೇವರ ಪಾದ ಚಿಹ್ನೆಯ ಗುರುತು ಇದೆ. ಇದನ್ನು ಕುಮಾರ ಪಾದ ಕರೆಯಲಾಗುತ್ತದೆ.  ಕುಮಾರ ಪರ್ವತದಲ್ಲಿ ದೊರೆಯುವ ಕುಮಾರಲಿಂಗಕ್ಕೂ ಹೆಚ್ಚಿನ ಮಹತ್ವ ಇದೆ.

Advertisement

ಪೌರಾಣಿಕ ಹಿನ್ನೆಲೆಯ ಕಾರಣದಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಿಂದ ಕುಮಾರ ಪರ್ವತಕ್ಕೆ ಅರ್ಚಕರು ತೆರಳಿ ಅಲ್ಲಿ ಪೂಜೆ ನೆರವೇರಿಸುವ ಕಾರ್ಯ ತಲೆತಲಾಂತರದಿಂದ ನಡೆಯುತ್ತಿದೆ. ಕುಮಾರ ಪರ್ವತಕ್ಕೆ ತೆರಳುವ ಈ ವಿಶೇಷ ಸಂಪ್ರದಾಯವನ್ನು ವಿಜೃಂಭಣೆಯಿಂದ ಆಚರಿಸಲು ಈಚೆಗೆ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ  ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕುಮಾರ ಪರ್ವತ ಯಾತ್ರೆಗೆ ತೆರಳಿ ಪೂಜಾ ವಿಧಿವಿಧಾನ ವೀಕ್ಷಿಸಲು ಶ್ರೀ ದೇವಳದಿಂದ ವ್ಯವಸ್ಥೆ ಮಾಡಲಾಗುತ್ತಿದೆ.

ಸುಬ್ರಹ್ಮಣ್ಯದಿಂದ ಕಾಲ್ನಡಿಗೆಯಲ್ಲಿ ಚಾರಣ ಮಾಡಲು ಇಚ್ಛಿಸುವವರು ಜ.1 ರಂದು ಹೊರಟು ಗಿರಿಗದ್ದೆಯಾಗಿ ಹೋದರೆ, ಗಿರಿಗದ್ದೆಯಲ್ಲಿ ಊಟದ ವ್ಯವಸ್ಥೆ ಮಾಡಲಾಗುತ್ತದೆ. ದೇವಸ್ಥಾನದ ಅರ್ಚಕರು ಸೇರಿ ಭಕ್ತಾದಿಗಳ ಇನ್ನೊಂದು ತಂಡ ಕುಮಾರ ಪಾದ ಪೂಜೆಯ ದಿನದಂದು ವಾಹನ ವ್ಯವಸ್ಥೆಯ ಮೂಲಕ ಬಿಸಿಲೆಯಾಗಿ ಹೆಗಡೆ ಮನೆಗೆ ಹೋಗಿ ಅಲ್ಲಿಂದ ಕುಮಾರ ಪರ್ವತಕ್ಕೆ ಹೋಗುತ್ತಾರೆ. ಯಾತ್ರೆಗೆ ಹೋಗುವವರಿಗೆ ಬೇಕಾದ  ವ್ಯವಸ್ಥೆಗೆ ಮುಂಚಿತವಾಗಿಯೇ ದೇವಸ್ಥಾನಕ್ಕೆ ತಿಳಿಸಬೇಕು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಹಾರಾಷ್ಟ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ 25,000 ಕೋಟಿ ರೂ. ಹೂಡಿಕೆ ಮಾಡಲಿದೆ

ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ  ರಾಜ್ಯ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ಕೃಷಿ…

3 minutes ago

ಆಶ್ಲೇಷ ನಕ್ಷತ್ರದಲ್ಲಿ ಬುಧ: ಈ 4 ರಾಶಿಗೆ ಹೆಜ್ಜೆ ಹೆಜ್ಜೆಗೂ ಕಂಟಕ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 minutes ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದರ್ಶಿತ್‌ ಕೆ ಎಸ್

ದರ್ಶಿತ್‌ ಕೆ ಎಸ್‌, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್‌ ಸ್ಕೂಲ್‌, ಬೆಳ್ಳಾರೆದರ್ಶಿತ್‌…

8 hours ago

ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ | ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…

10 hours ago

ಮೆಕ್ಕೆಜೋಳ ಸಮಾವೇಶ | ಕನಿಷ್ಠ ಬೆಂಬಲ ಬೆಲೆ ಮೂಲಕ ರೈತರ ಹಿತರಕ್ಷಣೆ

ದೇಶದಲ್ಲಿ ಮೆಕ್ಕೆಜೋಳ ಉತ್ಪಾದನೆ ಹೆಚ್ಚಳ ಮತ್ತು ಅಭಿವೃದ್ದಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಕನಿಷ್ಠ…

10 hours ago

ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಪ್ರದೇಶ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ನಿಷೇಧ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಯಾತ್ರಾ ಸ್ಥಳ ಘಾಟಿ ಕ್ಷೇತ್ರದ…

10 hours ago