Advertisement
ಸುದ್ದಿಗಳು

ಕುಮಾರಪರ್ವತದಲ್ಲಿ ಪೂಜೆ | ವರ್ಷಕ್ಕೆ ಒಂದು ಬಾರಿ ನಡೆಯುವ ವಿಶೇಷ ಪೂಜೆ |

Share

ಕುಕ್ಕೆ ಸುಬ್ರಹ್ಮಣ್ಯದ ಕುಮಾರಪರ್ವತದ ತುದಿಯಲ್ಲಿ ಕುಮಾರ ಲಿಂಗಕ್ಕೆ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯ ಸಂಪ್ರದಾಯದಂತೆ ಪೂಜೆ ನೆರವೇರಿಸಿದರು.ದೇಗುಲದ ಆಡಳಿತ ಮಂಡಳಿ ಸೇರಿದಂತೆ ನೂರಾರು ಭಕ್ತರು ಕುಕ್ಕೆಯಿಂದ 18 ಕಿ.ಮೀ. ದೂರವಿರುವ ಎತ್ತರದ ಪರ್ವತ ಏರಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕುಕ್ಕೆ ಸುಬ್ರಹ್ಮಣ್ಯವು ನಾಗಾರಾಧನೆಯ ಪ್ರಮುಖ ಕ್ಷೇತ್ರ ಎನಿಸಿಕೊಂಡಿದೆ, ಜೊತೆಗೆ ಕುಕ್ಕೆಯ ಹಿಂದೆ ಇರುವ ಕುಮಾರಪರ್ವತವೂ ಪ್ರವಾಸಿ ತಾಣವಾಗಿದೆ. ಚಾರಣ ಪ್ರದೇಶವಾಗಿಯೂ ಗಮನ ಸೆಳೆದಿದೆ. ಕೇವಲ ಚಾರಣಕ್ಕೆ ಮಾತ್ರವಲ್ಲದೆ ಪೌರಾಣಿಕ ಹಾಗೂ ಧಾರ್ಮಿಕವಾಗಿಯೂ ಪ್ರಸಿದ್ಧಿ ಪಡೆದಿದೆ. ಕುಕ್ಕೆ ದೇವಸ್ಥಾನಕ್ಕೆ ಮತ್ತು ಕುಮಾರಪರ್ವತಕ್ಕೆ ಪವಿತ್ರ ಸಂಬಂಧವಿದ್ದು, ಪೂರ್ವ ಶಿಷ್ಠ ಸಂಪ್ರದಾಯದ ಪ್ರಕಾರ ನಡೆದ ಕುಮಾರಯಾತ್ರೆಯ ಕೊನೆಯಲ್ಲಿ ಅರ್ಚಕರು ಕುಮಾರಲಿಂಗದ ಮೂಲಕ ಕುಮಾರಪಾದಗಳಿಗೆ ಜಲಾಭಿಷೇಕ, ಸೀಯಾಳ ಅಭಿಷೇಕ ಮಾಡಿದರು.

ಬೆಳಗ್ಗೆ 5.30 ರ ಸಮಯದಲ್ಲಿ ದೇವಳದ ಮುಂಭಾಗದಿಂದ ಕುಮಾರ ಪರ್ವತ ಚಾರಣ ಆರಂಭಿಸಿ 18 ಕಿಮೀ ಯಾತ್ರೆಯ ಮೂಲಕ ಕುಮಾರ ಪರ್ವತ ತಲುಪಿ ಮಧ್ಯಾಹ್ನ ಪೂಜೆಯನ್ನು ನೆರೇವೇರಿಸಲಾಯಿತು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

5 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

5 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

19 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

23 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

1 day ago