ಕುಮಾರಪರ್ವತದಲ್ಲಿ ಪೂಜೆ | ವರ್ಷಕ್ಕೆ ಒಂದು ಬಾರಿ ನಡೆಯುವ ವಿಶೇಷ ಪೂಜೆ |

December 23, 2022
9:35 PM

ಕುಕ್ಕೆ ಸುಬ್ರಹ್ಮಣ್ಯದ ಕುಮಾರಪರ್ವತದ ತುದಿಯಲ್ಲಿ ಕುಮಾರ ಲಿಂಗಕ್ಕೆ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯ ಸಂಪ್ರದಾಯದಂತೆ ಪೂಜೆ ನೆರವೇರಿಸಿದರು.ದೇಗುಲದ ಆಡಳಿತ ಮಂಡಳಿ ಸೇರಿದಂತೆ ನೂರಾರು ಭಕ್ತರು ಕುಕ್ಕೆಯಿಂದ 18 ಕಿ.ಮೀ. ದೂರವಿರುವ ಎತ್ತರದ ಪರ್ವತ ಏರಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕುಕ್ಕೆ ಸುಬ್ರಹ್ಮಣ್ಯವು ನಾಗಾರಾಧನೆಯ ಪ್ರಮುಖ ಕ್ಷೇತ್ರ ಎನಿಸಿಕೊಂಡಿದೆ, ಜೊತೆಗೆ ಕುಕ್ಕೆಯ ಹಿಂದೆ ಇರುವ ಕುಮಾರಪರ್ವತವೂ ಪ್ರವಾಸಿ ತಾಣವಾಗಿದೆ. ಚಾರಣ ಪ್ರದೇಶವಾಗಿಯೂ ಗಮನ ಸೆಳೆದಿದೆ. ಕೇವಲ ಚಾರಣಕ್ಕೆ ಮಾತ್ರವಲ್ಲದೆ ಪೌರಾಣಿಕ ಹಾಗೂ ಧಾರ್ಮಿಕವಾಗಿಯೂ ಪ್ರಸಿದ್ಧಿ ಪಡೆದಿದೆ. ಕುಕ್ಕೆ ದೇವಸ್ಥಾನಕ್ಕೆ ಮತ್ತು ಕುಮಾರಪರ್ವತಕ್ಕೆ ಪವಿತ್ರ ಸಂಬಂಧವಿದ್ದು, ಪೂರ್ವ ಶಿಷ್ಠ ಸಂಪ್ರದಾಯದ ಪ್ರಕಾರ ನಡೆದ ಕುಮಾರಯಾತ್ರೆಯ ಕೊನೆಯಲ್ಲಿ ಅರ್ಚಕರು ಕುಮಾರಲಿಂಗದ ಮೂಲಕ ಕುಮಾರಪಾದಗಳಿಗೆ ಜಲಾಭಿಷೇಕ, ಸೀಯಾಳ ಅಭಿಷೇಕ ಮಾಡಿದರು.

ಬೆಳಗ್ಗೆ 5.30 ರ ಸಮಯದಲ್ಲಿ ದೇವಳದ ಮುಂಭಾಗದಿಂದ ಕುಮಾರ ಪರ್ವತ ಚಾರಣ ಆರಂಭಿಸಿ 18 ಕಿಮೀ ಯಾತ್ರೆಯ ಮೂಲಕ ಕುಮಾರ ಪರ್ವತ ತಲುಪಿ ಮಧ್ಯಾಹ್ನ ಪೂಜೆಯನ್ನು ನೆರೇವೇರಿಸಲಾಯಿತು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror